<p><strong>ಶಿವಮೊಗ್ಗ:</strong> ‘ವಾಲ್ಮೀಕಿ ಅಭಿವೃದ್ಧಿ ನಿಗಮ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯಲ್ಲಿ ನಿಗಮದ ಮಾಜಿ ವ್ಯವಸ್ಥಾಪಕ ಚಂದ್ರಶೇಖರನ್ ತಪ್ಪಿತಸ್ಥರು ಎಂದು ಎಲ್ಲಿಯೂ ಕಂಡುಬಂದಿಲ್ಲ. ಅವರು ತಪ್ಪಿತಸ್ಥರು ಎಂದು ಆರೋಪಪಟ್ಟಿಯಲ್ಲೂ ಉಲ್ಲೇಖಿಸಿಲ್ಲ’ ಎಂದು ಸಿಐಡಿ ವಿಶೇಷ ತನಿಖಾ ತಂಡ ಸ್ಪಷ್ಟಪಡಿಸಿದೆ.</p>.<p>ತನಿಖಾ ತಂಡ 300 ಪುಟಗಳ ಆರೋಪಪಟ್ಟಿಯನ್ನು ಶಿವಮೊಗ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸಿದೆ.</p>.<p>‘ಸತ್ತವರ ಹೆಸರನ್ನು ಆರೋಪಪಟ್ಟಿಯಲ್ಲಿ ಸೇರಿಸಸುವುದು ಅಸಾಧ್ಯ. ಈ ಹಗರಣದಲ್ಲಿ ಎಂಟು ಪ್ರಕರಣ ದಾಖಲಾಗಿವೆ. ಆರೋಪ ಪಟ್ಟಿಯಲ್ಲಿ ಎಲ್ಲಿಯೂ ಅವರು ತಪ್ಪಿತಸ್ಥರು ಎಂದು ಉಲ್ಲೇಖಿಸಿಲ್ಲ’ ಎಂಬುದಾಗಿ ಪ್ರಕರಣದ ತನಿಖಾಧಿಕಾರಿ ರಫೀಕ್ ತಿಳಿಸಿದ್ದಾರೆ.</p>.<p>‘ಪ್ರಕರಣದಲ್ಲಿ ಸಿಐಡಿ ತಂಡ ಸರಿಯಾಗಿ ತನಿಖೆ ನಡೆಸಿರದಿದ್ದರೆ, ಪತಿ ಹಣ ತಿಂದಿರಬಹುದು ಎಂದು ತನಿಖಾ ತಂಡ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದರೆ ಹೈಕೋರ್ಟ್ ಮೊರೆ ಹೋಗುವೆ’ ಎಂದು ಚಂದ್ರಶೇಖರನ್ ಪತ್ನಿ ಕವಿತಾ ನೀಡಿದ್ದ ಹೇಳಿಕೆ ಹಿನ್ನೆಲೆಯಲ್ಲಿ ರಫೀಕ್ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ‘ವಾಲ್ಮೀಕಿ ಅಭಿವೃದ್ಧಿ ನಿಗಮ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯಲ್ಲಿ ನಿಗಮದ ಮಾಜಿ ವ್ಯವಸ್ಥಾಪಕ ಚಂದ್ರಶೇಖರನ್ ತಪ್ಪಿತಸ್ಥರು ಎಂದು ಎಲ್ಲಿಯೂ ಕಂಡುಬಂದಿಲ್ಲ. ಅವರು ತಪ್ಪಿತಸ್ಥರು ಎಂದು ಆರೋಪಪಟ್ಟಿಯಲ್ಲೂ ಉಲ್ಲೇಖಿಸಿಲ್ಲ’ ಎಂದು ಸಿಐಡಿ ವಿಶೇಷ ತನಿಖಾ ತಂಡ ಸ್ಪಷ್ಟಪಡಿಸಿದೆ.</p>.<p>ತನಿಖಾ ತಂಡ 300 ಪುಟಗಳ ಆರೋಪಪಟ್ಟಿಯನ್ನು ಶಿವಮೊಗ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸಿದೆ.</p>.<p>‘ಸತ್ತವರ ಹೆಸರನ್ನು ಆರೋಪಪಟ್ಟಿಯಲ್ಲಿ ಸೇರಿಸಸುವುದು ಅಸಾಧ್ಯ. ಈ ಹಗರಣದಲ್ಲಿ ಎಂಟು ಪ್ರಕರಣ ದಾಖಲಾಗಿವೆ. ಆರೋಪ ಪಟ್ಟಿಯಲ್ಲಿ ಎಲ್ಲಿಯೂ ಅವರು ತಪ್ಪಿತಸ್ಥರು ಎಂದು ಉಲ್ಲೇಖಿಸಿಲ್ಲ’ ಎಂಬುದಾಗಿ ಪ್ರಕರಣದ ತನಿಖಾಧಿಕಾರಿ ರಫೀಕ್ ತಿಳಿಸಿದ್ದಾರೆ.</p>.<p>‘ಪ್ರಕರಣದಲ್ಲಿ ಸಿಐಡಿ ತಂಡ ಸರಿಯಾಗಿ ತನಿಖೆ ನಡೆಸಿರದಿದ್ದರೆ, ಪತಿ ಹಣ ತಿಂದಿರಬಹುದು ಎಂದು ತನಿಖಾ ತಂಡ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದರೆ ಹೈಕೋರ್ಟ್ ಮೊರೆ ಹೋಗುವೆ’ ಎಂದು ಚಂದ್ರಶೇಖರನ್ ಪತ್ನಿ ಕವಿತಾ ನೀಡಿದ್ದ ಹೇಳಿಕೆ ಹಿನ್ನೆಲೆಯಲ್ಲಿ ರಫೀಕ್ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>