<p><strong>ಭದ್ರಾವತಿ</strong>: ಇಲ್ಲಿನ ವಿಐಎಸ್ಎಲ್ ಕಾರ್ಖಾನೆಯ ಪುನಃಶ್ಚೇತನಕ್ಕೆ ₹1 ಕೋಟಿ ದೇಣಿಗೆ ನೀಡುವುದಾಗಿ ಶಾಸಕ ಬಿ.ಕೆ.ಸಂಗಮೇಶ್ವರ ತಮ್ಮ ಬಳಿ ವಾಗ್ದಾನ ಮಾಡಿದ್ದಾರೆ ಎಂದು ಸಿರಿಗೆರೆ ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು. </p>.<p>ಭದ್ರಾವತಿಯ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಭಾನುವಾರ ರಾತ್ರಿ ಆಶೀರ್ವಚನದಲ್ಲಿ ಈ ವಿಚಾರ ಪ್ರಸ್ತಾಪಿಸಿದ ಸ್ವಾಮೀಜಿ, ವಿಐಎಸ್ಎಲ್ ಕಾರ್ಖಾನೆಯ ಪುನಶ್ಚೇತನಕ್ಕೆ ಸಿರಿಗೆರೆ ಮಠದಿಂದ ₹5 ಕೋಟಿ ಕೊಡುವುದಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಹೇಳಿದ್ದೇನೆ. ಅದರಲ್ಲಿ ₹1 ಕೋಟಿ ಕೊಡುವುದಾಗಿ ಬಿ.ಕೆ.ಸಂಗಮೇಶ್ವರ ಹೇಳಿದ್ದಾರೆ. ಉಳಿದ ₹4 ಕೋಟಿ ಹೊಂದಿಸಲು ತರಳಬಾಳು ಹುಣ್ಣಿಮೆಗೆ ಸಂಗ್ರಹಿಸಿದ ದೇಣಿಗೆಯನ್ನು ಬಳಸಲಾಗುವುದು. ಅದರಲ್ಲಿ ಹಣ ಕಡಿಮೆ ಆದಲ್ಲಿ ಜೋಳಿಗೆ ಹಿಡಿದು ಉಳಿದ ಮೊತ್ತ ಸಂಗ್ರಹಿಸುವುದಾಗಿ ಹೇಳಿದರು. </p>.<p>ಈ ಸಂದರ್ಭದಲ್ಲಿ ಹುಣ್ಣಿಮೆ ಮಹೋತ್ಸವದ ವೇದಿಕೆಯಲ್ಲಿದ್ದ ಬಿ.ಕೆ.ಸಂಗಮೇಶ್ವರ ಒಪ್ಪಿಗೆ ಸೂಚಿಸಿದರು. </p>.<p>ತರಳಬಾಳು ಹುಣ್ಣಿಮೆಯ ಮೊದಲ ದಿನದ ಕಾರ್ಯಕ್ರಮದಲ್ಲಿ ಶನಿವಾರ ಪಾಲ್ಗೊಂಡಿದ್ದ ಕೇಂದ್ರ ಉಕ್ಕು ಹಾಗೂ ಭಾರಿ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಭಾರತೀಯ ಉಕ್ಕು ಪ್ರಾಧಿಕಾರದಿಂದ ₹5,000 ಕೋಟಿ ವೆಚ್ಚದಲ್ಲಿ ವಿಐಎಸ್ಎಲ್ ಕಾರ್ಖಾನೆ ಪುನಶ್ಚೇತನಗೊಳಿಸುವುದಾಗಿ ಘೋಷಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭದ್ರಾವತಿ</strong>: ಇಲ್ಲಿನ ವಿಐಎಸ್ಎಲ್ ಕಾರ್ಖಾನೆಯ ಪುನಃಶ್ಚೇತನಕ್ಕೆ ₹1 ಕೋಟಿ ದೇಣಿಗೆ ನೀಡುವುದಾಗಿ ಶಾಸಕ ಬಿ.ಕೆ.ಸಂಗಮೇಶ್ವರ ತಮ್ಮ ಬಳಿ ವಾಗ್ದಾನ ಮಾಡಿದ್ದಾರೆ ಎಂದು ಸಿರಿಗೆರೆ ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು. </p>.<p>ಭದ್ರಾವತಿಯ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಭಾನುವಾರ ರಾತ್ರಿ ಆಶೀರ್ವಚನದಲ್ಲಿ ಈ ವಿಚಾರ ಪ್ರಸ್ತಾಪಿಸಿದ ಸ್ವಾಮೀಜಿ, ವಿಐಎಸ್ಎಲ್ ಕಾರ್ಖಾನೆಯ ಪುನಶ್ಚೇತನಕ್ಕೆ ಸಿರಿಗೆರೆ ಮಠದಿಂದ ₹5 ಕೋಟಿ ಕೊಡುವುದಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಹೇಳಿದ್ದೇನೆ. ಅದರಲ್ಲಿ ₹1 ಕೋಟಿ ಕೊಡುವುದಾಗಿ ಬಿ.ಕೆ.ಸಂಗಮೇಶ್ವರ ಹೇಳಿದ್ದಾರೆ. ಉಳಿದ ₹4 ಕೋಟಿ ಹೊಂದಿಸಲು ತರಳಬಾಳು ಹುಣ್ಣಿಮೆಗೆ ಸಂಗ್ರಹಿಸಿದ ದೇಣಿಗೆಯನ್ನು ಬಳಸಲಾಗುವುದು. ಅದರಲ್ಲಿ ಹಣ ಕಡಿಮೆ ಆದಲ್ಲಿ ಜೋಳಿಗೆ ಹಿಡಿದು ಉಳಿದ ಮೊತ್ತ ಸಂಗ್ರಹಿಸುವುದಾಗಿ ಹೇಳಿದರು. </p>.<p>ಈ ಸಂದರ್ಭದಲ್ಲಿ ಹುಣ್ಣಿಮೆ ಮಹೋತ್ಸವದ ವೇದಿಕೆಯಲ್ಲಿದ್ದ ಬಿ.ಕೆ.ಸಂಗಮೇಶ್ವರ ಒಪ್ಪಿಗೆ ಸೂಚಿಸಿದರು. </p>.<p>ತರಳಬಾಳು ಹುಣ್ಣಿಮೆಯ ಮೊದಲ ದಿನದ ಕಾರ್ಯಕ್ರಮದಲ್ಲಿ ಶನಿವಾರ ಪಾಲ್ಗೊಂಡಿದ್ದ ಕೇಂದ್ರ ಉಕ್ಕು ಹಾಗೂ ಭಾರಿ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಭಾರತೀಯ ಉಕ್ಕು ಪ್ರಾಧಿಕಾರದಿಂದ ₹5,000 ಕೋಟಿ ವೆಚ್ಚದಲ್ಲಿ ವಿಐಎಸ್ಎಲ್ ಕಾರ್ಖಾನೆ ಪುನಶ್ಚೇತನಗೊಳಿಸುವುದಾಗಿ ಘೋಷಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>