ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಬ್ಲಿಘಿಗಳಿಗೆ ಮದರಸಾಗಳಲ್ಲೇ ಚಕಿತ್ಸೆ: ಆಯನೂರು ಮಂಜುನಾಥ ಸಲಹೆ

Last Updated 11 ಮೇ 2020, 12:38 IST
ಅಕ್ಷರ ಗಾತ್ರ

ಶಿವಮೊಗ್ಗ:ಕೋವಿಡ್‌ನಿಂದ ಬಳಲುತ್ತಿರುವತಬ್ಲಿಗಿಗಳನ್ನು ಮದರಸಾ ಅಥವಾ ಅಲ್ಪಸಂಖ್ಯಾತರ ಶಾಲೆಗಳಲ್ಲೇ ಕ್ವಾರಂಟೈನ್ ಮಾಡಿ, ಚಿಕಿತ್ಸೆ ನೀಡಬೇಕು. ಅಲ್ಲಿ ಅವರು ಪ್ರಾರ್ಥನೆ ಸಲ್ಲಿಸಲು, ನೆಮ್ಮದಿಯಿಂದ ಇರಲು ಸಾಧ್ಯವಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಜಿಲ್ಲಾಡಳಿತಕ್ಕೆಸಲಹೆ ನೀಡಿದ್ದಾರೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು,ದೇಶದ ಅಲ್ಪಸಂಖ್ಯಾತ ಸಮುದಾಯದ ಧಾರ್ಮಿಕ,ರಾಜಕೀಯ ನಾಯಕರುಚಿಕಿತ್ಸೆಗೆ ಸಹಕಾರ ನೀಡದ ತಬ್ಲಿಗಿಗಳ ವರ್ತನೆ ಖಂಡಿಸಬೇಕು, ಅವರ ನಡೆ ನಿಯಂತ್ರಿಸಬೇಕು ಎಂದು ಹೇಳಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕು ಹರಡುವಲ್ಲಿ ಕಾರಣರಾಗಿರುವ ತಬ್ಲಿಗಿಗಳ ಮೇಲೆ ದಯೆ ತೋರಿಸುವ ಆವಶ್ಯಕತೆ ಇಲ್ಲ. ಅಲ್ಪಸಂಖ್ಯಾತ ಧಾರ್ಮಿಕಮತ್ತು ರಾಜಕೀಯ ನಾಯಕರುಅವರ ವರ್ತನೆಯನ್ನುಪರೋಕ್ಷವಾಗಿ ಬೆಂಬಲಿಸುತ್ತಿದ್ದಾರೆ ಎಂಬ ಶಂಕೆ ಇದೆ. ಇದರಿಂದ ಎಲ್ಲಾಅಲ್ಪಸಂಖ್ಯಾತರನ್ನೂಅನುಮಾನದಿಂದ ನೋಡುವಂತಾಗಿದೆ. ತಬ್ಲಿಗಿಗಳಿಗೆ ವಿದೇಶಿ ಭಯೋತ್ಪಾದಕರ ನಂಟಿದೆ ಎಂಬ ಸಂಶಯಕ್ಕೆ ಅವರ ವರ್ತನೆಗಳೇ ಕಾರಣಎಂದು ಆರೋಪಿಸಿದರು.

ಶಿವಮೊಗ್ಗದಲ್ಲಿ ಪತ್ತೆಯಾದ ಕೊರೊನಾ ಸೋಂಕಿತರಲ್ಲಿ ಇಬ್ಬರು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಅವರನ್ನು ಹಿಡಿಯಲಾಗಿದೆ. ಹಸಿರು ವಲಯವಾಗಿದ್ದ ಶಿವಮೊಗ್ಗ ಜಿಲ್ಲೆ ನೆಮ್ಮದಿಗೆ ಧಕ್ಕೆಯಾಗಿದೆ.ಜನರು ಆತಂಕ ಪಡುತ್ತಿದ್ದಾರೆ.ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ.ಪಕ್ಕದ ತಾಲ್ಲೂಕುಗಳಾದ ಹೊನ್ನಾಳಿ, ಚನ್ನಗಿರಿಯಲ್ಲೂ ತಬ್ಲಿಗಿಗಳ ಪ್ರವೇಶ ಆತಂಕ ಹೆಚ್ಚಿಸಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಕೆ.ಜಿ.ಕುಮಾರಸ್ವಾಮಿ, ಬಿಜೆಪಿ ಮುಖಂಡಎಚ್.ಸಿ.ಬಸವರಾಜಪ್ಪ, ಚಂದ್ರಶೇಖರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT