<p><strong>ಶಿವಮೊಗ್ಗ: </strong>ಕ್ಷಯ ರೋಗ ನಿಯಂತ್ರಣಕ್ಕೆ ಹಲವು ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗಿದೆ. 2025ಕ್ಕೆ ಕ್ಷಯ ರೋಗ ಮುಕ್ತ ರಾಜ್ಯ ನಿರ್ಮಾಣಕ್ಕಾಗಿ ಸಂಕಲ್ಪ ಮಾಡಲಾಗಿದೆ ಎಂದು ಕ್ಷಯ ರೋಗ ಘಟಕದ ನೋಡಲ್ ಅಧಿಕಾರಿ ಡಾ.ಅನಿಲ್ ಹೇಳಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಪಕ್ಕದಲ್ಲಿ ನಿರ್ಮಿಸಿರುವ ಕ್ಷಯ ರೋಗ ಪ್ರಯೋಗಾಲಯವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ದೇಶದಲ್ಲಿ ಸುಮಾರು 26 ಲಕ್ಷ ಮಂದಿ ಕ್ಷಯರೋಗ ಬಾಧಿತರಿದ್ದಾರೆ. ಪ್ರತಿವರ್ಷ 4 ಲಕ್ಷ ಮಂದಿ ಮರಣ ಹೊಂದುತ್ತಿದ್ದಾರೆ. ಕೊರೊನಾ ಸಮಯದಲ್ಲಿ ರಾಜ್ಯದ 57 ಸಾವಿರ ಮಂದಿಗೆ ಕ್ಷಯ ರೋಗ ನಿಯಂತ್ರಣಕ್ಕೆ ಚಿಕಿತ್ಸೆ ನೀಡಲಾಗಿದೆ. ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಸಂಘಟಿತ ಪ್ರಯತ್ನದಿಂದ ಕ್ಷಯ ರೋಗ ನಿಯಂತ್ರಿಸಲು ಸಾಧ್ಯವಿದೆ. ಈ ಅವಧಿಯಲ್ಲಿ ರೋಗದ ನಿಯಂತ್ರಣಕ್ಕಾಗಿ ಹಲವು ಪ್ರಯೋಗಗಳನ್ನು ನಡೆಸಲಾಗಿದೆ ಎಂದು ವಿವರ ನೀಡಿದರು.</p>.<p>ಪ್ರಯೋಗಾಲಯ ಉದ್ಘಾಟಿಸಿದ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಮಾತನಾಡಿ, ‘ಕೊರೊನಾ ವೇಳೆ ಆರೋಗ್ಯ ಇಲಾಖೆ ಸಿಬ್ಬಂದಿ, ವೈದ್ಯಾಧಿಕಾರಿಗಳು ಮತ್ತು ತಂತ್ರಜ್ಞರ ಸಂಘಟಿತ ಪ್ರಯತ್ನದಿಂದ ಸಾರ್ವಜನಿಕ ಆರೋಗ್ಯ ರಕ್ಷಣೆಯಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಲಾಗಿದೆ’ ಎಂದು ಹೇಳಿದರು.</p>.<p>ಜಿಲ್ಲೆಯ ಜನರ ಆರೋಗ್ಯ ಸಮಸ್ಯೆಗಳ ಸಕಾಲಿಕ ಪರಿಹಾರಕ್ಕೆ ಸರ್ಕಾರ ಎಲ್ಲಾ ಸಮಯದಲ್ಲೂ ಅಗತ್ಯ ನೆರವು ನೀಡಿ ಸಹಕರಿಸಿದ್ದಾರೆ. ಉತ್ತಮ ಸೇವೆ ಒದಗಿಸಲು ಸಾಧ್ಯವಾಗಿದೆ ಎಂದು ಹೇಳಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗೀಹಳ್ಳಿ, ಕ್ಷಯ ರೋಗ ನಿಯಂತ್ರಣಕ್ಕಾಗಿ ಮೊದಲ ಚಿಕಿತ್ಸಾ ಪ್ರಯೋಗಾಲಯ ಶಿವಮೊಗ್ಗದಲ್ಲಿ ಆರಂಭಗೊಂಡಿರುವುದು ಸಂತಸ ತಂದಿದೆ’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್. ವೈಶಾಲಿ, ಡಾ.ಅನಿಲ್, ಡಾ.ಸ್ಫೂರ್ತಿಗೌಡ, ಪರಿಮಾಣು ಕ್ರಿಮಿ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ.ರಘುನಂದನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಕ್ಷಯ ರೋಗ ನಿಯಂತ್ರಣಕ್ಕೆ ಹಲವು ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗಿದೆ. 2025ಕ್ಕೆ ಕ್ಷಯ ರೋಗ ಮುಕ್ತ ರಾಜ್ಯ ನಿರ್ಮಾಣಕ್ಕಾಗಿ ಸಂಕಲ್ಪ ಮಾಡಲಾಗಿದೆ ಎಂದು ಕ್ಷಯ ರೋಗ ಘಟಕದ ನೋಡಲ್ ಅಧಿಕಾರಿ ಡಾ.ಅನಿಲ್ ಹೇಳಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಪಕ್ಕದಲ್ಲಿ ನಿರ್ಮಿಸಿರುವ ಕ್ಷಯ ರೋಗ ಪ್ರಯೋಗಾಲಯವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ದೇಶದಲ್ಲಿ ಸುಮಾರು 26 ಲಕ್ಷ ಮಂದಿ ಕ್ಷಯರೋಗ ಬಾಧಿತರಿದ್ದಾರೆ. ಪ್ರತಿವರ್ಷ 4 ಲಕ್ಷ ಮಂದಿ ಮರಣ ಹೊಂದುತ್ತಿದ್ದಾರೆ. ಕೊರೊನಾ ಸಮಯದಲ್ಲಿ ರಾಜ್ಯದ 57 ಸಾವಿರ ಮಂದಿಗೆ ಕ್ಷಯ ರೋಗ ನಿಯಂತ್ರಣಕ್ಕೆ ಚಿಕಿತ್ಸೆ ನೀಡಲಾಗಿದೆ. ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಸಂಘಟಿತ ಪ್ರಯತ್ನದಿಂದ ಕ್ಷಯ ರೋಗ ನಿಯಂತ್ರಿಸಲು ಸಾಧ್ಯವಿದೆ. ಈ ಅವಧಿಯಲ್ಲಿ ರೋಗದ ನಿಯಂತ್ರಣಕ್ಕಾಗಿ ಹಲವು ಪ್ರಯೋಗಗಳನ್ನು ನಡೆಸಲಾಗಿದೆ ಎಂದು ವಿವರ ನೀಡಿದರು.</p>.<p>ಪ್ರಯೋಗಾಲಯ ಉದ್ಘಾಟಿಸಿದ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಮಾತನಾಡಿ, ‘ಕೊರೊನಾ ವೇಳೆ ಆರೋಗ್ಯ ಇಲಾಖೆ ಸಿಬ್ಬಂದಿ, ವೈದ್ಯಾಧಿಕಾರಿಗಳು ಮತ್ತು ತಂತ್ರಜ್ಞರ ಸಂಘಟಿತ ಪ್ರಯತ್ನದಿಂದ ಸಾರ್ವಜನಿಕ ಆರೋಗ್ಯ ರಕ್ಷಣೆಯಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಲಾಗಿದೆ’ ಎಂದು ಹೇಳಿದರು.</p>.<p>ಜಿಲ್ಲೆಯ ಜನರ ಆರೋಗ್ಯ ಸಮಸ್ಯೆಗಳ ಸಕಾಲಿಕ ಪರಿಹಾರಕ್ಕೆ ಸರ್ಕಾರ ಎಲ್ಲಾ ಸಮಯದಲ್ಲೂ ಅಗತ್ಯ ನೆರವು ನೀಡಿ ಸಹಕರಿಸಿದ್ದಾರೆ. ಉತ್ತಮ ಸೇವೆ ಒದಗಿಸಲು ಸಾಧ್ಯವಾಗಿದೆ ಎಂದು ಹೇಳಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗೀಹಳ್ಳಿ, ಕ್ಷಯ ರೋಗ ನಿಯಂತ್ರಣಕ್ಕಾಗಿ ಮೊದಲ ಚಿಕಿತ್ಸಾ ಪ್ರಯೋಗಾಲಯ ಶಿವಮೊಗ್ಗದಲ್ಲಿ ಆರಂಭಗೊಂಡಿರುವುದು ಸಂತಸ ತಂದಿದೆ’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್. ವೈಶಾಲಿ, ಡಾ.ಅನಿಲ್, ಡಾ.ಸ್ಫೂರ್ತಿಗೌಡ, ಪರಿಮಾಣು ಕ್ರಿಮಿ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ.ರಘುನಂದನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>