<p><strong>ಶಿವಮೊಗ್ಗ: </strong>ವಾಲ್ಮೀಕಿ ಸಮುದಾಯಒಳಗೊಂಡ ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಶೇ 7.5ಕ್ಕೆ ಹೆಚ್ಚಿಸಲು ಸರ್ಕಾರತಕ್ಷಣ ಕ್ರಮ ಕೈಗೊಳ್ಳಬೇಕುಎಂದು ರಾಜನಹಳ್ಳಿ ವಾಲ್ಮೀಕಿ ಗುರು ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿಆಗ್ರಹಿಸಿದರು.</p>.<p>ವಿದ್ಯಾನಗರ ಗಣಪತಿ ದೇವಸ್ಥಾನದ ಸಮುದಾಯ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು.</p>.<p>ರಾಜ್ಯದಲ್ಲಿ ಸುಮಾರು 50 ಲಕ್ಷಕ್ಕೂಹೆಚ್ಚು ವಾಲ್ಮೀಕಿ ಸಮುದಾಯದಜನರು ಇದ್ದಾರೆ.ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ದೊರಕುತ್ತಿಲ್ಲ. ಈಗ ಕೇವಲ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ 3ರಷ್ಟು ಮೀಸಲಾತಿ ಸಿಗುತ್ತಿದೆ. ಈ ಪ್ರಮಾಣ ಶೇ 7.5ಕ್ಕೆ ಹೆಚ್ಚಿಸಬೇಕು. ಜತೆಗೆ ಪರಿಶಿಷ್ಟ ಜಾತಿಯಶೇ 15ರಷ್ಟು ಮೀಸಲಾತಿ ಪ್ರಮಾಣವನ್ನು ಶೇ 17ಕ್ಕೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.</p>.<p><strong>ಮೀಸಲಾತಿ ಹೆಚ್ಚಳಕ್ಕೆ ಹೋರಾಟ:</strong>ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಿಸಲು ಸರ್ಕಾರ ವಿಳಂಬ ಮಾಡುತ್ತಿದೆ.ಹಾಗಾಗಿ,ಸರ್ಕಾರದ ವಿರುದ್ಧ ಹೋರಾಟ ಅನಿವಾರ್ಯ. ಈ ಸಂಬಂಧ ಅ.19ರವರೆಗೂ ರಾಜ್ಯದೆಲ್ಲೆಡೆ ಪ್ರವಾಸ ನಡೆಸಿ, ಜನಾಂಗದವರ ಜತೆ ಚರ್ಚಿಸಿ ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.</p>.<p><strong>20ಕ್ಕೆಮುಖಂಡರ ಸಭೆ:</strong>ಬೆಂಗಳೂರಿನಲ್ಲಿಅ.20ರಂದು ವಾಲ್ಮೀಕಿ ಸಮಾಜದ ಮುಖಂಡರ ಸಭೆ ಕರೆಯಲಾಗಿದೆ. 21ರಿಂದ 30ರವರೆಗೆ ಫ್ರೀಡಂ ಪಾರ್ಕ್ನಲ್ಲಿ ಧರಣಿ ಕುಳಿತುಕೊಳ್ಳಲಾಗುವುದು. 30 ರಂದು ಬೆಂಗಳೂರು ಚಲೋ ಕಾರ್ಯಕ್ರಮದ ಮೂಲಕ ಮುಖ್ಯಮಂತ್ರಿ ಗಮನಸೆಳೆಯಲಾಗುವುದು. ವಾಲ್ಮೀಕಿ ಜಯಂತಿದಿನ ಮುಖ್ಯಮಂತ್ರಿ ಆಹ್ವಾನಿಸಿ ಅಹವಾಲು ತಲುಪಿಸಲಾಗುವುದು ಎಂದರು.</p>.<p>ಜಿಲ್ಲಾ ನಾಯಕ ವಾಲ್ಮೀಕಿ ಸಮಾಜದ ಅಧ್ಯಕ್ಷ ಆರ್.ಲಕ್ಷ್ಮಣ್, ಕಾರ್ಯದರ್ಶಿ ಎಂ.ಆರ್.ಮೋಹನ್, ಕೋಶಾಧ್ಯಕ್ಷ ಕೆ.ಆರ್.ಸೀತಾರಾಮನಾಯಕ್, ಎಚ್.ಎಸ್.ಬಸವರಾಜಪ್ಪ, ಗಿರೀಶ್ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ವಾಲ್ಮೀಕಿ ಸಮುದಾಯಒಳಗೊಂಡ ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಶೇ 7.5ಕ್ಕೆ ಹೆಚ್ಚಿಸಲು ಸರ್ಕಾರತಕ್ಷಣ ಕ್ರಮ ಕೈಗೊಳ್ಳಬೇಕುಎಂದು ರಾಜನಹಳ್ಳಿ ವಾಲ್ಮೀಕಿ ಗುರು ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿಆಗ್ರಹಿಸಿದರು.</p>.<p>ವಿದ್ಯಾನಗರ ಗಣಪತಿ ದೇವಸ್ಥಾನದ ಸಮುದಾಯ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು.</p>.<p>ರಾಜ್ಯದಲ್ಲಿ ಸುಮಾರು 50 ಲಕ್ಷಕ್ಕೂಹೆಚ್ಚು ವಾಲ್ಮೀಕಿ ಸಮುದಾಯದಜನರು ಇದ್ದಾರೆ.ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ದೊರಕುತ್ತಿಲ್ಲ. ಈಗ ಕೇವಲ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ 3ರಷ್ಟು ಮೀಸಲಾತಿ ಸಿಗುತ್ತಿದೆ. ಈ ಪ್ರಮಾಣ ಶೇ 7.5ಕ್ಕೆ ಹೆಚ್ಚಿಸಬೇಕು. ಜತೆಗೆ ಪರಿಶಿಷ್ಟ ಜಾತಿಯಶೇ 15ರಷ್ಟು ಮೀಸಲಾತಿ ಪ್ರಮಾಣವನ್ನು ಶೇ 17ಕ್ಕೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.</p>.<p><strong>ಮೀಸಲಾತಿ ಹೆಚ್ಚಳಕ್ಕೆ ಹೋರಾಟ:</strong>ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಿಸಲು ಸರ್ಕಾರ ವಿಳಂಬ ಮಾಡುತ್ತಿದೆ.ಹಾಗಾಗಿ,ಸರ್ಕಾರದ ವಿರುದ್ಧ ಹೋರಾಟ ಅನಿವಾರ್ಯ. ಈ ಸಂಬಂಧ ಅ.19ರವರೆಗೂ ರಾಜ್ಯದೆಲ್ಲೆಡೆ ಪ್ರವಾಸ ನಡೆಸಿ, ಜನಾಂಗದವರ ಜತೆ ಚರ್ಚಿಸಿ ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.</p>.<p><strong>20ಕ್ಕೆಮುಖಂಡರ ಸಭೆ:</strong>ಬೆಂಗಳೂರಿನಲ್ಲಿಅ.20ರಂದು ವಾಲ್ಮೀಕಿ ಸಮಾಜದ ಮುಖಂಡರ ಸಭೆ ಕರೆಯಲಾಗಿದೆ. 21ರಿಂದ 30ರವರೆಗೆ ಫ್ರೀಡಂ ಪಾರ್ಕ್ನಲ್ಲಿ ಧರಣಿ ಕುಳಿತುಕೊಳ್ಳಲಾಗುವುದು. 30 ರಂದು ಬೆಂಗಳೂರು ಚಲೋ ಕಾರ್ಯಕ್ರಮದ ಮೂಲಕ ಮುಖ್ಯಮಂತ್ರಿ ಗಮನಸೆಳೆಯಲಾಗುವುದು. ವಾಲ್ಮೀಕಿ ಜಯಂತಿದಿನ ಮುಖ್ಯಮಂತ್ರಿ ಆಹ್ವಾನಿಸಿ ಅಹವಾಲು ತಲುಪಿಸಲಾಗುವುದು ಎಂದರು.</p>.<p>ಜಿಲ್ಲಾ ನಾಯಕ ವಾಲ್ಮೀಕಿ ಸಮಾಜದ ಅಧ್ಯಕ್ಷ ಆರ್.ಲಕ್ಷ್ಮಣ್, ಕಾರ್ಯದರ್ಶಿ ಎಂ.ಆರ್.ಮೋಹನ್, ಕೋಶಾಧ್ಯಕ್ಷ ಕೆ.ಆರ್.ಸೀತಾರಾಮನಾಯಕ್, ಎಚ್.ಎಸ್.ಬಸವರಾಜಪ್ಪ, ಗಿರೀಶ್ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>