ಮೇ 13ರಿಂದ ನಾಲ್ಕು ದಿನಗಳು ತರಕಾರಿ ಸಗಟು ಮಾರಾಟ ಸಂಪೂರ್ಣ ಸ್ಥಗಿತಗೊಳಿಸಲಾಗಿತ್ತು. ಈಗ ಮಾರಾಟಕ್ಕೆ ಅವಕಾಶ ನೀಡಿದರೂ, ಒಂದು ತಾಸಿಗೆ ಸೀಮಿತಗೊಳಿಸಲಾಗಿದೆ. ಅಷ್ಟು ಕಡಿಮೆ ಅವಧಿಯಲ್ಲಿ ಶೇ 20ರಷ್ಟೂ ತರಕಾರಿ ಮಾರಾಟ ಮಾಡಲು ಸಾಧ್ಯವಿಲ್ಲ. ತಮಿಳುನಾಡು, ಬೆಂಗಳೂರು, ತುಮಕೂರು ಸೇರಿದಂತೆ ಬೇರೆ ಭಾಗಗಳಿಂದ ತರಕಾರಿ ಮಾರುಕಟ್ಟೆಗೆ ಬರುತ್ತದೆ. ಉಳಿದರೆ ಮರು ಬಳಕೆ ಅಸಾಧ್ಯ. ಹಾಗಾಗಿ, ಉಳಿದ ಎಲ್ಲ ತರಕಾರಿ ರಸ್ತೆಗೆ ಎಸೆದಿದ್ದೇವೆ ಎಂದು ವರ್ತಕರು ಆಕ್ರೋಶ ವ್ಯಕ್ತಪಡಿಸಿದರು.