ಉಪಚುನಾವಣೆ ನಂತರ ಬಿಜೆಪಿ ಸರ್ಕಾರ ಬೀಳುತ್ತೆ ಎಂದು ಸಿದ್ದರಾಮಯ್ಯ ಹೇಳುವುದು ತೋಳ–ಕುರಿಮರಿ ಕಥೆ ಕಣ್ರಿ ಎಂದು ವ್ಯಂಗ್ಯವಾಡಿದ ಅವರು, ಹಿಂದಿನ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ತಮ್ಮ ಕ್ಷೇತ್ರದ ಅಭಿವೃದ್ಧಿ ಆಗಲಿಲ್ಲ ಎಂದು ಮನನೊಂದು ರಾಜೀನಾಮೆ ಕೊಟ್ಟಿದ್ದಾರೆ. ಅವರಿಂದಾಗಿಯೇ ನಮ್ಮ ಸರ್ಕಾರ ಬಂದಿದೆ. ಹಾಗಾಗಿ ಅನರ್ಹ ಶಾಸಕರ ಬಗ್ಗೆ ನಮಗೆ ಅಪಾರ ಪ್ರೀತಿ, ಗೌರವ ಇದೆ ಎಂದರು.