ತಾಲ್ಲೂಕಿನಲ್ಲಿ ಬಿಸಿಲ ತಾಪಮಾನ ಹೆಚ್ಚಿದ್ದು, ಕೆರೆಗಳು ಒಣಗುತ್ತಿವೆ. ಕೆಲವು ಗ್ರಾಮಗಳಲ್ಲಿ ಅಂತರ್ಜಲ ಮಟ್ಟ ಕುಸಿದಿರುವುದರಿಂದ ಕೊಳವೆ ಬಾವಿಗಳಲ್ಲಿ ನೀರು ಬರುತ್ತಿಲ್ಲ. ಗ್ರಾಮಸ್ಥರು ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು ಎಂದು ಮನವಿ ಮಾಡುತ್ತಿದ್ದಾರೆ. ಗ್ರಾಮ ಪಂಚಾಯಿತಿ ಕೆಲವು ಗ್ರಾಮಗಳಲ್ಲಿ ಖಾಸಗಿ ಮಾಲೀಕರ ಕೊಳವೆ ಬಾವಿಯಿಂದ ಗ್ರಾಮಸ್ಥರಿಗೆ ಕುಡಿಯುವ ನೀರಿನ ಸರಬರಾಜು ಮಾಡುವ ಕಾರ್ಯ ಮಾಡುತ್ತಿದೆ. ಕೆಲವು ಗ್ರಾಮಗಳಲ್ಲಿ ಖಾಸಗಿ ಜಮೀನಿನ ಮಾಲೀಕರು ಕೃಷಿ ಚಟುವಟಿಕೆ ನಡೆಸಲು ನೀರು ಕಡಿಮೆಯಾಗುತ್ತದೆ ಎನ್ನುವ ಉದ್ದೇಶದಿಂದ ನೀರು ನೀಡಲು ಹಿಂದೇಟು ಹಾಕುತ್ತಿದ್ದಾರೆ.