<p><strong>ಸಾಗರ: ನಗರಕ್ಕೆ ನೂತನ ಟ್ರಾಫಿಕ್ ಪೊಲೀಸ್ ಠಾಣೆಯನ್ನು ಮಂಜೂರು ಮಾಡುವಂತೆ ಕೋರಿ ಶಾಸಕ ಗೋಪಾಲಕೃಷ್ಣ ಬೇಳೂರು ಬುಧವಾರ ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.</strong></p>.<p><strong>ಸಾಗರವು, ದಿನೆ ದಿನೆ ಬೆಳೆಯುತ್ತಿರುವ ನಗರ ಪ್ರದೇಶವಾಗಿದ್ದು ಈಚಿನ ವರ್ಷಗಳಲ್ಲಿ ವಾಹನಗಳ ಸಂಖ್ಯೆ ಹೆಚ್ಚುತ್ತಿದೆ. ಇದೊಂದು ಪ್ರವಾಸಿ ಕೇಂದ್ರಗಳಿಂದ ಸುತ್ತುವರೆದ ಪ್ರದೇಶವಾಗಿರುವುದರಿಂದ ಸುಗಮ ವಾಹನ ಸಂಚಾರಕ್ಕೆ ನಗರವ್ಯಾಪ್ತಿಯಲ್ಲಿ ನೂತನ ಟ್ರಾಫಿಕ್ ಪೊಲೀಸ್ ಠಾಣೆ ಅತ್ಯಗತ್ಯವಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.</strong></p>.<p><strong>ನಾಡಿನ ಪ್ರಸಿದ್ಧ ಯಾತ್ರಾ ಕ್ಷೇತ್ರವಾಗಿರುವ ಸಿಗಂದೂರು ದೇವಸ್ಥಾನಕ್ಕೆ ಪ್ರತಿದಿನ ಸಾವಿರಾರು ಭಕ್ತಾಧಿಗಳು ಭೇಟಿ ನೀಡುತ್ತಿದ್ದಾರೆ. ಕ್ಷೇತ್ರಕ್ಕೆ ಸಮೀಪವಿರುವ ತುಮರಿ-ಬ್ಯಾಕೋಡು ಪ್ರದೇಶಕ್ಕೆ ನೂತನ ಪೊಲೀಸ್ ಠಾಣೆ ಮಂಜೂರು ಮಾಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ. </strong></p>.<p><strong>ಶಿಲ್ಪ ಗುರುಕುಲ ಕೊಠಡಿ ದುರಸ್ತಿಗೆ ₹65.80 ಲಕ್ಷ ಮಂಜೂರು: </strong></p>.<p><strong>ನಗರದ ಶ್ರೀಗಂಧ ಕಲಾ ಸಂಕೀರ್ಣದ ಶಿಲ್ಪ ಗುರುಕುಲದ ಶಿಕ್ಷಣ ಕೊಠಡಿ, ವಸತಿ ಗೃಹ, ಉಪಹಾರ ಗೃಹದ ದುರಸ್ತಿ ಕಾಮಗಾರಿಗೆ ರಾಜ್ಯ ಸರ್ಕಾರ ₹65.80 ಲಕ್ಷ ಮಂಜೂರು ಮಾಡಿ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.</strong></p>
<p><strong>ಸಾಗರ: ನಗರಕ್ಕೆ ನೂತನ ಟ್ರಾಫಿಕ್ ಪೊಲೀಸ್ ಠಾಣೆಯನ್ನು ಮಂಜೂರು ಮಾಡುವಂತೆ ಕೋರಿ ಶಾಸಕ ಗೋಪಾಲಕೃಷ್ಣ ಬೇಳೂರು ಬುಧವಾರ ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.</strong></p>.<p><strong>ಸಾಗರವು, ದಿನೆ ದಿನೆ ಬೆಳೆಯುತ್ತಿರುವ ನಗರ ಪ್ರದೇಶವಾಗಿದ್ದು ಈಚಿನ ವರ್ಷಗಳಲ್ಲಿ ವಾಹನಗಳ ಸಂಖ್ಯೆ ಹೆಚ್ಚುತ್ತಿದೆ. ಇದೊಂದು ಪ್ರವಾಸಿ ಕೇಂದ್ರಗಳಿಂದ ಸುತ್ತುವರೆದ ಪ್ರದೇಶವಾಗಿರುವುದರಿಂದ ಸುಗಮ ವಾಹನ ಸಂಚಾರಕ್ಕೆ ನಗರವ್ಯಾಪ್ತಿಯಲ್ಲಿ ನೂತನ ಟ್ರಾಫಿಕ್ ಪೊಲೀಸ್ ಠಾಣೆ ಅತ್ಯಗತ್ಯವಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.</strong></p>.<p><strong>ನಾಡಿನ ಪ್ರಸಿದ್ಧ ಯಾತ್ರಾ ಕ್ಷೇತ್ರವಾಗಿರುವ ಸಿಗಂದೂರು ದೇವಸ್ಥಾನಕ್ಕೆ ಪ್ರತಿದಿನ ಸಾವಿರಾರು ಭಕ್ತಾಧಿಗಳು ಭೇಟಿ ನೀಡುತ್ತಿದ್ದಾರೆ. ಕ್ಷೇತ್ರಕ್ಕೆ ಸಮೀಪವಿರುವ ತುಮರಿ-ಬ್ಯಾಕೋಡು ಪ್ರದೇಶಕ್ಕೆ ನೂತನ ಪೊಲೀಸ್ ಠಾಣೆ ಮಂಜೂರು ಮಾಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ. </strong></p>.<p><strong>ಶಿಲ್ಪ ಗುರುಕುಲ ಕೊಠಡಿ ದುರಸ್ತಿಗೆ ₹65.80 ಲಕ್ಷ ಮಂಜೂರು: </strong></p>.<p><strong>ನಗರದ ಶ್ರೀಗಂಧ ಕಲಾ ಸಂಕೀರ್ಣದ ಶಿಲ್ಪ ಗುರುಕುಲದ ಶಿಕ್ಷಣ ಕೊಠಡಿ, ವಸತಿ ಗೃಹ, ಉಪಹಾರ ಗೃಹದ ದುರಸ್ತಿ ಕಾಮಗಾರಿಗೆ ರಾಜ್ಯ ಸರ್ಕಾರ ₹65.80 ಲಕ್ಷ ಮಂಜೂರು ಮಾಡಿ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.</strong></p>