‘ಖಾಸಗೀಕರಣ ಬೇಡ ಎಂದು ಸಂಸದ ರಾಘವೇಂದ್ರ ಅವರ ಮನೆ, ಕಚೇರಿ, ದೆಹಲಿಯ ಕಚೇರಿಗೆಲ್ಲ ಭೇಟಿ ನೀಡಿ, ಮನವಿ ಕೊಟ್ಟಿದ್ದಾಯ್ತು. ಯಾವುದೇ ಪ್ರಯೋಜನವಾಗಲಿಲ್ಲ. ವಿಐಎಸ್ಎಲ್ ಕಾರ್ಖಾನೆ ಖರೀದಿಗೆ ಬರುತ್ತಿರುವುದು ಯಾರು ಅನ್ನುವುದನ್ನು ಗೌಪ್ಯವಾಗಿ ಇರಿಸಲಾಗಿದೆ. ಮಾಹಿತಿ ಹಕ್ಕಿನಲ್ಲಿ ಕೇಳದರೂ ಮಾಹಿತಿ ನೀಡುತ್ತಿಲ್ಲ. ಈಗ ಬರುತ್ತಿರುವವರು ಕಾರ್ಖಾನೆ ನಡೆಸುತ್ತಾರೋ, ರಿಯಲ್ ಎಸ್ಟೇಟ್ ದಂಧೆ ಮಾಡಲು ಬರುತ್ತಿದ್ದಾರೋ ಅನ್ನುವುದು ಗೊತ್ತಾಗುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.