‘ಬೇಡಿಕೆ ಈಡೇರಿಕೆಗಾಗಿ ಕಳೆದತಿಂಗಳು ಸಿಮ್ಸ್ ಎದುರು ಶಾಂತಿಯುತವಾಗಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾಗ ಮುಖಂಡರ ವಿರುದ್ಧವೇ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಅದನ್ನು ಗೌಪ್ಯವಾಗಿಟ್ಟು ಮಧ್ಯರಾತ್ರಿ ಏಕಾಏಕಿ ನನ್ನನ್ನು ಹಾಗೂ ಸಂಘಟನೆಯ ಕಾರ್ಯದರ್ಶಿ ವೆಂಕಟೇಶ್ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. 19 ದಿನಗಳ ನಂತರ ಜಾಮೀನು ಪಡೆದು ಹೊರಬಂದಿದ್ದೇವೆ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.