ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್, ‘ಘಟನೆಯ ಬಗ್ಗೆ ಪ್ರಾಥಮಿಕ ತನಿಖೆ ನಡೆಸಲಾಗಿದೆ. ವಿದ್ಯಾರ್ಥಿಗಳು ಜುಲೈ 22ರಂದು ಮಧ್ಯಾಹ್ನ ಸಾಗರ ರಸ್ತೆಯಲ್ಲಿರುವ ಬಾರ್ನಲ್ಲಿ ಮದ್ಯ ಸೇವಿಸಿ ಬಸ್ ಹತ್ತಲು ಕಾಲೇಜಿನ ಹತ್ತಿರ ಬಂದಾಗ ಕಾಲೇಜಿನ ಗೇಟ್ನಲ್ಲಿ ತಡೆಯಲಾಗಿತ್ತು. ಬಳಿಕ ಕಾಲೇಜು ಆಡಳಿತ ಮಂಡಳಿಯು ಪೋಷಕರಿಗೆ ಈ ವಿಚಾರ ತಿಳಿಸಿ, ಅವರೊಂದಿಗೆ ಸಮಾಲೋಚನೆ ನಡೆಸಿದೆ’ ಎಂದು ತಿಳಿಸಿದ್ದಾರೆ.