ಮುಂಗಾರು ಪ್ರಾರಂಭವಾಗಿರುವುದರಿಂದ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿದ್ದು, ಹೆಚ್ಚಿನ ಪ್ರಮಾಣದ ಒಳಹರಿವು ಬಂದಲ್ಲಿ ಯಾವ ಕ್ಷಣದಲ್ಲಾದರೂ ನದಿಗೆ ನೀರನ್ನು ಬಿಡುವ ಸಾಧ್ಯತೆ ಇದೆ.ತುಂಗಾ ನದಿಯ ಪಾತ್ರದಲ್ಲಿ ಬರುವ ಗ್ರಾಮಗಳ ಪ್ರದೇಶದ ಜನರು ಹಾಗೂ ತಗ್ಗು ಪ್ರದೇಶಗಳ ಜನರು ಆ ವ್ಯಾಪ್ತಿಯಲ್ಲಿ ಕೃಷಿ ಸೇರಿ ಯಾವುದೇ ಚಟುವಟಿಕೆ ಕೈಗೊಳ್ಳಬಾರದು. ಜಾನುವಾರು ಮೇಯಲು ಬಿಡಬಾರದು. ಮುನ್ನೆಚ್ಚರಿಕೆ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಅವರು ಮನವಿ ಮಾಡಿದ್ದಾರೆ.