<p><strong>ಶಿವಮೊಗ್ಗ: </strong>ಸಂವಿಧಾನವನ್ನು ಅರ್ಥಮಾಡಿಕೊಳ್ಳುವ ಮೊದಲು ವಿವಿಧತೆಯಲ್ಲಿ ಏಕತೆ ಇರುವ ಭಾರತ ದೇಶವನ್ನು ಅರ್ಥಮಾಡಿಕೊಳ್ಳಬೇಕು ಎಂದು ವಕೀಲ ಕೆ.ಪಿ. ಶ್ರೀಪಾಲ್ ಹೇಳಿದರು.</p>.<p>ನಗರದ ಕಟೀಲು ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಶನಿವಾರ ಮಾನಸ ಟ್ರಸ್ಟ್ ಮತ್ತು ಕಟೀಲು ಅಶೋಕ್ ಪೈ ಸ್ಮಾರಕ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಐಕ್ಯೂಎಸಿ ವಿಭಾಗ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ವಿವಿಧ ಸಂಪ್ರದಾಯಗಳು ಮತ್ತು ಆಚರಣೆಗಳು ಇರುವ ಈ ದೇಶದಲ್ಲಿ ಇಡೀ ದೇಶಕ್ಕಾಗಿ ಇರುವ ಏಕೈಕ ಗ್ರಂಥವೆಂದರೆ ಅದು ಸಂವಿಧಾನ. ವಿವಿಧ ಧರ್ಮಗಳಿಗೆ ಅವರವರ ಪವಿತ್ರ ಧರ್ಮಗ್ರಂಥಗಳಿರಬಹುದು. ಆದರೆ ಇಡೀ ದೇಶದ ಜನರ ಹಕ್ಕುಗಳನ್ನು ರಕ್ಷಿಸುವ ಏಕೈಕ ಗ್ರಂಥ ಸಂವಿಧಾನ ಎಂದರು.<br /><br />ಸಂವಿಧಾನ ಇಲ್ಲದಿದ್ದಲ್ಲಿ ಹಿಂದುಳಿದ ವರ್ಗದವರು ಮತ್ತು ಕಡು ಬಡವರು ಉನ್ನತ ಸ್ಥಾನಕ್ಕೆ ಏರುತ್ತಿರಲಿಲ್ಲ. ಪರಿಶಿಷ್ಟ ಸಮುದಾಯದ ಮಹಿಳೆಯೊಬ್ಬರು ರಾಷ್ಟ್ರಪತಿಯಾಗಲು ಸಂವಿಧಾನವೇ ಕಾರಣ. ಸಾಮಾಜಿಕ ನ್ಯಾಯ, ಹೆಣ್ಣು-ಗಂಡು ಎಲ್ಲರೂ ಸಮಾನರು ಎಂಬುದು ಸಂವಿಧಾನದ ತತ್ವ ಎಂದು ಹೇಳಿದರು.</p>.<p>ಪ್ರಾಂಶುಪಾಲರಾದ ಡಾ. ಸಂಧ್ಯಾ ಕಾವೇರಿ ಅಧ್ಯಕ್ಷತೆ ವಹಿಸಿದ್ದರು.ಎಂಸಿಸಿಎಸ್ ನಿರ್ದೇಶಕ ಡಾ.ರಾಜೇಂದ್ರ ಚೆನ್ನಿ, ಮನಃಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಅರ್ಚನ ಕೆ. ಭಟ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಸಂವಿಧಾನವನ್ನು ಅರ್ಥಮಾಡಿಕೊಳ್ಳುವ ಮೊದಲು ವಿವಿಧತೆಯಲ್ಲಿ ಏಕತೆ ಇರುವ ಭಾರತ ದೇಶವನ್ನು ಅರ್ಥಮಾಡಿಕೊಳ್ಳಬೇಕು ಎಂದು ವಕೀಲ ಕೆ.ಪಿ. ಶ್ರೀಪಾಲ್ ಹೇಳಿದರು.</p>.<p>ನಗರದ ಕಟೀಲು ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಶನಿವಾರ ಮಾನಸ ಟ್ರಸ್ಟ್ ಮತ್ತು ಕಟೀಲು ಅಶೋಕ್ ಪೈ ಸ್ಮಾರಕ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಐಕ್ಯೂಎಸಿ ವಿಭಾಗ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ವಿವಿಧ ಸಂಪ್ರದಾಯಗಳು ಮತ್ತು ಆಚರಣೆಗಳು ಇರುವ ಈ ದೇಶದಲ್ಲಿ ಇಡೀ ದೇಶಕ್ಕಾಗಿ ಇರುವ ಏಕೈಕ ಗ್ರಂಥವೆಂದರೆ ಅದು ಸಂವಿಧಾನ. ವಿವಿಧ ಧರ್ಮಗಳಿಗೆ ಅವರವರ ಪವಿತ್ರ ಧರ್ಮಗ್ರಂಥಗಳಿರಬಹುದು. ಆದರೆ ಇಡೀ ದೇಶದ ಜನರ ಹಕ್ಕುಗಳನ್ನು ರಕ್ಷಿಸುವ ಏಕೈಕ ಗ್ರಂಥ ಸಂವಿಧಾನ ಎಂದರು.<br /><br />ಸಂವಿಧಾನ ಇಲ್ಲದಿದ್ದಲ್ಲಿ ಹಿಂದುಳಿದ ವರ್ಗದವರು ಮತ್ತು ಕಡು ಬಡವರು ಉನ್ನತ ಸ್ಥಾನಕ್ಕೆ ಏರುತ್ತಿರಲಿಲ್ಲ. ಪರಿಶಿಷ್ಟ ಸಮುದಾಯದ ಮಹಿಳೆಯೊಬ್ಬರು ರಾಷ್ಟ್ರಪತಿಯಾಗಲು ಸಂವಿಧಾನವೇ ಕಾರಣ. ಸಾಮಾಜಿಕ ನ್ಯಾಯ, ಹೆಣ್ಣು-ಗಂಡು ಎಲ್ಲರೂ ಸಮಾನರು ಎಂಬುದು ಸಂವಿಧಾನದ ತತ್ವ ಎಂದು ಹೇಳಿದರು.</p>.<p>ಪ್ರಾಂಶುಪಾಲರಾದ ಡಾ. ಸಂಧ್ಯಾ ಕಾವೇರಿ ಅಧ್ಯಕ್ಷತೆ ವಹಿಸಿದ್ದರು.ಎಂಸಿಸಿಎಸ್ ನಿರ್ದೇಶಕ ಡಾ.ರಾಜೇಂದ್ರ ಚೆನ್ನಿ, ಮನಃಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಅರ್ಚನ ಕೆ. ಭಟ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>