ಆನವಟ್ಟಿಯಲ್ಲಿ ಹಾದುಹೋದ ಹೆದ್ದಾರಿಯ ಬೀದಿ ದೀಪಗಳ ಅಳವಡಿಕೆಗೆ ಸಂಸದರು ₹ 2.5 ಕೋಟಿ ಅನುದಾನ ನೀಡಿದ್ದಾರೆ. ಜೊತೆಗೆ ತಾಲ್ಲೂಕಿನ ಅಭಿವೃದ್ಧಿಗೆ ಮುಖ್ಯಮಂತ್ರಿ, ಸಂಸದರು ಸಾವಿರಾರು ಕೋಟಿ ಅನುದಾನ ನೀಡಿದ್ದಾರೆ. ಆದರೆ ಅಧಿಕಾರಿಗಳು ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರ ಪಾಲಿಸದೇ, ಪ್ರತಿನಿಧಿಗಳು ಸೇರಿ ಯಾರಿಗೂ ತಿಳಿಸದೆ ಕಾರ್ಯಕ್ರಮ ನಡೆಸುವ ಮೂಲಕ ಸರ್ಕಾರಕ್ಕೆ, ಮುಖ್ಯಮಂತ್ರಿ ಹಾಗೂ ಸಂಸದರಿಗೆ ಅವಮಾನ ಮಾಡಿದ್ದಾರೆ. ಸಂಬಂಧಿಸಿದ ಇಲಾಖೆ ವಿರುದ್ಧ ಕ್ರಮ ಜರುಗಿಸಬೇಕು. ಸರ್ಕಾರ ಕೋಟ್ಯಾಂತರ ರೂಪಾಯಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ನೀಡಿರುವ ಅನುದಾನ ಜನಪ್ರತಿನಿಧಿಗಳಿಗೆ ಹಾಗೂ ಜನರಿಗೆ ತಿಳಿಯಬೇಕು ಎಂದು ಹೇಳಿದರು.