ಶೀಘ್ರ ಪ್ರಾಥಮಿಕ ಗಿರಣಿ ಪುನರಾರಂಭ
‘ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸ್ಪಷ್ಟ ನಿರ್ದೇಶನದೊಂದಿಗೆ ಸೇಲ್ ಆಡಳಿತ ಮಂಡಳಿಯು ವಿಐಎಸ್ಎಲ್ನಲ್ಲಿ ಉತ್ಪಾದನಾ ಚಟುವಟಿಕೆ ಪುನರಾರಂಭಿಸಲು ಅಂತಿಮವಾಗಿ ಒಪ್ಪಿಕೊಂಡಿದೆ. ಮುಂದಿನ ದಿನಗಳಲ್ಲಿ ಪ್ರಾಥಮಿಕ ಗಿರಣಿ ಪುನರಾರಂಭವಾಗಲಿದೆ’ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.