‘ಪೌರಕಾರ್ಮಿಕರಿಗೆ ಸಂಬಳ ಹೆಚ್ಚಳ, ದಲಿತರ ಕಾಲೊನಿಗಳಿಗೆ ಮೂಲಸೌಲಭ್ಯಗಳು, ಸಮುದಾಯ ಭವನಗಳ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ. ಕಾಂಗ್ರೆಸ್ ಆಡಳಿತದಲ್ಲಿ ದಲಿತರು ಉನ್ನತ ಹುದ್ದೆಯಲ್ಲಿದ್ದರು. ಆದರೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಉನ್ನತ ಹುದ್ದೆಯಲ್ಲಿದ್ದ ದಲಿತರಿಗೆ ಕಿರುಕುಳ ನೀಡಿ ಹುದ್ದೆಯಿಂದ ಕೈ ಬಿಡಲಾಗಿದೆ. ಇದು ಬಿಜೆಪಿ ಸರ್ಕಾರದ ವೈಫಲ್ಯ’ ಎಂದು ಟೀಕಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಹಾನಗರ ಪಾಲಿಕೆ ಮಾಜಿ ಮೇಯರ್ ಮಂಗಳಾ ಅಣ್ಣಪ್ಪ, ಕಾಂಗ್ರೆಸ್ ಮುಖಂಡರಾದ ವಿಜಯ್, ನಿಖಿಲ್, ನರಸಿಂಹಮೂರ್ತಿ ಇದ್ದರು.