ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಂಜಾ ಸಾಗಣೆ: ಆರೋಪಿಗಳ ಬಂಧನ

Last Updated 15 ಆಗಸ್ಟ್ 2020, 13:28 IST
ಅಕ್ಷರ ಗಾತ್ರ

ತೀರ್ಥಹಳ್ಳಿ: ಗಾಂಜಾ ಸಾಗಿಸುತ್ತಿದ್ದ ಆರೋಪ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ದ್ವಿಚಕ್ರ ವಾಹನದಲ್ಲಿ ಗಾಂಜಾ ತುಂಬಿದ ಚೀಲವನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಶುಕ್ರವಾರ ಪಟ್ಟಣದ ಬಾಳೇಬೈಲಿನಲ್ಲಿ ಪೊಲೀಸರು ಬೆನ್ನಟ್ಟಿ ಹಿಡಿದಿದ್ದಾರೆ.

ಶೃಂಗೇರಿ ವಾಸಿ ಯೋಗಪ್ಪ, ತೀರ್ಥಹಳ್ಳಿ ತಾಲ್ಲೂಕಿನ ದಂಡಿನಕೊಡಿಗೆಯ ದೀಪಕ್ ಬಂಧಿತರು. ₹ 62,500 ಮೌಲ್ಯದ ಎರಡೂವರೆ ಕೆ.ಜಿ. ಗಾಂಜಾ, 1 ದ್ವಿಚಕ್ರ ವಾಹನ, 2 ಮೊಬೈಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ತೀರ್ಥಹಳ್ಳಿ ಡಿವೈಎಸ್‌ಪಿ ಸಂತೋಷ್ ಡಿಸಿಐಬಿ ವಿಭಾಗದ ಸಿಪಿಐ ಕುಮಾರಸ್ವಾಮಿ ನೇತೃತ್ವದಲ್ಲಿ ದಾಳಿ ನಡೆಯಿತು.

ಕಾರು ವಶ:ಶನಿವಾರ ಬೆಳಿಗ್ಗೆ ಇಟಿಯೋಸ್ ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ 4 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಾರು, 5 ಮೊಬೈಲ್, ₹ 6,600 ನಗದು, 1 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ. ಭದ್ರಾವತಿಯ ಅರುಣ್, ರಂಜಿತ್, ಪ್ರದೀಪ್ ಯಾನೇ ಕಾಟು, ಕಿರಣ್ ಬಂಧಿತ ಆರೋಪಿಗಳು.

ತಹಶೀಲ್ದಾರ್ ಡಾ.ಎಸ್.ಬಿ. ಶ್ರೀಪಾದ್ ಮಹಜರ್ ಪ್ರಕ್ರಿಯೆ ನಡೆಸಿದರು. ಡಿವೈಎಸ್‌ಪಿ ಸಂತೋಷ್ ಮಾರ್ಗದರ್ಶನದಲ್ಲಿ ಸಿಪಿಐ ಪ್ರವೀಣ್ ನೀಲಮ್ಮನವರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತು. ಸಿಬ್ಬಂದಿ ಎಸ್. ಜಗದೀಶ್, ಲೋಕೇಶ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT