<p><strong>ರಿಪ್ಪನ್ಪೇಟೆ:</strong> ನಾಲ್ಕು ಜಿಲ್ಲಾ ಕೇಂದ್ರಗಳಿಗೆ ಸಂಪರ್ಕ ಕಲ್ಪಿಸುವ ಇಲ್ಲಿನ ವಿನಾಯಕ ವೃತ್ತ ವಿಸ್ತರಣೆ ವಿಚಾರವಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಅಧಿಕಾರಿಗಳೊಂದಿಗೆ ಈಚೆಗೆ ಸ್ಥಳ ಪರಿಶೀಲಿಸಿದರು.</p>.<p>‘ಸಾರ್ವಜನಿಕರ ಅನುಕೂಲಕ್ಕಾಗಿ ವಿನಾಯಕ ವೃತ್ತ ವಿಸ್ತರಣೆ ಅಗತ್ಯವಿದೆ. ಸುಸಜ್ಜಿತ ಪ್ರಯಾಣಿಕರ ತಂಗುದಾಣ, ನಾಮಫಲಕ ಹಾಗೂ ವಿದ್ಯುತ್ ದೀಪ ಅಳವಡಿಕೆ, ಆಟೊ ನಿಲ್ದಾಣ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಹೈಮಾಸ್ಟ್ ದೀಪ ಅಳವಡಿಕೆ ಕುರಿತು ನೀಲನಕ್ಷೆ ತಯಾರಿಸಲಾಗಿದೆ’ ಎಂದು ಈ ವೇಳೆ ಬೇಳೂರು ಹೇಳಿದರು.</p>.<p>ಈಗಿರುವ ಒಳ ಚರಂಡಿ ಹೊರತುಪಡಿಸಿ, ಆರು ಅಡಿ ಜಾಗವನ್ನು ತೆರವುಗೊಳಿಸುವಂತೆ ಲೋಕೋಪಯೋಗಿ ಹಾಗೂ ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ನೀಲನಕ್ಷೆಯಂತೆ ಶೀಘ್ರವೇ ಕಾಮಗಾರಿಗೆ ಚಾಲನೆ ನೀಡುವಂತೆ ಗುತ್ತಿಗೆದಾರರಿಗೆ ತಿಳಿಸಿದರು. </p>.<p>ವಿನಾಯಕ ವೃತ್ತದ ಅಭಿವೃದ್ಧಿ ಕಾಮಗಾರಿಗೆ ₹2 ಕೋಟಿ ಮಂಜೂರಾತಿ ದೊರೆತಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಮಳೆ ಕಡಿಮೆಯಾದ ಕೂಡಲೇ ಕಾಮಗಾರಿ ಪ್ರಾರಂಭಗೊಳ್ಳಲಿದೆ ಎಂದು ಬೇಳೂರು ಭರವಸೆ ನೀಡಿದರು. </p>.<p>ಪಟ್ಟಣದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಕೆಪಿಎಸ್ಸಿ ಶಾಲೆಗೆ ಅನುಮೋದನೆ ದೊರೆತ ಕಾರಣ, ಶಿವಮೊಗ್ಗ ಮುಖ್ಯರಸ್ತೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಜಾಗವನ್ನು ಸುಸಜ್ಜಿತ ಬಸ್ ನಿಲ್ದಾಣಕ್ಕೆ ಮೀಸಲಿಡುವ ಚಿಂತನೆ ನಡೆದಿದೆ ಎಂದರು.</p>.<p>ಗಣಪತಿ ದೇವಸ್ಥಾನದ ಹಿಂಬದಿಯಲ್ಲಿ ಅಪೂರ್ಣ ಕಾಮಗಾರಿಯಿಂದ ಶಿಥಿಲಗೊಂಡ ಸಭಾಭವನವನ್ನು ಕೆಡವಿ, ನೂತನ ಸಭಾಭವನ ನಿರ್ಮಾಣಕ್ಕೆ ₹25 ಲಕ್ಷ ಅನುದಾನ ನೀಡುವ ಭರವಸೆ ನೀಡಿದರು.</p>.<p>ಹೊಸನಗರ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿಗೌಡ, ಹೋಬಳಿ ಘಟಕದ ಕಾಂಗ್ರೆಸ್ ಅಧ್ಯಕ್ಷ ಗಣಪತಿ ಗವಟೂರು, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂಎಂ ಪರಮೇಶ್, ಗ್ರಾಮ ಪಂಚಾಯಿತಿ ಸದಸ್ಯರು, ಪಕ್ಷದ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಿಪ್ಪನ್ಪೇಟೆ:</strong> ನಾಲ್ಕು ಜಿಲ್ಲಾ ಕೇಂದ್ರಗಳಿಗೆ ಸಂಪರ್ಕ ಕಲ್ಪಿಸುವ ಇಲ್ಲಿನ ವಿನಾಯಕ ವೃತ್ತ ವಿಸ್ತರಣೆ ವಿಚಾರವಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಅಧಿಕಾರಿಗಳೊಂದಿಗೆ ಈಚೆಗೆ ಸ್ಥಳ ಪರಿಶೀಲಿಸಿದರು.</p>.<p>‘ಸಾರ್ವಜನಿಕರ ಅನುಕೂಲಕ್ಕಾಗಿ ವಿನಾಯಕ ವೃತ್ತ ವಿಸ್ತರಣೆ ಅಗತ್ಯವಿದೆ. ಸುಸಜ್ಜಿತ ಪ್ರಯಾಣಿಕರ ತಂಗುದಾಣ, ನಾಮಫಲಕ ಹಾಗೂ ವಿದ್ಯುತ್ ದೀಪ ಅಳವಡಿಕೆ, ಆಟೊ ನಿಲ್ದಾಣ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಹೈಮಾಸ್ಟ್ ದೀಪ ಅಳವಡಿಕೆ ಕುರಿತು ನೀಲನಕ್ಷೆ ತಯಾರಿಸಲಾಗಿದೆ’ ಎಂದು ಈ ವೇಳೆ ಬೇಳೂರು ಹೇಳಿದರು.</p>.<p>ಈಗಿರುವ ಒಳ ಚರಂಡಿ ಹೊರತುಪಡಿಸಿ, ಆರು ಅಡಿ ಜಾಗವನ್ನು ತೆರವುಗೊಳಿಸುವಂತೆ ಲೋಕೋಪಯೋಗಿ ಹಾಗೂ ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ನೀಲನಕ್ಷೆಯಂತೆ ಶೀಘ್ರವೇ ಕಾಮಗಾರಿಗೆ ಚಾಲನೆ ನೀಡುವಂತೆ ಗುತ್ತಿಗೆದಾರರಿಗೆ ತಿಳಿಸಿದರು. </p>.<p>ವಿನಾಯಕ ವೃತ್ತದ ಅಭಿವೃದ್ಧಿ ಕಾಮಗಾರಿಗೆ ₹2 ಕೋಟಿ ಮಂಜೂರಾತಿ ದೊರೆತಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಮಳೆ ಕಡಿಮೆಯಾದ ಕೂಡಲೇ ಕಾಮಗಾರಿ ಪ್ರಾರಂಭಗೊಳ್ಳಲಿದೆ ಎಂದು ಬೇಳೂರು ಭರವಸೆ ನೀಡಿದರು. </p>.<p>ಪಟ್ಟಣದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಕೆಪಿಎಸ್ಸಿ ಶಾಲೆಗೆ ಅನುಮೋದನೆ ದೊರೆತ ಕಾರಣ, ಶಿವಮೊಗ್ಗ ಮುಖ್ಯರಸ್ತೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಜಾಗವನ್ನು ಸುಸಜ್ಜಿತ ಬಸ್ ನಿಲ್ದಾಣಕ್ಕೆ ಮೀಸಲಿಡುವ ಚಿಂತನೆ ನಡೆದಿದೆ ಎಂದರು.</p>.<p>ಗಣಪತಿ ದೇವಸ್ಥಾನದ ಹಿಂಬದಿಯಲ್ಲಿ ಅಪೂರ್ಣ ಕಾಮಗಾರಿಯಿಂದ ಶಿಥಿಲಗೊಂಡ ಸಭಾಭವನವನ್ನು ಕೆಡವಿ, ನೂತನ ಸಭಾಭವನ ನಿರ್ಮಾಣಕ್ಕೆ ₹25 ಲಕ್ಷ ಅನುದಾನ ನೀಡುವ ಭರವಸೆ ನೀಡಿದರು.</p>.<p>ಹೊಸನಗರ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿಗೌಡ, ಹೋಬಳಿ ಘಟಕದ ಕಾಂಗ್ರೆಸ್ ಅಧ್ಯಕ್ಷ ಗಣಪತಿ ಗವಟೂರು, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂಎಂ ಪರಮೇಶ್, ಗ್ರಾಮ ಪಂಚಾಯಿತಿ ಸದಸ್ಯರು, ಪಕ್ಷದ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>