ಶಿವಮೊಗ್ಗ: ರಾಜ್ಯ ಬಿಜೆಪಿ ಸರ್ಕಾರದಲ್ಲಿ ಉಪ್ಪಾರ ಸಮಾಜಕ್ಕೆ ಸ್ಥಾನ ನೀಡುವಂತೆ ಆಗ್ರಹಿಸಿ ಸಮಾಜದ ಮುಖಂಡರು ಶುಕ್ರವಾರ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಮನವಿ ಸಲ್ಲಿಸಿದರು.
ಮೂವರು ದಶಕಗಳಿಂದ ಬಿಜೆಪಿ ಪಕ್ಷಕ್ಕೆ ದುಡಿದ ಕಾರ್ಯಕರ್ತರಿಗೆ ಅವಕಾಶ ನೀಡಬೇಕು. ವಿಧಾನ ಪರಿಷತ್ ಸದಸ್ಯತ್ವಕ್ಕೆ ಪರಿಗಣಿಸಬೇಕು. ನಗರ ಪಾಲಿಕೆಗೆ, ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನಾಮನಿರ್ದೇಶನಮಾಡಬೇಕು ಎಂದು ಮನವಿ ಮಾಡಿದರು.
ಸಂಸದ ಬಿ.ವೈ.ರಾಘವೇಂದ್ರ,ಮುಖ್ಯಮಂತ್ರಿಯಡಿಯೂರಪ್ಪ, ಪಕ್ಷದ ಮುಖಂಡರ ಗಮನಕ್ಕೆ ತರಲಾಗುವುದುಎಂದು ಭರವಸೆ ನೀಡಿದರು.
ಸಮಾಜದ ಜಿಲ್ಲಾ ಅಧ್ಯಕ್ಷ ಎಸ್.ಆರ್.ಸತ್ಯನಾರಾಯಣ್, ಉಪಾಧ್ಯಕ್ಷ ಎನ್.ಮಂಜುನಾಥ್, ಕಾರ್ಯದರ್ಶಿಗಳಾದ ಯು.ಕೆ.ವೆಂಕಟೇಶ್, ರಮೇಶ್, ಬೊಮ್ಮನಕಟ್ಟೆ ಮಂಜುನಾಥ್, ಗಾಜನೂರು ಗಣೇಶ್, ಕಿರಣ್ ಕಂಕಾರಿ, ಸುಧಾಕರ್, ಮಾರಶೆಟ್ಟಿಹಳ್ಳಿ ನಾಗರಾಜ್ ಮನವಿ ಸಲ್ಲಿಸಿದರು.
ಈ ಸಮಯದಲ್ಲಿಜಿಲ್ಲಾ ಮತ್ತು ಮಧ್ಯಮ ಪತ್ರಿಕೆಗಳ ರಾಜ್ಯ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದಉಪ್ಪಾರ ಸಮಾಜದ ಮುಖಂಡ ಎನ್.ಮಂಜುನಾಥ್ಅವರನ್ನುಸಂಸದ ರಾಘವೇಂದ್ರಸನ್ಮಾನಿಸಿದರು.