<p><strong>ಹೊಸನಗರ: </strong>ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರ ಅನುದಾನದ ದುರ್ಬಳಕೆ ಮತ್ತು ಅವ್ಯಹಾರ ನಡೆದಿದ್ದು, ಸಮಗ್ರ ತನಿಖೆಗೆ ಒತ್ತಾಯಿಸಿ ತ್ರಿಣಿವೆ ಗ್ರಾಮ ಪಂಚಾಯಿತಿ ಗ್ರಾಮಸ್ಥರು ಬುಧವಾರ ಪ್ರತಿಭಟನೆ ನಡೆಸಿದರು.</p>.<p>‘ತ್ರಿಣಿವೆ ಗ್ರಾಮ ಪಂಚಾಯಿತಿ ಎದುರು ಧರಣಿ ನಡೆಸಿದ ಗ್ರಾಮಸ್ಥರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಈ ಬಗ್ಗೆ ಗ್ರಾಮಸ್ಥರು ದೂರು ನೀಡುತ್ತಲೇ ಬಂದಿದ್ದಾರೆ. ಲೋಕಾಯುಕ್ತಕ್ಕೂ ದೂರು ಸಲ್ಲಿಸಲಾಗಿದೆ. ಯಾವುದೇ ಪ್ರಯೋಜನ<br />ವಾಗಿಲ್ಲ. ಅಧಿಕಾರಿಗಳು ತಪ್ಪಿತಸ್ಥರನ್ನು ರಕ್ಷಿಸುವ ಕೆಲಸ ಮಾಡುತ್ತಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು’ ಎಂದು ಆಗ್ರಹಿಸಿದರು.</p>.<p>ಗ್ರಾಮ ಪಂಚಾಯಿತಿಯ ಹಿಂದಿನ ಕಾರ್ಯದರ್ಶಿ ವಿ.ಬಿ. ರಮೇಶ ಮತ್ತು ಅಧ್ಯಕ್ಷೆ ಸವಿತಾ ಹಾಗೂ ಕೆಲ ಸದಸ್ಯರು ಅವ್ಯಹಾರದಲ್ಲಿ ಭಾಗಿ ಆಗಿದ್ದಾರೆ. ಕೆಲ ಸದಸ್ಯರು ಈ ಬಾರಿಯೂ ಆಯ್ಕೆಯಾಗಿರುವುದರಿಂದ ಸಾಕ್ಷಿ ನಾಶಪಡಿಸುವ ಸಾಧ್ಯತೆಗಳಿವೆ. ಭ್ರಷ್ಟಾಚಾರದ ಬಗ್ಗೆ ಅಧಿಕಾರಿಗಳು ಮೌನಕ್ಕೆ ಶರಣಾಗಿರುವುದು ಹಲವು ಸಂಶಯಕ್ಕೆ ಎಡೆ ಮಾಡಿದೆ. ಎಲ್ಲಾ ಕಾಮಗಾರಿಗಳ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.</p>.<p>ಸ್ಥಳಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯ ಸುರೇಶ ಸ್ವಾಮಿರಾವ್, ತಾಲ್ಲೂಕು ಪಂಚಾಯಿತಿ ಇ.ಒ. ಪ್ರವೀಣ್, ಎಸ್.ಐ ರಾಜೇಂದ್ರ ನಾಯ್ಕ ಭೇಟಿ ನೀಡಿದರು.</p>.<p>ಕುಮಾರ ತೊಗರೆ, ನರೇಂದ್ರ ಮಾನಿ, ಭಾಸ್ಕರ್ ಶೆಟ್ಟಿ, ಪ್ರಕಾಶ ಶೆಟ್ಟಿ, ನಾ.ಶ್ರೀ. ಶಶಿಧರ್, ದಿಲೀಪ್ ಗೌಡ, ಶ್ರೀಧರ್, ಸದಾನಂದ್, ಗಣೇಶ್ ಶೆಟ್ಟಿ, ದೇವೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸನಗರ: </strong>ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರ ಅನುದಾನದ ದುರ್ಬಳಕೆ ಮತ್ತು ಅವ್ಯಹಾರ ನಡೆದಿದ್ದು, ಸಮಗ್ರ ತನಿಖೆಗೆ ಒತ್ತಾಯಿಸಿ ತ್ರಿಣಿವೆ ಗ್ರಾಮ ಪಂಚಾಯಿತಿ ಗ್ರಾಮಸ್ಥರು ಬುಧವಾರ ಪ್ರತಿಭಟನೆ ನಡೆಸಿದರು.</p>.<p>‘ತ್ರಿಣಿವೆ ಗ್ರಾಮ ಪಂಚಾಯಿತಿ ಎದುರು ಧರಣಿ ನಡೆಸಿದ ಗ್ರಾಮಸ್ಥರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಈ ಬಗ್ಗೆ ಗ್ರಾಮಸ್ಥರು ದೂರು ನೀಡುತ್ತಲೇ ಬಂದಿದ್ದಾರೆ. ಲೋಕಾಯುಕ್ತಕ್ಕೂ ದೂರು ಸಲ್ಲಿಸಲಾಗಿದೆ. ಯಾವುದೇ ಪ್ರಯೋಜನ<br />ವಾಗಿಲ್ಲ. ಅಧಿಕಾರಿಗಳು ತಪ್ಪಿತಸ್ಥರನ್ನು ರಕ್ಷಿಸುವ ಕೆಲಸ ಮಾಡುತ್ತಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು’ ಎಂದು ಆಗ್ರಹಿಸಿದರು.</p>.<p>ಗ್ರಾಮ ಪಂಚಾಯಿತಿಯ ಹಿಂದಿನ ಕಾರ್ಯದರ್ಶಿ ವಿ.ಬಿ. ರಮೇಶ ಮತ್ತು ಅಧ್ಯಕ್ಷೆ ಸವಿತಾ ಹಾಗೂ ಕೆಲ ಸದಸ್ಯರು ಅವ್ಯಹಾರದಲ್ಲಿ ಭಾಗಿ ಆಗಿದ್ದಾರೆ. ಕೆಲ ಸದಸ್ಯರು ಈ ಬಾರಿಯೂ ಆಯ್ಕೆಯಾಗಿರುವುದರಿಂದ ಸಾಕ್ಷಿ ನಾಶಪಡಿಸುವ ಸಾಧ್ಯತೆಗಳಿವೆ. ಭ್ರಷ್ಟಾಚಾರದ ಬಗ್ಗೆ ಅಧಿಕಾರಿಗಳು ಮೌನಕ್ಕೆ ಶರಣಾಗಿರುವುದು ಹಲವು ಸಂಶಯಕ್ಕೆ ಎಡೆ ಮಾಡಿದೆ. ಎಲ್ಲಾ ಕಾಮಗಾರಿಗಳ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.</p>.<p>ಸ್ಥಳಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯ ಸುರೇಶ ಸ್ವಾಮಿರಾವ್, ತಾಲ್ಲೂಕು ಪಂಚಾಯಿತಿ ಇ.ಒ. ಪ್ರವೀಣ್, ಎಸ್.ಐ ರಾಜೇಂದ್ರ ನಾಯ್ಕ ಭೇಟಿ ನೀಡಿದರು.</p>.<p>ಕುಮಾರ ತೊಗರೆ, ನರೇಂದ್ರ ಮಾನಿ, ಭಾಸ್ಕರ್ ಶೆಟ್ಟಿ, ಪ್ರಕಾಶ ಶೆಟ್ಟಿ, ನಾ.ಶ್ರೀ. ಶಶಿಧರ್, ದಿಲೀಪ್ ಗೌಡ, ಶ್ರೀಧರ್, ಸದಾನಂದ್, ಗಣೇಶ್ ಶೆಟ್ಟಿ, ದೇವೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>