<p><strong>ಶಿವಮೊಗ್ಗ</strong>: ‘ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ನ ಮುಖ್ಯಸ್ಥ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣ ಮುಚ್ಚಿಹಾಕಲು ಎಸ್ಐಟಿ ರಚಿಸಲಾಗಿದೆ. ಎಸ್ಐಟಿ ಎಂದರೆ ಸ್ಪೆಷಲ್ ಇನ್ವೆಸ್ಟಿಗೇಷನ್ ಟೀಮ್ ಅಲ್ಲ. ಅದು ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಮ್’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದರು. </p>.<p>‘ರಾಯ್ ಆತ್ಮಹತ್ಯೆ ಬಗ್ಗೆ ಅವರ ಕುಟುಂಬದವರೇ ದೂರು ಕೊಟ್ಟಿಲ್ಲ. ಆದರೆ ರಾಜ್ಯ ಸರ್ಕಾರ, ರಾಯ್ ಅವರ ಆಪ್ತ ಎಂದು ಹೇಳಲಾದ ಜಾನ್ ಎಂಬುವವರ ದೂರಿನ ಆಧಾರದ ಮೇಲೆ ತನಿಖೆಗೆ ಎಸ್ಐಟಿ ರಚಿಸಿದೆ. ಆ ಮೂಲಕ ಸತ್ಯ ಮುಚ್ಚಿಹಾಕಲು ಮುಂದಾಗಿದೆ’ ಎಂದು ಭಾನುವಾರ ಸುದ್ದಿಗಾರರ ಎದುರು ದೂರಿದರು. </p>.<p>‘ಆರ್ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣದ ತನಿಖೆಗೆ ಎಸ್ಐಟಿ ರಚಿಸಿ ರಾಜ್ಯ ಸರ್ಕಾರ ತನ್ನ ತಪ್ಪು ಮುಚ್ಚಿಹಾಕುವ ಪ್ರಯತ್ನ ನಡೆಸಿತ್ತು. ರಾಯ್ ಪ್ರಕರಣದಲ್ಲೂ ಅದೇ ಕೆಲಸಕ್ಕೆ ಮುಂದಾಗಿರಬಹುದೆಂಬ ಅನುಮಾನ ಕಾಡುತ್ತಿದೆ’ ಎಂದರು.</p>.ಸಿ.ಜೆ.ರಾಯ್ ಆತ್ಮಹತ್ಯೆ: ತನಿಖೆಗೆ ಎಸ್ಐಟಿ ರಚನೆ.<div><blockquote>ಯಾವುದೋ ಸತ್ಯ ಮುಚ್ಚಿ ಹಾಕುವ ಉದ್ದೇಶದಿಂದ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಎಸ್ಐಟಿ ರಚಿಸಿದೆ. ಹಿಂದಿನಂತೆ ಈಗಲೂ ತನ್ನ ತಪ್ಪುಗಳನ್ನು ಮರೆಮಾಚಲು ಮುಂದಾಗಿದೆ.</blockquote><span class="attribution">– ವಿ.ಸುನಿಲ್ ಕುಮಾರ್, ಬಿಜೆಪಿ ಶಾಸಕ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ‘ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ನ ಮುಖ್ಯಸ್ಥ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣ ಮುಚ್ಚಿಹಾಕಲು ಎಸ್ಐಟಿ ರಚಿಸಲಾಗಿದೆ. ಎಸ್ಐಟಿ ಎಂದರೆ ಸ್ಪೆಷಲ್ ಇನ್ವೆಸ್ಟಿಗೇಷನ್ ಟೀಮ್ ಅಲ್ಲ. ಅದು ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಮ್’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದರು. </p>.<p>‘ರಾಯ್ ಆತ್ಮಹತ್ಯೆ ಬಗ್ಗೆ ಅವರ ಕುಟುಂಬದವರೇ ದೂರು ಕೊಟ್ಟಿಲ್ಲ. ಆದರೆ ರಾಜ್ಯ ಸರ್ಕಾರ, ರಾಯ್ ಅವರ ಆಪ್ತ ಎಂದು ಹೇಳಲಾದ ಜಾನ್ ಎಂಬುವವರ ದೂರಿನ ಆಧಾರದ ಮೇಲೆ ತನಿಖೆಗೆ ಎಸ್ಐಟಿ ರಚಿಸಿದೆ. ಆ ಮೂಲಕ ಸತ್ಯ ಮುಚ್ಚಿಹಾಕಲು ಮುಂದಾಗಿದೆ’ ಎಂದು ಭಾನುವಾರ ಸುದ್ದಿಗಾರರ ಎದುರು ದೂರಿದರು. </p>.<p>‘ಆರ್ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣದ ತನಿಖೆಗೆ ಎಸ್ಐಟಿ ರಚಿಸಿ ರಾಜ್ಯ ಸರ್ಕಾರ ತನ್ನ ತಪ್ಪು ಮುಚ್ಚಿಹಾಕುವ ಪ್ರಯತ್ನ ನಡೆಸಿತ್ತು. ರಾಯ್ ಪ್ರಕರಣದಲ್ಲೂ ಅದೇ ಕೆಲಸಕ್ಕೆ ಮುಂದಾಗಿರಬಹುದೆಂಬ ಅನುಮಾನ ಕಾಡುತ್ತಿದೆ’ ಎಂದರು.</p>.ಸಿ.ಜೆ.ರಾಯ್ ಆತ್ಮಹತ್ಯೆ: ತನಿಖೆಗೆ ಎಸ್ಐಟಿ ರಚನೆ.<div><blockquote>ಯಾವುದೋ ಸತ್ಯ ಮುಚ್ಚಿ ಹಾಕುವ ಉದ್ದೇಶದಿಂದ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಎಸ್ಐಟಿ ರಚಿಸಿದೆ. ಹಿಂದಿನಂತೆ ಈಗಲೂ ತನ್ನ ತಪ್ಪುಗಳನ್ನು ಮರೆಮಾಚಲು ಮುಂದಾಗಿದೆ.</blockquote><span class="attribution">– ವಿ.ಸುನಿಲ್ ಕುಮಾರ್, ಬಿಜೆಪಿ ಶಾಸಕ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>