<p><strong>ಸಾಗರ: </strong>ವಾಹನಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವುದರಿಂದ ಸಂಚಾರದಟ್ಟಣೆ ಸಮಸ್ಯೆ ಎದುರಾಗುತ್ತಿದ್ದು ರಸ್ತೆ ವಿಸ್ತರಣೆ ಕಾಮಗಾರಿ ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು. </p>.<p>ಇಲ್ಲಿನ ಗಾಂಧಿನಗರ ವೃತ್ತದಿಂದ ರಾಮನಗರ ವೃತ್ತದವರೆಗೆ ₹ 6 ಕೋಟಿ ವೆಚ್ಚದಲ್ಲಿ ನಡೆಯಲಿರುವ ದ್ವಿಪಥ ರಸ್ತೆ ನಿರ್ಮಾಣ ಕಾಮಗಾರಿಗೆ ಗುರುವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.</p>.<p>ಗಾಂಧಿನಗರ ವೃತ್ತದಿಂದ ಜೋಗ ರಸ್ತೆಯ ಸಣ್ಣಮನೆ ಸೇತುವೆವರೆಗೆ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ಕೂಡ ಶೀಘ್ರದಲ್ಲೆ ಆರಂಭಗೊಳ್ಳಲಿದೆ. ಕೆಳದಿ ರಸ್ತೆಯ ರಾಣಿಚೆನ್ನಮ್ಮ ವೃತ್ತದಿಂದ ಶ್ರೀಗಂಧ ಸಂಕೀರ್ಣದವರೆಗೆ ದ್ವಿಪಥ ರಸ್ತೆ ನಿರ್ಮಾಣಕ್ಕೆ ₹ 5.5 ಕೋಟಿ ಬಿಡುಗಡೆಯಾಗಿದೆ ಎಂದು ಅವರು ಮಾಹಿತಿ ನೀಡಿದರು.</p>.<p>‘ಹಿಂದಿನ ಶಾಸಕರ ಅವಧಿಯಲ್ಲಿ ಗಣಪತಿ ಕೆರೆ ಸ್ವಚ್ಛತೆ ಹೆಸರಿನಲ್ಲಿ ₹ 2 ರಿಂದ ₹ 3 ಕೋಟಿ ಖರ್ಚು ಮಾಡಲಾಗಿದೆ. ಆದರೆ ನಾನು ಶಾಸಕನಾದ ನಂತರ ₹ 2 ಲಕ್ಷದಿಂದ ₹ 3 ಲಕ್ಷದ ಒಳಗೆ ಕೆರೆ ಸ್ವಚ್ಛತೆ ಕಾರ್ಯ ಪೂರ್ಣಗೊಳಿಸಲಾಗಿದೆ. ₹ 50 ಲಕ್ಷ ವೆಚ್ಚದಲ್ಲಿ ವಿಜಯನಗರ ಬಡಾವಣೆಯ ಈಜುಕೊಳದ ರಿಪೇರಿ ನಡೆಯುತ್ತಿದೆ’ ಎಂದರು.</p>.<p>ನಗರಸಭೆ ಸದಸ್ಯರಾದ ಗಣಪತಿ ಮಂಡಗಳಲೆ, ಅರವಿಂದ ರಾಯ್ಕರ್, ವಿ.ಮಹೇಶ್, ಮಧುಮಾಲತಿ, ಸೈಯದ್ ಜಾಕೀರ್, ರವಿಕುಮಾರ್, ಸತೀಶ್, ಪೌರಾಯುಕ್ತ ಎಚ್.ಕೆ.ನಾಗಪ್ಪ, ಪ್ರಮುಖರಾದ ಕಲಸೆ ಚಂದ್ರಪ್ಪ,ಎನ್. ಉಷಾ, ತಾಹೀರ್, ಪ್ರಭಾವತಿ ಚಂದ್ರಕಾಂತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: </strong>ವಾಹನಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವುದರಿಂದ ಸಂಚಾರದಟ್ಟಣೆ ಸಮಸ್ಯೆ ಎದುರಾಗುತ್ತಿದ್ದು ರಸ್ತೆ ವಿಸ್ತರಣೆ ಕಾಮಗಾರಿ ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು. </p>.<p>ಇಲ್ಲಿನ ಗಾಂಧಿನಗರ ವೃತ್ತದಿಂದ ರಾಮನಗರ ವೃತ್ತದವರೆಗೆ ₹ 6 ಕೋಟಿ ವೆಚ್ಚದಲ್ಲಿ ನಡೆಯಲಿರುವ ದ್ವಿಪಥ ರಸ್ತೆ ನಿರ್ಮಾಣ ಕಾಮಗಾರಿಗೆ ಗುರುವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.</p>.<p>ಗಾಂಧಿನಗರ ವೃತ್ತದಿಂದ ಜೋಗ ರಸ್ತೆಯ ಸಣ್ಣಮನೆ ಸೇತುವೆವರೆಗೆ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ಕೂಡ ಶೀಘ್ರದಲ್ಲೆ ಆರಂಭಗೊಳ್ಳಲಿದೆ. ಕೆಳದಿ ರಸ್ತೆಯ ರಾಣಿಚೆನ್ನಮ್ಮ ವೃತ್ತದಿಂದ ಶ್ರೀಗಂಧ ಸಂಕೀರ್ಣದವರೆಗೆ ದ್ವಿಪಥ ರಸ್ತೆ ನಿರ್ಮಾಣಕ್ಕೆ ₹ 5.5 ಕೋಟಿ ಬಿಡುಗಡೆಯಾಗಿದೆ ಎಂದು ಅವರು ಮಾಹಿತಿ ನೀಡಿದರು.</p>.<p>‘ಹಿಂದಿನ ಶಾಸಕರ ಅವಧಿಯಲ್ಲಿ ಗಣಪತಿ ಕೆರೆ ಸ್ವಚ್ಛತೆ ಹೆಸರಿನಲ್ಲಿ ₹ 2 ರಿಂದ ₹ 3 ಕೋಟಿ ಖರ್ಚು ಮಾಡಲಾಗಿದೆ. ಆದರೆ ನಾನು ಶಾಸಕನಾದ ನಂತರ ₹ 2 ಲಕ್ಷದಿಂದ ₹ 3 ಲಕ್ಷದ ಒಳಗೆ ಕೆರೆ ಸ್ವಚ್ಛತೆ ಕಾರ್ಯ ಪೂರ್ಣಗೊಳಿಸಲಾಗಿದೆ. ₹ 50 ಲಕ್ಷ ವೆಚ್ಚದಲ್ಲಿ ವಿಜಯನಗರ ಬಡಾವಣೆಯ ಈಜುಕೊಳದ ರಿಪೇರಿ ನಡೆಯುತ್ತಿದೆ’ ಎಂದರು.</p>.<p>ನಗರಸಭೆ ಸದಸ್ಯರಾದ ಗಣಪತಿ ಮಂಡಗಳಲೆ, ಅರವಿಂದ ರಾಯ್ಕರ್, ವಿ.ಮಹೇಶ್, ಮಧುಮಾಲತಿ, ಸೈಯದ್ ಜಾಕೀರ್, ರವಿಕುಮಾರ್, ಸತೀಶ್, ಪೌರಾಯುಕ್ತ ಎಚ್.ಕೆ.ನಾಗಪ್ಪ, ಪ್ರಮುಖರಾದ ಕಲಸೆ ಚಂದ್ರಪ್ಪ,ಎನ್. ಉಷಾ, ತಾಹೀರ್, ಪ್ರಭಾವತಿ ಚಂದ್ರಕಾಂತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>