<p>ಸೊರಬ: ತಾಲ್ಲೂಕಿನ ಉಳವಿ ಸಮೀಪದ ಕರ್ಜಿಕೊಪ್ಪ ಗ್ರಾಮದ ಬಳಿ ಬೃಹತ್ ಮರವೊಂದು ಕ್ಯಾಂಟರ್ ವಾಹನದ ಮೇಲೆ ಬುಧವಾರ ಬೆಳಿಗ್ಗೆ ಉರುಳಿ ಬಿದ್ದು ಇಬ್ಬರು ಗಾಯಗೊಂಡಿದ್ದಾರೆ.</p>.<p>ಹಿರೇಕೆರೂರು ತಾಲ್ಲೂಕಿನ ಹದ್ರಿಹಳ್ಳಿ ಗ್ರಾಮದ ಹನುಮಂತಪ್ಪ ಮತ್ತು ವೀರೇಶ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಅವರಿಗೆ ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಸಾಗರಕ್ಕೆ ಕಳುಹಿಸಲಾಗಿದೆ.</p>.<p>ಹಿರೇಕೆರೂರಿನಿಂದ ಉಳವಿ ಗ್ರಾಮದಲ್ಲಿ ಗೊಬ್ಬರ ತುಂಬಲು ವಾಹನ ಹೊರಟಿದ್ದಾಗ ಅವಘಡ ಸಂಭವಿಸಿದೆ. ಘಟನೆಯಿಂದ ಕೆಲಕಾಲ ಸಂಚಾರಕ್ಕೆ ತೊಂದರೆಯಾಗಿದ್ದು ಅಗ್ನಿಶಾಮಕ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮರವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.</p>.<p>‘ಒಣಗಿ ಬೀಳುವಂತಿರುವ ಮರಗಳನ್ನು ಕಡಿಯುವ ಮೂಲಕ ಹೆಚ್ಚಿನ ಅನಾಹುತ ತಪ್ಪಿಸಬೇಕು’ ಎಂದು ಸ್ಥಳೀಯರು ಹಾಗೂ ವಾಹನ ಸವಾರರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸೊರಬ: ತಾಲ್ಲೂಕಿನ ಉಳವಿ ಸಮೀಪದ ಕರ್ಜಿಕೊಪ್ಪ ಗ್ರಾಮದ ಬಳಿ ಬೃಹತ್ ಮರವೊಂದು ಕ್ಯಾಂಟರ್ ವಾಹನದ ಮೇಲೆ ಬುಧವಾರ ಬೆಳಿಗ್ಗೆ ಉರುಳಿ ಬಿದ್ದು ಇಬ್ಬರು ಗಾಯಗೊಂಡಿದ್ದಾರೆ.</p>.<p>ಹಿರೇಕೆರೂರು ತಾಲ್ಲೂಕಿನ ಹದ್ರಿಹಳ್ಳಿ ಗ್ರಾಮದ ಹನುಮಂತಪ್ಪ ಮತ್ತು ವೀರೇಶ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಅವರಿಗೆ ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಸಾಗರಕ್ಕೆ ಕಳುಹಿಸಲಾಗಿದೆ.</p>.<p>ಹಿರೇಕೆರೂರಿನಿಂದ ಉಳವಿ ಗ್ರಾಮದಲ್ಲಿ ಗೊಬ್ಬರ ತುಂಬಲು ವಾಹನ ಹೊರಟಿದ್ದಾಗ ಅವಘಡ ಸಂಭವಿಸಿದೆ. ಘಟನೆಯಿಂದ ಕೆಲಕಾಲ ಸಂಚಾರಕ್ಕೆ ತೊಂದರೆಯಾಗಿದ್ದು ಅಗ್ನಿಶಾಮಕ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮರವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.</p>.<p>‘ಒಣಗಿ ಬೀಳುವಂತಿರುವ ಮರಗಳನ್ನು ಕಡಿಯುವ ಮೂಲಕ ಹೆಚ್ಚಿನ ಅನಾಹುತ ತಪ್ಪಿಸಬೇಕು’ ಎಂದು ಸ್ಥಳೀಯರು ಹಾಗೂ ವಾಹನ ಸವಾರರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>