<p><strong>ಶಿಕಾರಿಪುರ:</strong> ‘ಪುರಾಣದಲ್ಲಿ ನಕಾರಾತ್ಮಕ ಶಕ್ತಿ ನಿವಾರಣೆಗೆ ವೀರಭದ್ರ ದೇವರು ಶ್ರಮಿಸಿದ ಬಗ್ಗೆ ಉಲ್ಲೇಖವಿದೆ. ಇಂದಿಗೂ ವೀರಭದ್ರನ ಗುಗ್ಗುಳದಲ್ಲಿ ಭಕ್ತರು ಶ್ರದ್ಧಾ ಭಕ್ತಿಯಿಂದ ಪಾಲ್ಗೊಳ್ಳುತ್ತಾರೆ’ ಎಂದು ಕಡೇನಂದಿಹಳ್ಳಿ ತಪೋಕ್ಷೇತ್ರದ ರೇವಣಸಿದ್ಧ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದಲ್ಲಿ ಮಂಗಳವಾರ ವೀರಭದ್ರೇಶ್ವರ ಜಯಂತೋತ್ಸವ ಸೇವಾ ಸಮಿತಿ ಆಯೋಜಿಸಿದ್ದ ಶರಭಿ ಗುಗ್ಗುಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಸಕಾರಾತ್ಮಕ, ಕ್ರೀಯಾಶೀಲ, ಸತ್ಯ–ಧರ್ಮ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಡೆಸುತ್ತಿರುವ ಗುಗ್ಗುಳದಿಂದ ಎಲ್ಲೆಡೆ ಶಾಂತಿ, ನೆಮ್ಮದಿ ನೆಲೆಸಲು ಕಾರಣವಾಗಲಿ ಎಂದು ಶುಭ ಹಾರೈಸಿದರು.</p>.<p>ನಾಡಿನಲ್ಲಿ ದೊರೆತ ಹಲವಾರು ಶಾಸನಗಳಲ್ಲಿ ವೀರಭದ್ರ ದೇವರ ಅಸ್ತಿತ್ವದ ಉಲ್ಲೇಖವಿದೆ. ಆಂಧ್ರ ಪ್ರದೇಶದ ರಾಯಚೋಟಿಯಲ್ಲಿ ವೀರಭದ್ರ ಮೊದಲು ಅವತಾರ ತಾಳಿದ್ದ ಎಂದು ಹೇಳಲಾಗಿದೆ. ಕರ್ನಾಟಕ ಮಾತ್ರವಲ್ಲದೇ ದೇಶ–ವಿದೇಶಗಳಲ್ಲೂ ವೀರಭದ್ರ ದೇವರ ಕುರುಹು ಇದೆ ಎಂದು ವಿರಕ್ತಮಠದ ಚನ್ನಬಸವ ಸ್ವಾಮೀಜಿ ಹೇಳಿದರು.</p>.<p>ಪುರಸಭೆ ಎದುರಿನ ವೀರಭದ್ರೇಶ್ವರ ದೇವಸ್ಥಾನದಿಂದ ಆರಂಭಗೊಂಡ ಗುಗ್ಗುಳ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಯಿತು. ನೂರಾರು ಭಕ್ತರು ಶ್ರದ್ಧಾ–ಭಕ್ತಿಯಿಂದ ಪಾಲ್ಗೊಂಡಿದ್ದರು. ವಿರಕ್ತ ಮಠದಲ್ಲಿ ಅನ್ನಸಂತರ್ಪಣೆ ನಡೆಯಿತು. ವೀರಭದ್ರೇಶ್ವರ ಜಯಂತೋತ್ಸವ ಸೇವಾ ಸಮಿತಿ ಪದಾಧಿಕಾರಿಗಳು ಇದ್ದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಕಾರಿಪುರ:</strong> ‘ಪುರಾಣದಲ್ಲಿ ನಕಾರಾತ್ಮಕ ಶಕ್ತಿ ನಿವಾರಣೆಗೆ ವೀರಭದ್ರ ದೇವರು ಶ್ರಮಿಸಿದ ಬಗ್ಗೆ ಉಲ್ಲೇಖವಿದೆ. ಇಂದಿಗೂ ವೀರಭದ್ರನ ಗುಗ್ಗುಳದಲ್ಲಿ ಭಕ್ತರು ಶ್ರದ್ಧಾ ಭಕ್ತಿಯಿಂದ ಪಾಲ್ಗೊಳ್ಳುತ್ತಾರೆ’ ಎಂದು ಕಡೇನಂದಿಹಳ್ಳಿ ತಪೋಕ್ಷೇತ್ರದ ರೇವಣಸಿದ್ಧ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದಲ್ಲಿ ಮಂಗಳವಾರ ವೀರಭದ್ರೇಶ್ವರ ಜಯಂತೋತ್ಸವ ಸೇವಾ ಸಮಿತಿ ಆಯೋಜಿಸಿದ್ದ ಶರಭಿ ಗುಗ್ಗುಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಸಕಾರಾತ್ಮಕ, ಕ್ರೀಯಾಶೀಲ, ಸತ್ಯ–ಧರ್ಮ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಡೆಸುತ್ತಿರುವ ಗುಗ್ಗುಳದಿಂದ ಎಲ್ಲೆಡೆ ಶಾಂತಿ, ನೆಮ್ಮದಿ ನೆಲೆಸಲು ಕಾರಣವಾಗಲಿ ಎಂದು ಶುಭ ಹಾರೈಸಿದರು.</p>.<p>ನಾಡಿನಲ್ಲಿ ದೊರೆತ ಹಲವಾರು ಶಾಸನಗಳಲ್ಲಿ ವೀರಭದ್ರ ದೇವರ ಅಸ್ತಿತ್ವದ ಉಲ್ಲೇಖವಿದೆ. ಆಂಧ್ರ ಪ್ರದೇಶದ ರಾಯಚೋಟಿಯಲ್ಲಿ ವೀರಭದ್ರ ಮೊದಲು ಅವತಾರ ತಾಳಿದ್ದ ಎಂದು ಹೇಳಲಾಗಿದೆ. ಕರ್ನಾಟಕ ಮಾತ್ರವಲ್ಲದೇ ದೇಶ–ವಿದೇಶಗಳಲ್ಲೂ ವೀರಭದ್ರ ದೇವರ ಕುರುಹು ಇದೆ ಎಂದು ವಿರಕ್ತಮಠದ ಚನ್ನಬಸವ ಸ್ವಾಮೀಜಿ ಹೇಳಿದರು.</p>.<p>ಪುರಸಭೆ ಎದುರಿನ ವೀರಭದ್ರೇಶ್ವರ ದೇವಸ್ಥಾನದಿಂದ ಆರಂಭಗೊಂಡ ಗುಗ್ಗುಳ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಯಿತು. ನೂರಾರು ಭಕ್ತರು ಶ್ರದ್ಧಾ–ಭಕ್ತಿಯಿಂದ ಪಾಲ್ಗೊಂಡಿದ್ದರು. ವಿರಕ್ತ ಮಠದಲ್ಲಿ ಅನ್ನಸಂತರ್ಪಣೆ ನಡೆಯಿತು. ವೀರಭದ್ರೇಶ್ವರ ಜಯಂತೋತ್ಸವ ಸೇವಾ ಸಮಿತಿ ಪದಾಧಿಕಾರಿಗಳು ಇದ್ದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>