<p><strong>ರಿಪ್ಪನ್ಪೇಟೆ</strong>: ಕೇರಳದ ವಯನಾಡಿನಲ್ಲಿ ಭಾರಿ ಮಳೆಯಿಂದ ಸಂಭವಿಸಿದ ಭೂ ಕುಸಿತದಿಂದ ಹಾನಿಗೊಳಗಾದ ಸಂತ್ರಸ್ತರಿಗೆ ಇಲ್ಲಿನ ರಾಮಕೃಷ್ಣ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ, ಕಬಡ್ಡಿ ಪಟು ಆರ್. ಶ್ರೇಯಾ ಹಾಗೂ ಆಕೆಯ ಸೋದರ ಶ್ರವಂತ್ ₹ 15,000 ದೇಣಿಗೆ ನೀಡಿದ್ದಾರೆ.</p>.<p>ಈಚೆಗೆ ಹೈದರಾಬಾದ್ನಲ್ಲಿ ನಡೆದ 14 ವರ್ಷದೊಳಗಿನ ಬಾಲಕಿಯರ ಕಬಡ್ಡಿ ಪಂದ್ಯಾವಳಿಯಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದ್ದ ಶ್ರೇಯಾ ಹಾಗೂ ಇದೇ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಶ್ರವಂತ್ ಅವರು ಗ್ರಾಮದ ಸವಿತಾ ಮತ್ತು ರಾಘವೇಂದ್ರ ಅವರ ಮಕ್ಕಳು.</p>.<p>ರಾಜ್ಯ ತಂಡ ಪ್ರತಿನಿಧಿಸಿದ್ದ ಶ್ರೇಯಾಗೆ ರಾಜ್ಯ ಸರ್ಕಾರದಿಂದ ₹ 10,000 ಕ್ರೀಡಾ ವಿದ್ಯಾರ್ಥಿವೇತನ ದೊರೆತಿತ್ತು. ಅದರೊಂದಿಗೆ ಶ್ರವಂತ್ ಕೂಡಿಟ್ಟ ₹ 5,000 ಸೇರಿಸಿ ಇಲ್ಲಿನ ನಾಡಕಚೇರಿಯಲ್ಲಿ ಭಾನುವಾರ ತಹಶೀಲ್ದಾರ್ ರಶ್ಮಿ ಹಾಲೇಶ್ ಅವರ ಮೂಲಕ ವಯನಾಡ್ ಸಂತ್ರಸ್ತರ ನಿಧಿಗೆ ದೇಣಿಗೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಿಪ್ಪನ್ಪೇಟೆ</strong>: ಕೇರಳದ ವಯನಾಡಿನಲ್ಲಿ ಭಾರಿ ಮಳೆಯಿಂದ ಸಂಭವಿಸಿದ ಭೂ ಕುಸಿತದಿಂದ ಹಾನಿಗೊಳಗಾದ ಸಂತ್ರಸ್ತರಿಗೆ ಇಲ್ಲಿನ ರಾಮಕೃಷ್ಣ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ, ಕಬಡ್ಡಿ ಪಟು ಆರ್. ಶ್ರೇಯಾ ಹಾಗೂ ಆಕೆಯ ಸೋದರ ಶ್ರವಂತ್ ₹ 15,000 ದೇಣಿಗೆ ನೀಡಿದ್ದಾರೆ.</p>.<p>ಈಚೆಗೆ ಹೈದರಾಬಾದ್ನಲ್ಲಿ ನಡೆದ 14 ವರ್ಷದೊಳಗಿನ ಬಾಲಕಿಯರ ಕಬಡ್ಡಿ ಪಂದ್ಯಾವಳಿಯಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದ್ದ ಶ್ರೇಯಾ ಹಾಗೂ ಇದೇ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಶ್ರವಂತ್ ಅವರು ಗ್ರಾಮದ ಸವಿತಾ ಮತ್ತು ರಾಘವೇಂದ್ರ ಅವರ ಮಕ್ಕಳು.</p>.<p>ರಾಜ್ಯ ತಂಡ ಪ್ರತಿನಿಧಿಸಿದ್ದ ಶ್ರೇಯಾಗೆ ರಾಜ್ಯ ಸರ್ಕಾರದಿಂದ ₹ 10,000 ಕ್ರೀಡಾ ವಿದ್ಯಾರ್ಥಿವೇತನ ದೊರೆತಿತ್ತು. ಅದರೊಂದಿಗೆ ಶ್ರವಂತ್ ಕೂಡಿಟ್ಟ ₹ 5,000 ಸೇರಿಸಿ ಇಲ್ಲಿನ ನಾಡಕಚೇರಿಯಲ್ಲಿ ಭಾನುವಾರ ತಹಶೀಲ್ದಾರ್ ರಶ್ಮಿ ಹಾಲೇಶ್ ಅವರ ಮೂಲಕ ವಯನಾಡ್ ಸಂತ್ರಸ್ತರ ನಿಧಿಗೆ ದೇಣಿಗೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>