<p><strong>ಶಿವಮೊಗ್ಗ:</strong> ಕೇಂದ್ರ ಸಚಿವ ಸಂಪುಟ ವಿಸ್ತರಣೆ ವೇಳೆ ರಾಜ್ಯಕ್ಕೆ ಎರಡು ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು.</p>.<p>ಸುರೇಶ್ ಅಂಗಡಿ ನಿಧನದಿಂದ ಒಂದು ಸ್ಥಾನ ತೆರವಾಗಿದೆ. ಅದರ ಜತೆಗೆ ರಾಜ್ಯಕ್ಕೆ ಮತ್ತೊಂದು ಸ್ಥಾನ ನೀಡುವಂತೆ ಮನವಿ ಮಾಡುತ್ತೇವೆ. ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಸಂಪುಟದಲ್ಲಿ ಸ್ಥಾನ ದೊರಕುವ ಕುರಿತು ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಪ್ರತಿಕ್ರಿಯಿಸಿದರು.</p>.<p>ಸಚಿವ ಸಿ.ಪಿ.ಯೋಗೀಶ್ವರ್ ದೆಹಲಿ ಭೇಟಿ ವಿಚಾರದಲ್ಲಿ ಯಾವುದೇ ವಿಶೇಷ ಇಲ್ಲ. ರಾಜ್ಯದ ಸಚಿವರು ದೆಹಲಿಗೆ ಹೋಗಬಾರದು ಎಂದು ಸಂವಿಧಾನದಲ್ಲಿ ಏನಾದರೂ ಬರೆದಿದ್ದಾರೆಯೇ? ಬಿಜೆಪಿ ನಾಯಕರು ದೆಹಲಿಗೆ ಹೋದರೆ ಏಕೆ ಪ್ರಶ್ನೆ ಮಾಡ್ತೀರಾ ಎಂದು ಮರು ಪ್ರಶ್ನಿಸಿದರು.</p>.<p>ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜಕೀಯ ನಿವೃತ್ತಿ ನಿವೃತ್ತಿ ಪಡೆಯುವುದಿಲ್ಲ ಎಂದು ಹೇಳಿರುವುದು ಸಂತಸದ ವಿಷಯ. ಒಂದು ವೇಳೆ ನಿವೃತ್ತರಾದರೂ ಕೊನೆಯವರೆಗೂ ಬಿಜೆಪಿಯಲ್ಲೇ ಇರುವುದಾಗಿ ಕೇಳಿದ್ದಾರಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಕೇಂದ್ರ ಸಚಿವ ಸಂಪುಟ ವಿಸ್ತರಣೆ ವೇಳೆ ರಾಜ್ಯಕ್ಕೆ ಎರಡು ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು.</p>.<p>ಸುರೇಶ್ ಅಂಗಡಿ ನಿಧನದಿಂದ ಒಂದು ಸ್ಥಾನ ತೆರವಾಗಿದೆ. ಅದರ ಜತೆಗೆ ರಾಜ್ಯಕ್ಕೆ ಮತ್ತೊಂದು ಸ್ಥಾನ ನೀಡುವಂತೆ ಮನವಿ ಮಾಡುತ್ತೇವೆ. ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಸಂಪುಟದಲ್ಲಿ ಸ್ಥಾನ ದೊರಕುವ ಕುರಿತು ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಪ್ರತಿಕ್ರಿಯಿಸಿದರು.</p>.<p>ಸಚಿವ ಸಿ.ಪಿ.ಯೋಗೀಶ್ವರ್ ದೆಹಲಿ ಭೇಟಿ ವಿಚಾರದಲ್ಲಿ ಯಾವುದೇ ವಿಶೇಷ ಇಲ್ಲ. ರಾಜ್ಯದ ಸಚಿವರು ದೆಹಲಿಗೆ ಹೋಗಬಾರದು ಎಂದು ಸಂವಿಧಾನದಲ್ಲಿ ಏನಾದರೂ ಬರೆದಿದ್ದಾರೆಯೇ? ಬಿಜೆಪಿ ನಾಯಕರು ದೆಹಲಿಗೆ ಹೋದರೆ ಏಕೆ ಪ್ರಶ್ನೆ ಮಾಡ್ತೀರಾ ಎಂದು ಮರು ಪ್ರಶ್ನಿಸಿದರು.</p>.<p>ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜಕೀಯ ನಿವೃತ್ತಿ ನಿವೃತ್ತಿ ಪಡೆಯುವುದಿಲ್ಲ ಎಂದು ಹೇಳಿರುವುದು ಸಂತಸದ ವಿಷಯ. ಒಂದು ವೇಳೆ ನಿವೃತ್ತರಾದರೂ ಕೊನೆಯವರೆಗೂ ಬಿಜೆಪಿಯಲ್ಲೇ ಇರುವುದಾಗಿ ಕೇಳಿದ್ದಾರಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>