<p><strong>ಶಿವಮೊಗ್ಗ:</strong> ಜಿಲ್ಲೆಯಾದ್ಯಂತ ಅಸಂಘಟಿತ ಕಾರ್ಮಿಕ ವಲಯವನ್ನು ವಿಸ್ತರಿಸುವ ಕಾರ್ಯ ರೂಪಿಸಲಾಗಿದೆ ಎಂದು ಕರ್ನಾಟಕ ಸ್ಟೇಟ್ ಕನ್ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು ತಿಳಿಸಿದರು.</p>.<p>‘ಸಂಘವು ಕೊರೊನಾ ಸಂದರ್ಭ ದಲ್ಲಿ ಕಾರ್ಮಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸುತ್ತಾ ಬಂದಿದೆ. ಕಟ್ಟಡ ಕಾರ್ಮಿಕರಿಗೆ ಮಂಡಳಿಯ ಗುರುತಿನ ಚೀಟಿ ವಿತರಿಸಲಾಗಿದೆ. ₹ 5 ಸಾವಿರ ಪರಿಹಾರ ಹಣವನ್ನು ಕಾರ್ಮಿಕರ ಖಾತೆಗೆ ನೇರವಾಗಿ ಜಮಾ ಮಾಡಿಸುವುದಕ್ಕೆ ಸಂಘದ ಪದಾಧಿಕಾರಿಗಳು ಶ್ರಮಿಸಿದ್ದಾರೆ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.</p>.<p>‘ಗ್ರಾಮೀಣ ಹಾಗೂ ನಗರ ಮಟ್ಟದಲ್ಲಿ ಶಾಖೆಗಳನ್ನು ಆರಂಭಿಸಿ ಪದಾಧಿಕಾರಿಗಳನ್ನು ನೇಮಕ ಮಾಡಲಾ<br />ಗಿದೆ. ಸರ್ಕಾರದ ಆದೇಶದಂತೆ ಶಾಲಾ, ಕಾಲೇಜು ಆರಂಭವಾಗುತ್ತಿರುವುದು ಸ್ವಾಗತಾರ್ಹ. ಶಾಲಾ, ಕಾಲೇಜು ಆವರಣ, ಕೊಠಡಿಗಳ ದುರಸ್ತಿ, ಸ್ವಚ್ಛತೆ ಮಾಡುವುದಿದ್ದರೆ ಒಂದು ದಿನದ ಮಟ್ಟಿಗೆ ಉಚಿತವಾಗಿ ಕಟ್ಟಡ ಕಾರ್ಮಿಕರು ಶ್ರಮದಾನ ಮಾಡಲು ಸಿದ್ಧ’ ಎಂದು ಮಾಹಿತಿ ನೀಡಿದರು.</p>.<p>ಕಟ್ಟಡ ಕಾರ್ಮಿಕರು ಕೆಲಸಕ್ಕಾಗಿ ನಗರಕ್ಕೆ ಮತ್ತು ದೂರದೂರದ ಪ್ರದೇಶಗಳಿಗೆ ಹೋಗಲು ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ವ್ಯವಸ್ಥೆ ಮಾಡುವಂತೆ ಈಗಾಗಲೇ ಸರ್ಕಾರ ಸೂಚಿಸಿದೆ. ಕೂಡಲೇ ಉಚಿತ ಪಾಸ್ ವಿತರಿಸಲು ಸಾರಿಗೆ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.</p>.<p>ಸಂಘದ ಜಿಲ್ಲಾ ಕಚೇರಿಯ ಕಟ್ಟಡವು ವಿನೋಬನಗರದ ಪೊಲೀಸ್ ಚೌಕಿ ಬಳಿ ನಿರ್ಮಾಣಗೊಳ್ಳುತ್ತಿದ್ದು, ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ. ದಾನಿಗಳಿಗೆ, ಚುನಾಯಿತ ಪ್ರತಿನಿಧಿಗಳನ್ನು ಅಂದು ಸನ್ಮಾನಿಸಲಾಗುವುದು ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಬಿ. ಸುಬ್ರಮಣಿ, ಸಂಜಯ್ ಕುಮಾರ್, ಮಣಿಕಂಠ, ಆರ್ಮುಗಂ, ಕೆ. ಚಂದ್ರಶೇಖರ್, ಸತೀಶ್, ಅವಿನಾಶ್, ನಾಗರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಜಿಲ್ಲೆಯಾದ್ಯಂತ ಅಸಂಘಟಿತ ಕಾರ್ಮಿಕ ವಲಯವನ್ನು ವಿಸ್ತರಿಸುವ ಕಾರ್ಯ ರೂಪಿಸಲಾಗಿದೆ ಎಂದು ಕರ್ನಾಟಕ ಸ್ಟೇಟ್ ಕನ್ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು ತಿಳಿಸಿದರು.</p>.<p>‘ಸಂಘವು ಕೊರೊನಾ ಸಂದರ್ಭ ದಲ್ಲಿ ಕಾರ್ಮಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸುತ್ತಾ ಬಂದಿದೆ. ಕಟ್ಟಡ ಕಾರ್ಮಿಕರಿಗೆ ಮಂಡಳಿಯ ಗುರುತಿನ ಚೀಟಿ ವಿತರಿಸಲಾಗಿದೆ. ₹ 5 ಸಾವಿರ ಪರಿಹಾರ ಹಣವನ್ನು ಕಾರ್ಮಿಕರ ಖಾತೆಗೆ ನೇರವಾಗಿ ಜಮಾ ಮಾಡಿಸುವುದಕ್ಕೆ ಸಂಘದ ಪದಾಧಿಕಾರಿಗಳು ಶ್ರಮಿಸಿದ್ದಾರೆ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.</p>.<p>‘ಗ್ರಾಮೀಣ ಹಾಗೂ ನಗರ ಮಟ್ಟದಲ್ಲಿ ಶಾಖೆಗಳನ್ನು ಆರಂಭಿಸಿ ಪದಾಧಿಕಾರಿಗಳನ್ನು ನೇಮಕ ಮಾಡಲಾ<br />ಗಿದೆ. ಸರ್ಕಾರದ ಆದೇಶದಂತೆ ಶಾಲಾ, ಕಾಲೇಜು ಆರಂಭವಾಗುತ್ತಿರುವುದು ಸ್ವಾಗತಾರ್ಹ. ಶಾಲಾ, ಕಾಲೇಜು ಆವರಣ, ಕೊಠಡಿಗಳ ದುರಸ್ತಿ, ಸ್ವಚ್ಛತೆ ಮಾಡುವುದಿದ್ದರೆ ಒಂದು ದಿನದ ಮಟ್ಟಿಗೆ ಉಚಿತವಾಗಿ ಕಟ್ಟಡ ಕಾರ್ಮಿಕರು ಶ್ರಮದಾನ ಮಾಡಲು ಸಿದ್ಧ’ ಎಂದು ಮಾಹಿತಿ ನೀಡಿದರು.</p>.<p>ಕಟ್ಟಡ ಕಾರ್ಮಿಕರು ಕೆಲಸಕ್ಕಾಗಿ ನಗರಕ್ಕೆ ಮತ್ತು ದೂರದೂರದ ಪ್ರದೇಶಗಳಿಗೆ ಹೋಗಲು ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ವ್ಯವಸ್ಥೆ ಮಾಡುವಂತೆ ಈಗಾಗಲೇ ಸರ್ಕಾರ ಸೂಚಿಸಿದೆ. ಕೂಡಲೇ ಉಚಿತ ಪಾಸ್ ವಿತರಿಸಲು ಸಾರಿಗೆ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.</p>.<p>ಸಂಘದ ಜಿಲ್ಲಾ ಕಚೇರಿಯ ಕಟ್ಟಡವು ವಿನೋಬನಗರದ ಪೊಲೀಸ್ ಚೌಕಿ ಬಳಿ ನಿರ್ಮಾಣಗೊಳ್ಳುತ್ತಿದ್ದು, ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ. ದಾನಿಗಳಿಗೆ, ಚುನಾಯಿತ ಪ್ರತಿನಿಧಿಗಳನ್ನು ಅಂದು ಸನ್ಮಾನಿಸಲಾಗುವುದು ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಬಿ. ಸುಬ್ರಮಣಿ, ಸಂಜಯ್ ಕುಮಾರ್, ಮಣಿಕಂಠ, ಆರ್ಮುಗಂ, ಕೆ. ಚಂದ್ರಶೇಖರ್, ಸತೀಶ್, ಅವಿನಾಶ್, ನಾಗರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>