<p><strong>ಶಿವಮೊಗ್ಗ:</strong> ಇಲ್ಲಿನ ವಿಶ್ವ ಹಿಂದೂ ಪರಿಷತ್ ಭದ್ರಾ ಪ್ರಖಂಡದಲ್ಲಿ ಸಂತರ ಪಾದಯಾತ್ರೆ ಕಾರ್ಯಕ್ರಮ ಶನಿವಾರ ನಡೆಯಿತು.</p>.<p>ಕಾರ್ಯಕ್ರಮದಲ್ಲಿ ಶಿವಮೊಗ್ಗದ ರಾಮಕೃಷ್ಣ ವಿವೇಕಾನಂದ ಆಶ್ರಮದ ಸ್ವಾಮಿ ವಿನಯಾನಂದ ಸರಸ್ವತಿ ಹಾಗೂ ದುರ್ಗಾಶಕ್ತಿ ಸಪ್ತಶತಿ ಋಷಿಪ್ರಜ್ಞಾ ಆಂದೋಲನದ ಸಂಸ್ಥಾಪಕ ನರೇಂದ್ರ ಗುರೂಜಿ ನೇತೃತ್ವದಲ್ಲಿ ಪಾದಯಾತ್ರೆ ನಡೆಯಿತು. </p>.<p>ಶಿವಮೊಗ್ಗ ನಗರದ ವಿದ್ಯಾನಗರ ಬಡಾವಣೆಯ ಮಾತಂಗಮ್ಮನ ಬೀದಿಯ 40ಕ್ಕಿಂತ ಹೆಚ್ಚು ಮನೆಗಳಿಗೆ ಸಂತರು ಭೇಟಿ ನೀಡಿ ಭಕ್ತರನ್ನು ಆಶೀರ್ವದಿಸಿದರು. ‘ನಾವೆಲ್ಲರೂ ಹಿಂದೂ ಸಮಾಜದ ಅವಯವಗಳು. ನಾವೆಲ್ಲರೂ ಒಂದಾಗಿ ಬಾಳಬೇಕು’ ಎಂಬ ಬಗ್ಗೆ ಜಾಗೃತಿ ಮೂಡಿಸಿದರು.</p>.<p>ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಇಬ್ಬರೂ ಮಾತನಾಡಿ, ‘ಜ್ಞಾನ ಮತ್ತು ಭಕ್ತಿಗಳನ್ನು ಹೆಚ್ಚಿಸಿಕೊಂಡು ಭಗವಂತನನ್ನು ಪಡೆದು ಭವ ಸಾಗರವನ್ನು ದಾಟುವ ಶಕ್ತಿ ಪಡೆಯಬೇಕು’ ಎಂದು ಹೇಳಿದರು.</p>.<p>ವೇದಿಕೆಯಲ್ಲಿ ವಿಶ್ವ ಹಿಂದೂ ಪರಿಷತ್ತಿನ ಧರ್ಮ ಪ್ರಸಾರ ವಿಭಾಗದ ಪ್ರಾಂತ ಪ್ರಮುಖ ನಾರಾಯಣ ವರ್ಣೇಕರ್, ನಗರದ ಧರ್ಮ ಪ್ರಸಾರ ಪ್ರಮುಖ ಕೃಷ್ಣಮೂರ್ತಿ, ಭದ್ರಾ ಪ್ರಖಂಡ ಅಧ್ಯಕ್ಷ ಮಹದೇವಪ್ಪ ಉಪಸ್ಥಿತರಿದ್ದರು. </p>.<p>ಕಾರ್ಯಕ್ರಮಕ್ಕೂ ಮುನ್ನ ದೇವಾಲಯ ಸಂವರ್ಧನಾ ಸಮಿತಿಯ ತಂಡದಿಂದ ಭಜನಾ ಸಂಕೀರ್ತನೆ ನಡೆಯಿತು. ಪರಿವಾರದ ಕಾರ್ಯಕರ್ತರಾದ ಲಕ್ಷ್ಮಣ, ಮೋಹನ್, ಸುರೇಶ್ ಬಾಬು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಇಲ್ಲಿನ ವಿಶ್ವ ಹಿಂದೂ ಪರಿಷತ್ ಭದ್ರಾ ಪ್ರಖಂಡದಲ್ಲಿ ಸಂತರ ಪಾದಯಾತ್ರೆ ಕಾರ್ಯಕ್ರಮ ಶನಿವಾರ ನಡೆಯಿತು.</p>.<p>ಕಾರ್ಯಕ್ರಮದಲ್ಲಿ ಶಿವಮೊಗ್ಗದ ರಾಮಕೃಷ್ಣ ವಿವೇಕಾನಂದ ಆಶ್ರಮದ ಸ್ವಾಮಿ ವಿನಯಾನಂದ ಸರಸ್ವತಿ ಹಾಗೂ ದುರ್ಗಾಶಕ್ತಿ ಸಪ್ತಶತಿ ಋಷಿಪ್ರಜ್ಞಾ ಆಂದೋಲನದ ಸಂಸ್ಥಾಪಕ ನರೇಂದ್ರ ಗುರೂಜಿ ನೇತೃತ್ವದಲ್ಲಿ ಪಾದಯಾತ್ರೆ ನಡೆಯಿತು. </p>.<p>ಶಿವಮೊಗ್ಗ ನಗರದ ವಿದ್ಯಾನಗರ ಬಡಾವಣೆಯ ಮಾತಂಗಮ್ಮನ ಬೀದಿಯ 40ಕ್ಕಿಂತ ಹೆಚ್ಚು ಮನೆಗಳಿಗೆ ಸಂತರು ಭೇಟಿ ನೀಡಿ ಭಕ್ತರನ್ನು ಆಶೀರ್ವದಿಸಿದರು. ‘ನಾವೆಲ್ಲರೂ ಹಿಂದೂ ಸಮಾಜದ ಅವಯವಗಳು. ನಾವೆಲ್ಲರೂ ಒಂದಾಗಿ ಬಾಳಬೇಕು’ ಎಂಬ ಬಗ್ಗೆ ಜಾಗೃತಿ ಮೂಡಿಸಿದರು.</p>.<p>ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಇಬ್ಬರೂ ಮಾತನಾಡಿ, ‘ಜ್ಞಾನ ಮತ್ತು ಭಕ್ತಿಗಳನ್ನು ಹೆಚ್ಚಿಸಿಕೊಂಡು ಭಗವಂತನನ್ನು ಪಡೆದು ಭವ ಸಾಗರವನ್ನು ದಾಟುವ ಶಕ್ತಿ ಪಡೆಯಬೇಕು’ ಎಂದು ಹೇಳಿದರು.</p>.<p>ವೇದಿಕೆಯಲ್ಲಿ ವಿಶ್ವ ಹಿಂದೂ ಪರಿಷತ್ತಿನ ಧರ್ಮ ಪ್ರಸಾರ ವಿಭಾಗದ ಪ್ರಾಂತ ಪ್ರಮುಖ ನಾರಾಯಣ ವರ್ಣೇಕರ್, ನಗರದ ಧರ್ಮ ಪ್ರಸಾರ ಪ್ರಮುಖ ಕೃಷ್ಣಮೂರ್ತಿ, ಭದ್ರಾ ಪ್ರಖಂಡ ಅಧ್ಯಕ್ಷ ಮಹದೇವಪ್ಪ ಉಪಸ್ಥಿತರಿದ್ದರು. </p>.<p>ಕಾರ್ಯಕ್ರಮಕ್ಕೂ ಮುನ್ನ ದೇವಾಲಯ ಸಂವರ್ಧನಾ ಸಮಿತಿಯ ತಂಡದಿಂದ ಭಜನಾ ಸಂಕೀರ್ತನೆ ನಡೆಯಿತು. ಪರಿವಾರದ ಕಾರ್ಯಕರ್ತರಾದ ಲಕ್ಷ್ಮಣ, ಮೋಹನ್, ಸುರೇಶ್ ಬಾಬು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>