ರಾಜ್ಯ ಸರ್ಕಾರದಿಂದ ಕಾರ್ಖಾನೆಗೆ ಅಗತ್ಯವಿರುವ ಗಣಿ ಮಂಜೂರಾತಿ ಮಾಡಿಸಿಕೊಡಲಾಗಿದೆ. ಅಲ್ಲದೆ ಕೇಂದ್ರ ಸರ್ಕಾರಕ್ಕೆ ಬಂಡವಾಳ ತೊಡಗಿಸುವಂತೆ ಮನವಿ ಮಾಡಲಾಗಿದೆ. ಇದೀಗ ಕೇಂದ್ರ ಸರ್ಕಾರ ಇಚ್ಛಾಶಕ್ತಿ ಪ್ರದರ್ಶಿಸಬೇಕಾಗಿದೆ
– ಬಿ.ಕೆ. ಸಂಗಮೇಶ್ವರ, ಭದ್ರಾವತಿ ಶಾಸಕ
ಈ ಹಿಂದೆ ಉಕ್ಕುಪ್ರಾಧಿಕಾರದ ವ್ಯಾಪ್ತಿಯ ಹಲವು ಕಾರ್ಖಾನೆಗಳು ನಷ್ಟಕ್ಕೆ ಒಳಗಾಗಿದ್ದವು. ಅಲ್ಲಿ ಹೆಚ್ಚಿನ ಬಂಡವಾಳ ತೊಡಗಿಸಿ ಅಭಿವೃದ್ಧಿಗೊಳಿಸಲಾಗಿದೆ. ಆದರೆ ವಿಐಎಸ್ಎಲ್ ವಿಚಾರದಲ್ಲಿ ಮಲತಾಯಿಧೋರಣೆ ಅನುಸರಿಸಲಾಗುತ್ತಿದೆ. ಕೇಂದ್ರ ಸರ್ಕಾರ ಕಾರ್ಖಾನೆ ಮುಚ್ಚುವ ಆದೇಶ ಹಿಂಪಡೆಯಬೇಕು
–ಜೆ. ಎನ್. ಚಂದ್ರಹಾಸ ವಿಐಎಸ್ಎಲ್ ಕಾರ್ಮಿಕ ಸಂಘದ ಮಾಜಿ ಅಧ್ಯಕ್ಷ