<p><strong>ಶಿವಮೊಗ್ಗ: </strong>ಕಾನು ಅರಣ್ಯ ಖಾಸಗಿ ಪಾಲಾಗುವುದನ್ನು ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಸಾಗರ ತಾಲ್ಲೂಕಿನ ಯಡೇಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಗ್ರಾಮ ಪಂಚಾಯಿತಿ ಜೀವ ವೈವಿಧ್ಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಜಿಲ್ಲೆಯ ಹಲವು ಭಾಗಗಳಲ್ಲಿ ಕಾನು ಅರಣ್ಯ, ಡೀಮ್ಡ್ ಅರಣ್ಯ ಪ್ರದೇಶಗಳನ್ನು ಕಬಳಿಸುವ ಕೆಲಸ ನಡೆಯುತ್ತಿದೆ. ಇಂತಹ ಹಲವು ದೂರುಗಳು ಮಂಡಳಿ ಮುಂದೆ ಬಂದಿವೆ. ಮಲೆನಾಡಿನ ಜನರ ಬದುಕಿನ ಭಾಗವಾದ ಇಂತಹ ಅರಣ್ಯಗಳನ್ನು ಪಟ್ಟಭದ್ರರು ವಶಕ್ಕೆ ಪಡೆಯಲು ಅವಕಾಶ ನೀಡಬಾರದು ಎಂದರು.</p>.<p>ಆನಂದಪುರ ಸಮೀಪ ಗಂಟಿಕೊಪ್ಪ, ಅಡೂರು ಕಾನು ಅರಣ್ಯಗಳನ್ನು ಖಾಸಗಿ ಪಾಲಾಗುವುದನ್ನು ತಪ್ಪಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದರು.</p>.<p>ಬಳಿಕ ವಿವಿಧ ಇಲಾಖೆ ಅಧಿಕಾರಿಗಳ ಜತೆ ಗಂಟಿಕೊಪ್ಪ ಮತ್ತು ಅಡೂರು, ಇರುವಕ್ಕಿ ಕಾನು ಅರಣ್ಯ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.</p>.<p>‘150 ಎಕರೆ ಪ್ರದೇಶದಲ್ಲಿ ಬಹು ಅಪರೂಪದ ಭಾರಿ ಗಾತ್ರದ 15 ಸಾವಿರ ಮರಗಳು ಈ ಪ್ರದೇಶದಲ್ಲಿ ಇವೆ. ಇವು ಪಾರಂಪರಿಕ ವೃಕ್ಷಗಳಾಗಿದ್ದು, ಅವುಗಳನ್ನು ಪಾರಂಪರಿಕ ಜೈವಿಕ ಕಾನು ಎಂದು ಗುರುತಿಸಲಾಯಿತು’ ಎಂದು ಅಶೀಸರ ತಿಳಿಸಿದರು.</p>.<p>ಬಳಿಕ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಗ್ರಾಮ ಪಂಚಾಯಿತಿ ಜೀವ ವೈವಿಧ್ಯ ಮಂಡಳಿ ಸಮಿತಿ ಸಭೆಯಲ್ಲೂ ಗ್ರಾಮಸ್ಥರು ಗ್ರಾಮದ ಕೆರೆ, ಹಳ್ಳ, ಅರಣ್ಯ ಪ್ರದೇಶ, ಗೋಮಾಳ ಒಟ್ಟು 74 ಎಕರೆ ಜಾಗವನ್ನು ಖಾಸಗಿಯವರು ಕಬಳಿಕೆ ಮಾಡದಂತೆ ತಡೆಯಬೇಕು ಎಂದು ಮನವಿ ಮಾಡಿದರು.</p>.<p>ತಕ್ಷಣ ಸಂಪೂರ್ಣ ಮಾಹಿತಿ ಪಡೆದು ಕಾನು ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಶೀಸರ ಅವರು ತೀರ್ಥಹಳ್ಳಿ ತಹಶೀಲ್ದಾರ್ಗೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಕಾನು ಅರಣ್ಯ ಖಾಸಗಿ ಪಾಲಾಗುವುದನ್ನು ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಸಾಗರ ತಾಲ್ಲೂಕಿನ ಯಡೇಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಗ್ರಾಮ ಪಂಚಾಯಿತಿ ಜೀವ ವೈವಿಧ್ಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಜಿಲ್ಲೆಯ ಹಲವು ಭಾಗಗಳಲ್ಲಿ ಕಾನು ಅರಣ್ಯ, ಡೀಮ್ಡ್ ಅರಣ್ಯ ಪ್ರದೇಶಗಳನ್ನು ಕಬಳಿಸುವ ಕೆಲಸ ನಡೆಯುತ್ತಿದೆ. ಇಂತಹ ಹಲವು ದೂರುಗಳು ಮಂಡಳಿ ಮುಂದೆ ಬಂದಿವೆ. ಮಲೆನಾಡಿನ ಜನರ ಬದುಕಿನ ಭಾಗವಾದ ಇಂತಹ ಅರಣ್ಯಗಳನ್ನು ಪಟ್ಟಭದ್ರರು ವಶಕ್ಕೆ ಪಡೆಯಲು ಅವಕಾಶ ನೀಡಬಾರದು ಎಂದರು.</p>.<p>ಆನಂದಪುರ ಸಮೀಪ ಗಂಟಿಕೊಪ್ಪ, ಅಡೂರು ಕಾನು ಅರಣ್ಯಗಳನ್ನು ಖಾಸಗಿ ಪಾಲಾಗುವುದನ್ನು ತಪ್ಪಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದರು.</p>.<p>ಬಳಿಕ ವಿವಿಧ ಇಲಾಖೆ ಅಧಿಕಾರಿಗಳ ಜತೆ ಗಂಟಿಕೊಪ್ಪ ಮತ್ತು ಅಡೂರು, ಇರುವಕ್ಕಿ ಕಾನು ಅರಣ್ಯ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.</p>.<p>‘150 ಎಕರೆ ಪ್ರದೇಶದಲ್ಲಿ ಬಹು ಅಪರೂಪದ ಭಾರಿ ಗಾತ್ರದ 15 ಸಾವಿರ ಮರಗಳು ಈ ಪ್ರದೇಶದಲ್ಲಿ ಇವೆ. ಇವು ಪಾರಂಪರಿಕ ವೃಕ್ಷಗಳಾಗಿದ್ದು, ಅವುಗಳನ್ನು ಪಾರಂಪರಿಕ ಜೈವಿಕ ಕಾನು ಎಂದು ಗುರುತಿಸಲಾಯಿತು’ ಎಂದು ಅಶೀಸರ ತಿಳಿಸಿದರು.</p>.<p>ಬಳಿಕ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಗ್ರಾಮ ಪಂಚಾಯಿತಿ ಜೀವ ವೈವಿಧ್ಯ ಮಂಡಳಿ ಸಮಿತಿ ಸಭೆಯಲ್ಲೂ ಗ್ರಾಮಸ್ಥರು ಗ್ರಾಮದ ಕೆರೆ, ಹಳ್ಳ, ಅರಣ್ಯ ಪ್ರದೇಶ, ಗೋಮಾಳ ಒಟ್ಟು 74 ಎಕರೆ ಜಾಗವನ್ನು ಖಾಸಗಿಯವರು ಕಬಳಿಕೆ ಮಾಡದಂತೆ ತಡೆಯಬೇಕು ಎಂದು ಮನವಿ ಮಾಡಿದರು.</p>.<p>ತಕ್ಷಣ ಸಂಪೂರ್ಣ ಮಾಹಿತಿ ಪಡೆದು ಕಾನು ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಶೀಸರ ಅವರು ತೀರ್ಥಹಳ್ಳಿ ತಹಶೀಲ್ದಾರ್ಗೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>