<p><strong>ತೀರ್ಥಹಳ್ಳಿ: </strong>ಗಾಂಜಾ ಸಾಗಿಸುತ್ತಿದ್ದ ಆರೋಪ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ದ್ವಿಚಕ್ರ ವಾಹನದಲ್ಲಿ ಗಾಂಜಾ ತುಂಬಿದ ಚೀಲವನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಶುಕ್ರವಾರ ಪಟ್ಟಣದ ಬಾಳೇಬೈಲಿನಲ್ಲಿ ಪೊಲೀಸರು ಬೆನ್ನಟ್ಟಿ ಹಿಡಿದಿದ್ದಾರೆ.</p>.<p>ಶೃಂಗೇರಿ ವಾಸಿ ಯೋಗಪ್ಪ, ತೀರ್ಥಹಳ್ಳಿ ತಾಲ್ಲೂಕಿನ ದಂಡಿನಕೊಡಿಗೆಯ ದೀಪಕ್ ಬಂಧಿತರು. ₹ 62,500 ಮೌಲ್ಯದ ಎರಡೂವರೆ ಕೆ.ಜಿ. ಗಾಂಜಾ, 1 ದ್ವಿಚಕ್ರ ವಾಹನ, 2 ಮೊಬೈಲ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.</p>.<p>ತೀರ್ಥಹಳ್ಳಿ ಡಿವೈಎಸ್ಪಿ ಸಂತೋಷ್ ಡಿಸಿಐಬಿ ವಿಭಾಗದ ಸಿಪಿಐ ಕುಮಾರಸ್ವಾಮಿ ನೇತೃತ್ವದಲ್ಲಿ ದಾಳಿ ನಡೆಯಿತು.</p>.<p>ಕಾರು ವಶ:ಶನಿವಾರ ಬೆಳಿಗ್ಗೆ ಇಟಿಯೋಸ್ ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ 4 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಾರು, 5 ಮೊಬೈಲ್, ₹ 6,600 ನಗದು, 1 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ. ಭದ್ರಾವತಿಯ ಅರುಣ್, ರಂಜಿತ್, ಪ್ರದೀಪ್ ಯಾನೇ ಕಾಟು, ಕಿರಣ್ ಬಂಧಿತ ಆರೋಪಿಗಳು.</p>.<p>ತಹಶೀಲ್ದಾರ್ ಡಾ.ಎಸ್.ಬಿ. ಶ್ರೀಪಾದ್ ಮಹಜರ್ ಪ್ರಕ್ರಿಯೆ ನಡೆಸಿದರು. ಡಿವೈಎಸ್ಪಿ ಸಂತೋಷ್ ಮಾರ್ಗದರ್ಶನದಲ್ಲಿ ಸಿಪಿಐ ಪ್ರವೀಣ್ ನೀಲಮ್ಮನವರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತು. ಸಿಬ್ಬಂದಿ ಎಸ್. ಜಗದೀಶ್, ಲೋಕೇಶ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ತೀರ್ಥಹಳ್ಳಿ: </strong>ಗಾಂಜಾ ಸಾಗಿಸುತ್ತಿದ್ದ ಆರೋಪ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ದ್ವಿಚಕ್ರ ವಾಹನದಲ್ಲಿ ಗಾಂಜಾ ತುಂಬಿದ ಚೀಲವನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಶುಕ್ರವಾರ ಪಟ್ಟಣದ ಬಾಳೇಬೈಲಿನಲ್ಲಿ ಪೊಲೀಸರು ಬೆನ್ನಟ್ಟಿ ಹಿಡಿದಿದ್ದಾರೆ.</p>.<p>ಶೃಂಗೇರಿ ವಾಸಿ ಯೋಗಪ್ಪ, ತೀರ್ಥಹಳ್ಳಿ ತಾಲ್ಲೂಕಿನ ದಂಡಿನಕೊಡಿಗೆಯ ದೀಪಕ್ ಬಂಧಿತರು. ₹ 62,500 ಮೌಲ್ಯದ ಎರಡೂವರೆ ಕೆ.ಜಿ. ಗಾಂಜಾ, 1 ದ್ವಿಚಕ್ರ ವಾಹನ, 2 ಮೊಬೈಲ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.</p>.<p>ತೀರ್ಥಹಳ್ಳಿ ಡಿವೈಎಸ್ಪಿ ಸಂತೋಷ್ ಡಿಸಿಐಬಿ ವಿಭಾಗದ ಸಿಪಿಐ ಕುಮಾರಸ್ವಾಮಿ ನೇತೃತ್ವದಲ್ಲಿ ದಾಳಿ ನಡೆಯಿತು.</p>.<p>ಕಾರು ವಶ:ಶನಿವಾರ ಬೆಳಿಗ್ಗೆ ಇಟಿಯೋಸ್ ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ 4 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಾರು, 5 ಮೊಬೈಲ್, ₹ 6,600 ನಗದು, 1 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ. ಭದ್ರಾವತಿಯ ಅರುಣ್, ರಂಜಿತ್, ಪ್ರದೀಪ್ ಯಾನೇ ಕಾಟು, ಕಿರಣ್ ಬಂಧಿತ ಆರೋಪಿಗಳು.</p>.<p>ತಹಶೀಲ್ದಾರ್ ಡಾ.ಎಸ್.ಬಿ. ಶ್ರೀಪಾದ್ ಮಹಜರ್ ಪ್ರಕ್ರಿಯೆ ನಡೆಸಿದರು. ಡಿವೈಎಸ್ಪಿ ಸಂತೋಷ್ ಮಾರ್ಗದರ್ಶನದಲ್ಲಿ ಸಿಪಿಐ ಪ್ರವೀಣ್ ನೀಲಮ್ಮನವರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತು. ಸಿಬ್ಬಂದಿ ಎಸ್. ಜಗದೀಶ್, ಲೋಕೇಶ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>