<p><strong>ಶಿವಮೊಗ್ಗ: </strong>ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಜಿಲ್ಲಾ ವಾಲ್ಮೀಕಿ ನಾಯಕ ಸಂಘದಸದಸ್ಯರುಸೋಮವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.</p>.<p>ವಾಲ್ಮೀಕಿ ಜನಾಂಗ ಎಲ್ಲ ಕ್ಷೇತ್ರದಲ್ಲಿಯೂ ಹಿಂದೆ ಉಳಿದಿದೆ. ಪರಿಶಿಷ್ಟ ಪಂಗಡಕ್ಕೆ ಸೇರಿದ್ದರೂ ಹಲವು ವರ್ಷಗಳ ಬೇಡಿಕೆ ಈಡೇರಿಲ್ಲ.ಈಗಲಾದರೂ ಬೇಡಿಕೆ ಈಡೇರಿಸಲು ಆಗ್ರಹಿಸಿದರು.</p>.<p>ಪರಿಶಿಷ್ಟ ಪಂಗಡದ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣಪತ್ರಗಳ ವಿತರಣೆ ತಡೆಯಬೇಕು. ರಾಜಕೀಯದಲ್ಲಿ ಮೀಸಲಾತಿ ಇರುವಂತೆ ಶೈಕ್ಷಣಿಕ ಹಾಗೂ ಉದ್ಯೋಗ ಕ್ಷೇತ್ರಕ್ಕೂ ವಿಸ್ತರಿಸಬೇಕು. ಶೇ 3 ರಿಂದ 7ಕ್ಕೆ ಹೆಚ್ಚಿಸಬೇಕು. ನೌಕರರ ಮುಂಬಡ್ತಿ ಮೀಸಲಾತಿ ಶೀಘ್ರ ಜಾರಿಯಾಗಬೇಕು ಎಂದು ಒತ್ತಾಯಿಸಿದರು.</p>.<p>ವಾಲ್ಮೀಕಿ ಸಮಾಜವೂ ಸೇರಿದಂತೆ ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು. ಸಮಾಜದ ಮೂವರು ಶಾಸಕರಿಗೆ ಸಚಿವ ಸಂಪುಟದಲ್ಲಿಸ್ಥಾನನೀಡಬೇಕು. ನಿಗಮ ಮಂಡಳಿಗಳಲ್ಲಿ ವಾಲ್ಮೀಕಿ ಜನಾಂಗಕ್ಕೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.</p>.<p>ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಆರ್. ಲಕ್ಷ್ಮಣ್, ತಾಲ್ಲೂಕು ಅಧ್ಯಕ್ಷ ಎಚ್.ಆರ್. ಹನುಮಂತಪ್ಪ, ಕೆ. ಮೋಹನ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಜಿಲ್ಲಾ ವಾಲ್ಮೀಕಿ ನಾಯಕ ಸಂಘದಸದಸ್ಯರುಸೋಮವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.</p>.<p>ವಾಲ್ಮೀಕಿ ಜನಾಂಗ ಎಲ್ಲ ಕ್ಷೇತ್ರದಲ್ಲಿಯೂ ಹಿಂದೆ ಉಳಿದಿದೆ. ಪರಿಶಿಷ್ಟ ಪಂಗಡಕ್ಕೆ ಸೇರಿದ್ದರೂ ಹಲವು ವರ್ಷಗಳ ಬೇಡಿಕೆ ಈಡೇರಿಲ್ಲ.ಈಗಲಾದರೂ ಬೇಡಿಕೆ ಈಡೇರಿಸಲು ಆಗ್ರಹಿಸಿದರು.</p>.<p>ಪರಿಶಿಷ್ಟ ಪಂಗಡದ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣಪತ್ರಗಳ ವಿತರಣೆ ತಡೆಯಬೇಕು. ರಾಜಕೀಯದಲ್ಲಿ ಮೀಸಲಾತಿ ಇರುವಂತೆ ಶೈಕ್ಷಣಿಕ ಹಾಗೂ ಉದ್ಯೋಗ ಕ್ಷೇತ್ರಕ್ಕೂ ವಿಸ್ತರಿಸಬೇಕು. ಶೇ 3 ರಿಂದ 7ಕ್ಕೆ ಹೆಚ್ಚಿಸಬೇಕು. ನೌಕರರ ಮುಂಬಡ್ತಿ ಮೀಸಲಾತಿ ಶೀಘ್ರ ಜಾರಿಯಾಗಬೇಕು ಎಂದು ಒತ್ತಾಯಿಸಿದರು.</p>.<p>ವಾಲ್ಮೀಕಿ ಸಮಾಜವೂ ಸೇರಿದಂತೆ ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು. ಸಮಾಜದ ಮೂವರು ಶಾಸಕರಿಗೆ ಸಚಿವ ಸಂಪುಟದಲ್ಲಿಸ್ಥಾನನೀಡಬೇಕು. ನಿಗಮ ಮಂಡಳಿಗಳಲ್ಲಿ ವಾಲ್ಮೀಕಿ ಜನಾಂಗಕ್ಕೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.</p>.<p>ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಆರ್. ಲಕ್ಷ್ಮಣ್, ತಾಲ್ಲೂಕು ಅಧ್ಯಕ್ಷ ಎಚ್.ಆರ್. ಹನುಮಂತಪ್ಪ, ಕೆ. ಮೋಹನ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>