ನಂತರ ಈ ಭಾಗದ ಜನರಿಗೆ ನೀರಾವರಿ ಸೌಲಭ್ಯ ಕಲ್ಪಿಸಿಕೊಡಬೇಕು ಎಂದು ಅಂದಿನ ಶಾಸಕರು, ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಪಾದಯಾತ್ರೆಯನ್ನು ಸಹ ಹಮ್ಮಿಕೊಳ್ಳಲಾಗಿತ್ತು. ರೈತ ಸಂಘಟನೆಗಳು, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಕೂಡ ನೀರಾವರಿಗಾಗಿ ಪ್ರತಿಭಟನೆ ಮಾಡಿದ್ದವು. ಈ ಸಂದರ್ಭದಲ್ಲಿ ವಿರೋಧ ಪಕ್ಷದ ಸ್ಥಾನದಲ್ಲಿದ್ದಯುಡಿಯೂರಪ್ಪ ಅವರು ಸಚಿವ ಡಿ.ಕೆ.ಶಿವಕುಮಾರ್ ಅವರ ಮನೆಗೆ ಸಂಸದ ರಾಘವೇಂದ್ರ ಅವರ ಜತೆಗೆ ತೆರಳಿ ನೀರಾವರಿ ಯೋಜನೆಗಾಗಿ ಮನವಿ ಮಾಡಿದ್ದರು.