<p><strong>ಶಿವಮೊಗ್ಗ:</strong> ‘ಸಮುದಾಯಕ್ಕೆ ಆಗುತ್ತಿರುವ ಅನ್ಯಾಯಗಳನ್ನು ಸರಿಪಡಿಸಲು ಮತ್ತು ನ್ಯಾಯ ಒದಗಿಸಲು ವನ್ನಿಕುಲ ಮಹಾಸಭಾವನ್ನು 2021ರಲ್ಲಿ ಸ್ಥಾಪನೆ ಮಾಡಲಾಗಿದ್ದು, ಆ ಮೂಲಕ ಸಮಾಜದ ಸಂಘಟನೆಗೆ ಶಕ್ತಿ ತುಂಬುವ ಕೆಲಸ ಮಾಡಲಾಗಿದೆ’ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.</p>.<p>ಸಮೀಪದ ಮಾಚೇನಹಳ್ಳಿಯಲ್ಲಿ ಕರುನಾಡು ರಾಜ್ಯ ವನ್ನಿಕುಲ ಕೃತಿಯ ಮಹಾಸಭಾ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ವನ್ನಿಕುಲ ಕ್ಷತ್ರಿಯ ಸಮುದಾಯದ ಸ್ವಾಭಿಮಾನ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸಮಾರಂಭದಲ್ಲಿ ವನ್ನಿಕುಲ ಪರಂಪರೆಯ ಚೋಳ ವಂಶಸ್ಥರಾದ ಮನ್ನಾ ಮನ್ನನ್ ಭಾಗಿಯಾಗಿದ್ದಾರೆ. ಇದು ಈಗಲೂ ಈ ಸಮಾಜದಲ್ಲಿ ರಾಜವಂಶದವರು ಇದ್ದಾರೆ ಎಂಬುದನ್ನು ತಿಳಿಸಿಕೊಟ್ಟಂತಾಗಿದೆ ಎಂದರು.</p>.<p>ರಾಜವಂಶದ ಪರಂಪರೆಯಿಂದ ಬಂದಿರುವ ಇತಿಹಾಸ ಹೊಂದಿದ್ದರೂ ಈಗ ಸಮಾಜ ತುಳಿತಕ್ಕೆ ಒಳಗಾಗಿರುವುದು ವಿಪರ್ಯಾಸ. ಇಂತಹ ಬೃಹತ್ ಸಮಾವೇಶ ಹಮ್ಮಿಕೊಳ್ಳುವ ಮೂಲಕ ಸಮಾಜದ ಒಗ್ಗಟ್ಟು ಪ್ರದರ್ಶಿಸುತ್ತಿರುವುದು ಉತ್ತಮವಾದ ಬೆಳವಣಿಗೆ ಎಂದು ಅವರು ತಿಳಿಸಿದರು.</p>.<p>ಸದ್ಗುರು ಬಾಲಯೋಗಿ ಸಾಯಿ ಮಂಜುನಾಥ ಮಹಾರಾಜರು ಸಾನ್ನಿಧ್ಯ ವಹಿಸಿದ್ದರು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ<br />ಎಚ್.ಡಿ. ಕುಮಾರಸ್ವಾಮಿ, ವನ್ನಿಕುಲ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ನಂದಕುಮಾರ್ ಗೌಡರ್, ವಿಧಾನ ಪರಿಷತ್<br />ಸದಸ್ಯರಾದ ಆಯನೂರು ಮಂಜುನಾಥ್, ಅರುಣ್ ಡಿ.ಎಸ್, ಶಾಸಕರಾದ ಅಶೋಕ್ ನಾಯ್ಕ್, ಸಂಗಮೇಶ್, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಕಾಂತ್, ಮುಖಂಡರಾದ ಭಾನುಪ್ರಕಾಶ್, ಜಿ.ಕೆ.ಮಣಿ ಉಪಸ್ಥಿತರಿದ್ದರು.</p>.<p><strong>ಆಗಸ್ಟ್ನಿಂದ ಗ್ರಾಮ ವಾಸ್ತವ್ಯ: ಎಚ್ಡಿಕೆ</strong></p>.<p>‘ಆಗಸ್ಟ್ ತಿಂಗಳಿಂದ ಪ್ರತಿದಿನ ಒಂದೊಂದು ಕ್ಷೇತ್ರದಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತೇನೆ. ಬಡವರಿಗೋಸ್ಕರ ನಾನು ಮತ್ತೊಂದು ಬಾರಿ ಅಧಿಕಾರ ಹಿಡಿಯುವ ವಿಶ್ವಾಸ ಇದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು.</p>.<p>ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನನ್ನನ್ನು ಆಯ್ಕೆ ಮಾಡಿಕೊಂಡು ಬದುಕು ಕಟ್ಟಿಕೊಳ್ಳಬೇಕು ಅಂದರೆ ಜನರು ತೀರ್ಮಾನ ಮಾಡಲಿದ್ದಾರೆ’ ಎಂದರು.</p>.<p>‘ಶಿವಸೇನೆಯಲ್ಲಿ 50 ಜನ ಬಿಟ್ಟು ಹೋಗ್ತಿದ್ದಾರೆ. ಏನು ಆ ಪಕ್ಷ ಮುಳುಗಿ ಹೋಗ್ತಿದೆಯಾ. ವೈ.ಎಸ್.ವಿ.ದತ್ತ ಅವರಿಗೆ ಪಕ್ಷ ಎಲ್ಲಾ ಕೊಟ್ಟಿದೆ. ಎಲ್ಲಾ ಪಡೆದುಕೊಂಡು ಹೋಗ್ತಿನಿ ಅಂದರೆ ಅವರೇ ಯೋಚನೆ ಮಾಡಬೇಕು’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p>‘ಪಠ್ಯಪರಿಷ್ಕರಣೆ ವಿಚಾರದಲ್ಲಿ ಈಗಿನ ಹಾಗೂ ಹಿಂದಿನ ಸಮಿತಿಗಳು ಏನೇನು ಬದಲಾವಣೆ ಮಾಡಿವೆ ಎಂಬುದನ್ನು ಸರ್ಕಾರ ಜನರ ಮುಂದೆ ಇಡಲಿ. ಇದನ್ನು ತುರ್ತಾಗಿ ಮಾಡಿ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಉಂಟಾಗಿರುವ ಗೊಂದಲ ನಿವಾರಿಸಲಿ’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ‘ಸಮುದಾಯಕ್ಕೆ ಆಗುತ್ತಿರುವ ಅನ್ಯಾಯಗಳನ್ನು ಸರಿಪಡಿಸಲು ಮತ್ತು ನ್ಯಾಯ ಒದಗಿಸಲು ವನ್ನಿಕುಲ ಮಹಾಸಭಾವನ್ನು 2021ರಲ್ಲಿ ಸ್ಥಾಪನೆ ಮಾಡಲಾಗಿದ್ದು, ಆ ಮೂಲಕ ಸಮಾಜದ ಸಂಘಟನೆಗೆ ಶಕ್ತಿ ತುಂಬುವ ಕೆಲಸ ಮಾಡಲಾಗಿದೆ’ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.</p>.<p>ಸಮೀಪದ ಮಾಚೇನಹಳ್ಳಿಯಲ್ಲಿ ಕರುನಾಡು ರಾಜ್ಯ ವನ್ನಿಕುಲ ಕೃತಿಯ ಮಹಾಸಭಾ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ವನ್ನಿಕುಲ ಕ್ಷತ್ರಿಯ ಸಮುದಾಯದ ಸ್ವಾಭಿಮಾನ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸಮಾರಂಭದಲ್ಲಿ ವನ್ನಿಕುಲ ಪರಂಪರೆಯ ಚೋಳ ವಂಶಸ್ಥರಾದ ಮನ್ನಾ ಮನ್ನನ್ ಭಾಗಿಯಾಗಿದ್ದಾರೆ. ಇದು ಈಗಲೂ ಈ ಸಮಾಜದಲ್ಲಿ ರಾಜವಂಶದವರು ಇದ್ದಾರೆ ಎಂಬುದನ್ನು ತಿಳಿಸಿಕೊಟ್ಟಂತಾಗಿದೆ ಎಂದರು.</p>.<p>ರಾಜವಂಶದ ಪರಂಪರೆಯಿಂದ ಬಂದಿರುವ ಇತಿಹಾಸ ಹೊಂದಿದ್ದರೂ ಈಗ ಸಮಾಜ ತುಳಿತಕ್ಕೆ ಒಳಗಾಗಿರುವುದು ವಿಪರ್ಯಾಸ. ಇಂತಹ ಬೃಹತ್ ಸಮಾವೇಶ ಹಮ್ಮಿಕೊಳ್ಳುವ ಮೂಲಕ ಸಮಾಜದ ಒಗ್ಗಟ್ಟು ಪ್ರದರ್ಶಿಸುತ್ತಿರುವುದು ಉತ್ತಮವಾದ ಬೆಳವಣಿಗೆ ಎಂದು ಅವರು ತಿಳಿಸಿದರು.</p>.<p>ಸದ್ಗುರು ಬಾಲಯೋಗಿ ಸಾಯಿ ಮಂಜುನಾಥ ಮಹಾರಾಜರು ಸಾನ್ನಿಧ್ಯ ವಹಿಸಿದ್ದರು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ<br />ಎಚ್.ಡಿ. ಕುಮಾರಸ್ವಾಮಿ, ವನ್ನಿಕುಲ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ನಂದಕುಮಾರ್ ಗೌಡರ್, ವಿಧಾನ ಪರಿಷತ್<br />ಸದಸ್ಯರಾದ ಆಯನೂರು ಮಂಜುನಾಥ್, ಅರುಣ್ ಡಿ.ಎಸ್, ಶಾಸಕರಾದ ಅಶೋಕ್ ನಾಯ್ಕ್, ಸಂಗಮೇಶ್, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಕಾಂತ್, ಮುಖಂಡರಾದ ಭಾನುಪ್ರಕಾಶ್, ಜಿ.ಕೆ.ಮಣಿ ಉಪಸ್ಥಿತರಿದ್ದರು.</p>.<p><strong>ಆಗಸ್ಟ್ನಿಂದ ಗ್ರಾಮ ವಾಸ್ತವ್ಯ: ಎಚ್ಡಿಕೆ</strong></p>.<p>‘ಆಗಸ್ಟ್ ತಿಂಗಳಿಂದ ಪ್ರತಿದಿನ ಒಂದೊಂದು ಕ್ಷೇತ್ರದಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತೇನೆ. ಬಡವರಿಗೋಸ್ಕರ ನಾನು ಮತ್ತೊಂದು ಬಾರಿ ಅಧಿಕಾರ ಹಿಡಿಯುವ ವಿಶ್ವಾಸ ಇದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು.</p>.<p>ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನನ್ನನ್ನು ಆಯ್ಕೆ ಮಾಡಿಕೊಂಡು ಬದುಕು ಕಟ್ಟಿಕೊಳ್ಳಬೇಕು ಅಂದರೆ ಜನರು ತೀರ್ಮಾನ ಮಾಡಲಿದ್ದಾರೆ’ ಎಂದರು.</p>.<p>‘ಶಿವಸೇನೆಯಲ್ಲಿ 50 ಜನ ಬಿಟ್ಟು ಹೋಗ್ತಿದ್ದಾರೆ. ಏನು ಆ ಪಕ್ಷ ಮುಳುಗಿ ಹೋಗ್ತಿದೆಯಾ. ವೈ.ಎಸ್.ವಿ.ದತ್ತ ಅವರಿಗೆ ಪಕ್ಷ ಎಲ್ಲಾ ಕೊಟ್ಟಿದೆ. ಎಲ್ಲಾ ಪಡೆದುಕೊಂಡು ಹೋಗ್ತಿನಿ ಅಂದರೆ ಅವರೇ ಯೋಚನೆ ಮಾಡಬೇಕು’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p>‘ಪಠ್ಯಪರಿಷ್ಕರಣೆ ವಿಚಾರದಲ್ಲಿ ಈಗಿನ ಹಾಗೂ ಹಿಂದಿನ ಸಮಿತಿಗಳು ಏನೇನು ಬದಲಾವಣೆ ಮಾಡಿವೆ ಎಂಬುದನ್ನು ಸರ್ಕಾರ ಜನರ ಮುಂದೆ ಇಡಲಿ. ಇದನ್ನು ತುರ್ತಾಗಿ ಮಾಡಿ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಉಂಟಾಗಿರುವ ಗೊಂದಲ ನಿವಾರಿಸಲಿ’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>