ಹಿರೇನೆಲ್ಲೂರು, ಸೈದೂರು, ಕಾನ್ಲೆ ಮೊದಲಾದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಸಕಾಲದಲ್ಲಿ ಮಳೆಯಾಗದೆ ಭತ್ತದ ಬೆಳೆಗಾರರು ಬಿತ್ತನೆ ಮಾಡಿದ ಬೀಜ ಫಸಲು ನೀಡದೆ ನಷ್ಟ ಅನುಭವಿಸುವಂತಾಗಿದೆ. ರೈತರಿಗೆ ಹೊಸದಾಗಿ ಬಿತ್ತನೆ ಬೀಜ ಖರೀದಿಸುವಷ್ಟು ಆರ್ಥಿಕ ಸಾಮರ್ಥ್ಯ ಇಲ್ಲವಾಗಿದೆ. ಸರ್ಕಾರ ಕೂಡಲೆ ರೈತರ ನೆರವಿಗೆ ಬರಬೇಕು ಎಂದು ರೈತ ಸಂಘದ ತಾಲ್ಲೂಕು ಅಧ್ಯಕ್ಷ ಮಂಜಪ್ಪ ಹಿರೇನೆಲ್ಲೂರು ಒತ್ತಾಯಿಸಿದರು.