<p><strong>ಸೊರಬ: </strong>ತಾಲ್ಲೂಕಿನ ನಿಸರಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾನಗೋಡು ಗ್ರಾಮದ ಬಳಿ ಹಾದು ಹೋಗುವ ಸಂಪರ್ಕ ರಸ್ತೆ ದುರಸ್ತಿಗೆ ಒತ್ತಾಯಿಸಿ ಗ್ರಾಮಸ್ಥರು ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ.</p>.<p>ರಸ್ತೆ ದುರಸ್ತಿಗೆ ಒತ್ತಾಯಿಸಿ ಬುಧವಾರ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು.</p>.<p>ಪ್ರತಿಭಟನೆಯ ನೇತೃತ್ವ ವಹಿಸಿದ್ದ ಗ್ರಾಮದ ರಾಘವೇಂದ್ರ, ‘ಈ ರಸ್ತೆ ಸೊರಬ–ಸಾಗರ ಮುಖ್ಯರಸ್ತೆಯಿಂದ ನಿಸರಾಣಿ, ಮಾಸೂರು ಮಾರ್ಗವಾಗಿ ತಾಳಗುಪ್ಪ ಸೇರುತ್ತದೆ. ಕುಪ್ಪೆಯಿಂದ ನಿಸರಾಣಿವರೆಗೂ ರಸ್ತೆ ಸಂಪೂರ್ಣ ಹಾಳಾಗಿದೆ. ನಾಲ್ಕು ವರ್ಷಗಳಿಂದ ಈ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಇದರಿಂದ ಡಿ. 27ರಂದು ನಡೆಯುವ ಗ್ರಾಮ ಪಂಚಾಯಿತಿ ಮತದಾನ ಬಹಿಷ್ಕರಿಸಲು ಗ್ರಾಮಸ್ಥರು ಒಮ್ಮತದಿಂದ ತೀರ್ಮಾನಿಸಿದ್ದೇವೆ’ ಎಂದು ತಿಳಿಸಿದರು.</p>.<p>ಗ್ರಾಮಸ್ಥರಾದ ಬಸವರಾಯ್ ನಾಯಕ್, ರಮೇಶ್, ರಾಜು, ಪ್ರಕಾಶ್, ಕನ್ನಪ್ಪ, ರಾಘವೇಂದ್ರ ಮಂಜಪ್ಪ ಪಿ., ಹೇಮರಾಜ್, ಉಮೇಶ್, ಹುಚ್ಚಪ್ಪ, ಎಚ್. ಮಂಜಪ್ಪ ಪರಶುರಾಮ, ಸುಶೀಲಮ್ಮ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೊರಬ: </strong>ತಾಲ್ಲೂಕಿನ ನಿಸರಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾನಗೋಡು ಗ್ರಾಮದ ಬಳಿ ಹಾದು ಹೋಗುವ ಸಂಪರ್ಕ ರಸ್ತೆ ದುರಸ್ತಿಗೆ ಒತ್ತಾಯಿಸಿ ಗ್ರಾಮಸ್ಥರು ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ.</p>.<p>ರಸ್ತೆ ದುರಸ್ತಿಗೆ ಒತ್ತಾಯಿಸಿ ಬುಧವಾರ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು.</p>.<p>ಪ್ರತಿಭಟನೆಯ ನೇತೃತ್ವ ವಹಿಸಿದ್ದ ಗ್ರಾಮದ ರಾಘವೇಂದ್ರ, ‘ಈ ರಸ್ತೆ ಸೊರಬ–ಸಾಗರ ಮುಖ್ಯರಸ್ತೆಯಿಂದ ನಿಸರಾಣಿ, ಮಾಸೂರು ಮಾರ್ಗವಾಗಿ ತಾಳಗುಪ್ಪ ಸೇರುತ್ತದೆ. ಕುಪ್ಪೆಯಿಂದ ನಿಸರಾಣಿವರೆಗೂ ರಸ್ತೆ ಸಂಪೂರ್ಣ ಹಾಳಾಗಿದೆ. ನಾಲ್ಕು ವರ್ಷಗಳಿಂದ ಈ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಇದರಿಂದ ಡಿ. 27ರಂದು ನಡೆಯುವ ಗ್ರಾಮ ಪಂಚಾಯಿತಿ ಮತದಾನ ಬಹಿಷ್ಕರಿಸಲು ಗ್ರಾಮಸ್ಥರು ಒಮ್ಮತದಿಂದ ತೀರ್ಮಾನಿಸಿದ್ದೇವೆ’ ಎಂದು ತಿಳಿಸಿದರು.</p>.<p>ಗ್ರಾಮಸ್ಥರಾದ ಬಸವರಾಯ್ ನಾಯಕ್, ರಮೇಶ್, ರಾಜು, ಪ್ರಕಾಶ್, ಕನ್ನಪ್ಪ, ರಾಘವೇಂದ್ರ ಮಂಜಪ್ಪ ಪಿ., ಹೇಮರಾಜ್, ಉಮೇಶ್, ಹುಚ್ಚಪ್ಪ, ಎಚ್. ಮಂಜಪ್ಪ ಪರಶುರಾಮ, ಸುಶೀಲಮ್ಮ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>