<p><strong>ತುಮರಿ</strong>: ತಾಲ್ಲೂಕಿನ ಕರೂರು, ಬಾರಂಗಿ ಹೋಬಳಿ ವ್ಯಾಪ್ತಿಯ ಹಲವು ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ಆರೋಪದ ಮೇರೆಗೆ ಅಬಕಾರಿ ಇಲಾಖೆ ಅಧಿಕಾರಿಗಳ ತಂಡ ಬುಧವಾರ ತಡರಾತ್ರಿ 8 ಸ್ಥಳಗಳ ಮೇಲೆ ದಾಳಿ ನಡೆಸಿ 3 ಪ್ರಕರಣಗಳನ್ನು ದಾಖಲಿಸಿಕೊಂಡಿದೆ. </p>.<p>ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟದ ಕುರಿತು ಮಾರ್ಚ್ 26 ರಂದು ‘ಹಳ್ಳಿಹಳ್ಳಿಯಲ್ಲೂ ಅಕ್ರಮ ಮದ್ಯದ ಹೊಳೆ’ ಶೀರ್ಷಿಕೆಯಡಿ ‘ಪ್ರಜಾವಾಣಿ’ ವಿಶೇಷ ವರದಿ ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಅಧಿಕಾರಿಗಳು ದಾಳಿ ನಡೆಸಿ, ತನಿಖೆ ಕೈಗೊಂಡಿದ್ದಾರೆ.</p>.<p>ಇಲ್ಲಿನ ಕರೂರು ಹೋಬಳಿಯ ಹೊಸಕೊಪ್ಪ, ಕಾರಣಿ, ಕಟ್ಟಿನಕಾರು ನೆಲ್ಲಿಬೀಡು, ಹಾರಿಗೆ, ಬ್ಯಾಕೋಡು, ತುಮರಿ ಹೋಟೆಲ್ ಹಾಗೂ ಮದ್ಯ ಮಾರಾಟ ಮಳಿಗೆ, ಬಾರಂಗಿ ಹೋಬಳಿಯ ಬಿಳಿಗಾರು ಅಂಗಡಿ, ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಯಿತು. 3 ಲೀಟರ್ ಮದ್ಯ ವಶಕ್ಕೆ ತೆಗೆದುಕೊಳ್ಳಲಾಗಿದೆ.</p>.<p>ಕಿರಾಣಿ ಅಂಗಡಿ ಮಾಲೀಕರಿಗೆ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದು ಎಂದು ಅಬಕಾರಿ ಸಬ್ ಇನ್ಸ್ಪೆಕ್ಟರ್ ಸಂದೀಪ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮರಿ</strong>: ತಾಲ್ಲೂಕಿನ ಕರೂರು, ಬಾರಂಗಿ ಹೋಬಳಿ ವ್ಯಾಪ್ತಿಯ ಹಲವು ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ಆರೋಪದ ಮೇರೆಗೆ ಅಬಕಾರಿ ಇಲಾಖೆ ಅಧಿಕಾರಿಗಳ ತಂಡ ಬುಧವಾರ ತಡರಾತ್ರಿ 8 ಸ್ಥಳಗಳ ಮೇಲೆ ದಾಳಿ ನಡೆಸಿ 3 ಪ್ರಕರಣಗಳನ್ನು ದಾಖಲಿಸಿಕೊಂಡಿದೆ. </p>.<p>ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟದ ಕುರಿತು ಮಾರ್ಚ್ 26 ರಂದು ‘ಹಳ್ಳಿಹಳ್ಳಿಯಲ್ಲೂ ಅಕ್ರಮ ಮದ್ಯದ ಹೊಳೆ’ ಶೀರ್ಷಿಕೆಯಡಿ ‘ಪ್ರಜಾವಾಣಿ’ ವಿಶೇಷ ವರದಿ ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಅಧಿಕಾರಿಗಳು ದಾಳಿ ನಡೆಸಿ, ತನಿಖೆ ಕೈಗೊಂಡಿದ್ದಾರೆ.</p>.<p>ಇಲ್ಲಿನ ಕರೂರು ಹೋಬಳಿಯ ಹೊಸಕೊಪ್ಪ, ಕಾರಣಿ, ಕಟ್ಟಿನಕಾರು ನೆಲ್ಲಿಬೀಡು, ಹಾರಿಗೆ, ಬ್ಯಾಕೋಡು, ತುಮರಿ ಹೋಟೆಲ್ ಹಾಗೂ ಮದ್ಯ ಮಾರಾಟ ಮಳಿಗೆ, ಬಾರಂಗಿ ಹೋಬಳಿಯ ಬಿಳಿಗಾರು ಅಂಗಡಿ, ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಯಿತು. 3 ಲೀಟರ್ ಮದ್ಯ ವಶಕ್ಕೆ ತೆಗೆದುಕೊಳ್ಳಲಾಗಿದೆ.</p>.<p>ಕಿರಾಣಿ ಅಂಗಡಿ ಮಾಲೀಕರಿಗೆ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದು ಎಂದು ಅಬಕಾರಿ ಸಬ್ ಇನ್ಸ್ಪೆಕ್ಟರ್ ಸಂದೀಪ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>