ಜಿಲ್ಲಾಧಿಕಾರಿ ಮತ್ತು ಅವರ ತಂಡದ ಕಾರ್ಯ ವೈಖರಿ ಉತ್ತಮವಾಗಿದೆ. ಆದರೆ, ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಆಸ್ಪತ್ರೆಗಳ ಸಂಖ್ಯೆ ಹೆಚ್ಚಿಸುವ ಅಗತ್ಯವಿದೆ. ಐಸಿಯುಗಳು, ತಜ್ಞ ವೈದ್ಯರು, ಆಮ್ಲಜನಕದ ಕೊರತೆ ನೀಗಿಸಬೇಕಿದೆ. ಈಗಾಗಲೇ ಶಿವಮೊಗ್ಗ ನಗರದ ಜನರು ಭಯಬೀತರಾಗಿದ್ದಾರೆ. ಕೋವಿಡ್ ಪರೀಕ್ಷೆಗಳ ಸಂಖ್ಯೆಯನ್ನೂ ಹೆಚ್ಚಿಸಬೇಕು ಎಂದು ಒತ್ತಾಯಿಸಿದ್ದಾರೆ.