<p><strong>ತುಮರಿ</strong>: ನೀರು ಪೂರೈಕೆ ಇಲ್ಲದ್ದರಿಂದ ಅಡುಗೆ ಸಿದ್ಧಪಡಿಸುವುದು ಸಾಧ್ಯವಾಗುತ್ತಿಲ್ಲ. ಕಾರಣ ಕರೂರು ಹೋಬಳಿ ವ್ಯಾಪ್ತಿಯ ಕುದರೂರು ಗ್ರಾಮದ ಬೆಳಮಕ್ಕಿ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಮೇ 21ರಿಂದ ಪೌಷ್ಟಿಕ ಆಹಾರ ಕೊಡಲು ಸಾಧ್ಯವಾಗಿಲ್ಲ.</p>.<p>ನೀರು ಪೂರೈಕೆ ಮಾಡುವಂತೆ ಗ್ರಾಮ ಪಂಚಾಯಿತಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಂಗನವಾಡಿ ಕಾರ್ಯಕರ್ತೆ ವೇದಾವತಿ ಹೇಳುತ್ತಾರೆ.</p>.<p>‘ಅಂಗನವಾಡಿ ಕೇಂದ್ರಕ್ಕೆ ಜಲಜೀವನ್ ಮಿಷನ್ ಅಡಿ ಎರಡು ನಳಗಳ ಸಂಪರ್ಕ ಇದ್ದರೂ ನೀರು ಬರುತ್ತಿಲ್ಲ. ಬೇಸಿಗೆಯಲ್ಲಿ ಪಕ್ಕದಲ್ಲಿ ಇರುವ ಸರ್ಕಾರಿ ಶಾಲೆಯ ಬಾವಿಯಿಂದ ನೀರು ತಂದು ಅಡುಗೆ ಮಾಡಿದ್ದೇವೆ’ ಎಂದು ಅಂಗನವಾಡಿ ಸಹಾಯಕಿ ಸುಜಾತಾ ಹೇಳುತ್ತಾರೆ.</p>.<p>‘ಸರ್ಕಾರಿ ಶಾಲೆ ಹಾಗೂ ಅಂಗನವಾಡಿಗೆ ಕುಡಿಯುವ ನೀರಿಗಾಗಿ ₹ 75,000 ಮೀಸಲಿಡಲಾಗಿದೆ. ಆದರೆ, ನೀರಿನ ಸಂಪರ್ಕ ನೀಡಲಾಗಿಲ್ಲ. ಶೀಘ್ರವೇ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಕುದರೂರು ಗ್ರಾಮ ಪಂಚಾಯ್ತಿ ಪಿಡಿಒ ವಿಶ್ವನಾಥ್ ಪಟ್ಟಣಶೆಟ್ಟಿ ತಿಳಿಸಿದ್ದಾರೆ.</p>.<div><blockquote>ಮಕ್ಕಳನ್ನು ಉಪವಾಸ ಕಳುಹಿಸುವುದು ಸರಿಯಲ್ಲ. ನೀರಿನ ಸಮಸ್ಯೆ ಇರುವ ಬಗ್ಗೆ ಇಲಾಖೆಯ ಮೇಲ್ವಿಚಾರಕರು ಇದುವರೆಗೆ ಯಾವುದೇ ಮಾಹಿತಿ ನೀಡಿಲ್ಲ ಅವರಿಗೆ ನೋಟಿಸ್ ನೀಡಲಾಗುವುದು</blockquote><span class="attribution">ಮಂಜುನಾಥ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಾಗರ </span></div>.<p> <strong>ಮನವಿಗೆ ಸ್ಪಂದನೆ ದೊರೆತಿಲ್ಲ..</strong> </p><p>‘ಅಂಗನವಾಡಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವಂತೆ ಗ್ರಾಮ ಪಂಚಾಯ್ತಿಗೆ ಹಲವಾರು ಬಾರಿ ಮನವಿ ಮಾಡಿದ್ದೇವೆ. ಜಲಜೀವನ್ ಮಿಷನ್ ಅಡಿಯ ಸಂಪರ್ಕ ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ. ಹೀಗೇ ಮುಂದುವರಿದರೆ ಮಕ್ಕಳಿಗೆ ಅಡುಗೆ ತಯಾರಿಸಲು ಸಮಸ್ಯೆ ಆಗಲಿದೆ’ ಎಂದು ವೇದಾವತಿ ಅಳಲು ತೋಡಿಕೊಳ್ಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮರಿ</strong>: ನೀರು ಪೂರೈಕೆ ಇಲ್ಲದ್ದರಿಂದ ಅಡುಗೆ ಸಿದ್ಧಪಡಿಸುವುದು ಸಾಧ್ಯವಾಗುತ್ತಿಲ್ಲ. ಕಾರಣ ಕರೂರು ಹೋಬಳಿ ವ್ಯಾಪ್ತಿಯ ಕುದರೂರು ಗ್ರಾಮದ ಬೆಳಮಕ್ಕಿ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಮೇ 21ರಿಂದ ಪೌಷ್ಟಿಕ ಆಹಾರ ಕೊಡಲು ಸಾಧ್ಯವಾಗಿಲ್ಲ.</p>.<p>ನೀರು ಪೂರೈಕೆ ಮಾಡುವಂತೆ ಗ್ರಾಮ ಪಂಚಾಯಿತಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಂಗನವಾಡಿ ಕಾರ್ಯಕರ್ತೆ ವೇದಾವತಿ ಹೇಳುತ್ತಾರೆ.</p>.<p>‘ಅಂಗನವಾಡಿ ಕೇಂದ್ರಕ್ಕೆ ಜಲಜೀವನ್ ಮಿಷನ್ ಅಡಿ ಎರಡು ನಳಗಳ ಸಂಪರ್ಕ ಇದ್ದರೂ ನೀರು ಬರುತ್ತಿಲ್ಲ. ಬೇಸಿಗೆಯಲ್ಲಿ ಪಕ್ಕದಲ್ಲಿ ಇರುವ ಸರ್ಕಾರಿ ಶಾಲೆಯ ಬಾವಿಯಿಂದ ನೀರು ತಂದು ಅಡುಗೆ ಮಾಡಿದ್ದೇವೆ’ ಎಂದು ಅಂಗನವಾಡಿ ಸಹಾಯಕಿ ಸುಜಾತಾ ಹೇಳುತ್ತಾರೆ.</p>.<p>‘ಸರ್ಕಾರಿ ಶಾಲೆ ಹಾಗೂ ಅಂಗನವಾಡಿಗೆ ಕುಡಿಯುವ ನೀರಿಗಾಗಿ ₹ 75,000 ಮೀಸಲಿಡಲಾಗಿದೆ. ಆದರೆ, ನೀರಿನ ಸಂಪರ್ಕ ನೀಡಲಾಗಿಲ್ಲ. ಶೀಘ್ರವೇ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಕುದರೂರು ಗ್ರಾಮ ಪಂಚಾಯ್ತಿ ಪಿಡಿಒ ವಿಶ್ವನಾಥ್ ಪಟ್ಟಣಶೆಟ್ಟಿ ತಿಳಿಸಿದ್ದಾರೆ.</p>.<div><blockquote>ಮಕ್ಕಳನ್ನು ಉಪವಾಸ ಕಳುಹಿಸುವುದು ಸರಿಯಲ್ಲ. ನೀರಿನ ಸಮಸ್ಯೆ ಇರುವ ಬಗ್ಗೆ ಇಲಾಖೆಯ ಮೇಲ್ವಿಚಾರಕರು ಇದುವರೆಗೆ ಯಾವುದೇ ಮಾಹಿತಿ ನೀಡಿಲ್ಲ ಅವರಿಗೆ ನೋಟಿಸ್ ನೀಡಲಾಗುವುದು</blockquote><span class="attribution">ಮಂಜುನಾಥ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಾಗರ </span></div>.<p> <strong>ಮನವಿಗೆ ಸ್ಪಂದನೆ ದೊರೆತಿಲ್ಲ..</strong> </p><p>‘ಅಂಗನವಾಡಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವಂತೆ ಗ್ರಾಮ ಪಂಚಾಯ್ತಿಗೆ ಹಲವಾರು ಬಾರಿ ಮನವಿ ಮಾಡಿದ್ದೇವೆ. ಜಲಜೀವನ್ ಮಿಷನ್ ಅಡಿಯ ಸಂಪರ್ಕ ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ. ಹೀಗೇ ಮುಂದುವರಿದರೆ ಮಕ್ಕಳಿಗೆ ಅಡುಗೆ ತಯಾರಿಸಲು ಸಮಸ್ಯೆ ಆಗಲಿದೆ’ ಎಂದು ವೇದಾವತಿ ಅಳಲು ತೋಡಿಕೊಳ್ಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>