<p><strong>ಸಾಗರ: ನಗರಕ್ಕೆ ನೂತನ ಟ್ರಾಫಿಕ್ ಪೊಲೀಸ್ ಠಾಣೆಯನ್ನು ಮಂಜೂರು ಮಾಡುವಂತೆ ಕೋರಿ ಶಾಸಕ ಗೋಪಾಲಕೃಷ್ಣ ಬೇಳೂರು ಬುಧವಾರ ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.</strong></p>.<p><strong>ಸಾಗರವು, ದಿನೆ ದಿನೆ ಬೆಳೆಯುತ್ತಿರುವ ನಗರ ಪ್ರದೇಶವಾಗಿದ್ದು ಈಚಿನ ವರ್ಷಗಳಲ್ಲಿ ವಾಹನಗಳ ಸಂಖ್ಯೆ ಹೆಚ್ಚುತ್ತಿದೆ. ಇದೊಂದು ಪ್ರವಾಸಿ ಕೇಂದ್ರಗಳಿಂದ ಸುತ್ತುವರೆದ ಪ್ರದೇಶವಾಗಿರುವುದರಿಂದ ಸುಗಮ ವಾಹನ ಸಂಚಾರಕ್ಕೆ ನಗರವ್ಯಾಪ್ತಿಯಲ್ಲಿ ನೂತನ ಟ್ರಾಫಿಕ್ ಪೊಲೀಸ್ ಠಾಣೆ ಅತ್ಯಗತ್ಯವಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.</strong></p>.<p><strong>ನಾಡಿನ ಪ್ರಸಿದ್ಧ ಯಾತ್ರಾ ಕ್ಷೇತ್ರವಾಗಿರುವ ಸಿಗಂದೂರು ದೇವಸ್ಥಾನಕ್ಕೆ ಪ್ರತಿದಿನ ಸಾವಿರಾರು ಭಕ್ತಾಧಿಗಳು ಭೇಟಿ ನೀಡುತ್ತಿದ್ದಾರೆ. ಕ್ಷೇತ್ರಕ್ಕೆ ಸಮೀಪವಿರುವ ತುಮರಿ-ಬ್ಯಾಕೋಡು ಪ್ರದೇಶಕ್ಕೆ ನೂತನ ಪೊಲೀಸ್ ಠಾಣೆ ಮಂಜೂರು ಮಾಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ. </strong></p>.<p><strong>ಶಿಲ್ಪ ಗುರುಕುಲ ಕೊಠಡಿ ದುರಸ್ತಿಗೆ ₹65.80 ಲಕ್ಷ ಮಂಜೂರು: </strong></p>.<p><strong>ನಗರದ ಶ್ರೀಗಂಧ ಕಲಾ ಸಂಕೀರ್ಣದ ಶಿಲ್ಪ ಗುರುಕುಲದ ಶಿಕ್ಷಣ ಕೊಠಡಿ, ವಸತಿ ಗೃಹ, ಉಪಹಾರ ಗೃಹದ ದುರಸ್ತಿ ಕಾಮಗಾರಿಗೆ ರಾಜ್ಯ ಸರ್ಕಾರ ₹65.80 ಲಕ್ಷ ಮಂಜೂರು ಮಾಡಿ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: ನಗರಕ್ಕೆ ನೂತನ ಟ್ರಾಫಿಕ್ ಪೊಲೀಸ್ ಠಾಣೆಯನ್ನು ಮಂಜೂರು ಮಾಡುವಂತೆ ಕೋರಿ ಶಾಸಕ ಗೋಪಾಲಕೃಷ್ಣ ಬೇಳೂರು ಬುಧವಾರ ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.</strong></p>.<p><strong>ಸಾಗರವು, ದಿನೆ ದಿನೆ ಬೆಳೆಯುತ್ತಿರುವ ನಗರ ಪ್ರದೇಶವಾಗಿದ್ದು ಈಚಿನ ವರ್ಷಗಳಲ್ಲಿ ವಾಹನಗಳ ಸಂಖ್ಯೆ ಹೆಚ್ಚುತ್ತಿದೆ. ಇದೊಂದು ಪ್ರವಾಸಿ ಕೇಂದ್ರಗಳಿಂದ ಸುತ್ತುವರೆದ ಪ್ರದೇಶವಾಗಿರುವುದರಿಂದ ಸುಗಮ ವಾಹನ ಸಂಚಾರಕ್ಕೆ ನಗರವ್ಯಾಪ್ತಿಯಲ್ಲಿ ನೂತನ ಟ್ರಾಫಿಕ್ ಪೊಲೀಸ್ ಠಾಣೆ ಅತ್ಯಗತ್ಯವಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.</strong></p>.<p><strong>ನಾಡಿನ ಪ್ರಸಿದ್ಧ ಯಾತ್ರಾ ಕ್ಷೇತ್ರವಾಗಿರುವ ಸಿಗಂದೂರು ದೇವಸ್ಥಾನಕ್ಕೆ ಪ್ರತಿದಿನ ಸಾವಿರಾರು ಭಕ್ತಾಧಿಗಳು ಭೇಟಿ ನೀಡುತ್ತಿದ್ದಾರೆ. ಕ್ಷೇತ್ರಕ್ಕೆ ಸಮೀಪವಿರುವ ತುಮರಿ-ಬ್ಯಾಕೋಡು ಪ್ರದೇಶಕ್ಕೆ ನೂತನ ಪೊಲೀಸ್ ಠಾಣೆ ಮಂಜೂರು ಮಾಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ. </strong></p>.<p><strong>ಶಿಲ್ಪ ಗುರುಕುಲ ಕೊಠಡಿ ದುರಸ್ತಿಗೆ ₹65.80 ಲಕ್ಷ ಮಂಜೂರು: </strong></p>.<p><strong>ನಗರದ ಶ್ರೀಗಂಧ ಕಲಾ ಸಂಕೀರ್ಣದ ಶಿಲ್ಪ ಗುರುಕುಲದ ಶಿಕ್ಷಣ ಕೊಠಡಿ, ವಸತಿ ಗೃಹ, ಉಪಹಾರ ಗೃಹದ ದುರಸ್ತಿ ಕಾಮಗಾರಿಗೆ ರಾಜ್ಯ ಸರ್ಕಾರ ₹65.80 ಲಕ್ಷ ಮಂಜೂರು ಮಾಡಿ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>