<p>ಶಿವಮೊಗ್ಗ: ಕೊರೊನಾ ಸೋಂಕು ನಿಯಂತ್ರಣ ಉದ್ದೇಶದಿಂದ ಸರ್ಕಾರ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಿದ್ದು, ಈ ಅವಧಿಯಲ್ಲಿ ಹೆಚ್ಚು ಜನ ಸೇರುವ ಸಂತೆ, ಜಾತ್ರೆಗೆ ಅವಕಾಶವಿಲ್ಲ, ಸಿಂಹಧಾಮಕ್ಕೂ ಅವಕಾಶ ಇಲ್ಲ, ಗ್ರಂಥಾಲಯವೂ ಬಾಗಿಲು ತೆಗೆಯಲ್ಲ.</p>.<p>‘ಕೋವಿಡ್-19 ರೂಪಾಂತರಿ ವೈರಸ್ ಓಮೈಕ್ರಾನ್ 3ನೇ ಅಲೆ ನಿಯಂತ್ರಿಸಲು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ನಡೆಯುವ ಎಲ್ಲಾ ಜಾತ್ರೆ ಹಾಗೂ ಸಂತೆಯನ್ನು ಮುಂದಿನ ಆದೇಶದವರೆಗೆ ನಿಷೇಧಿಸಲಾಗಿದೆ. ಈ ಸಂಬಂಧ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು’ಎಂದು ಮಹಾನಗರಪಾಲಿಕೆಆಯುಕ್ತ ಚಿದಾನಂದ ವಟಾರೆ ತಿಳಿಸಿದ್ದಾರೆ.</p>.<p>ವಾರಾಂತ್ಯದಲ್ಲಿ ಹುಲಿ-ಸಿಂಹಧಾಮ ವೀಕ್ಷಣೆ ಇಲ್ಲ: ಕೊರೊನಾ ಸೋಂಕು ನಿಯಂತ್ರಣ ಉದ್ದೇಶದಿಂದ ವಾರಾಂತ್ಯದಲ್ಲಿ ಕರ್ಫ್ಯೂ ಜಾರಿಗೊಳಿಸಿದ್ದು, ಜನವರಿ 8 ಮತ್ತು 9, ಜನವರಿ 15 ಮತ್ತು 16 ರಂದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮ ಪ್ರವಾಸಿಗರ ವೀಕ್ಷಣೆಗೆ<br />ಲಭ್ಯವಿರುವುದಿಲ್ಲ. ಪ್ರತಿಯಾಗಿ ಜ.11 ಮತ್ತು 18ರ ಮಂಗಳವಾರ ಪ್ರವಾಸಿಗರ ವೀಕ್ಷಣೆಗೆ ಲಭ್ಯವಿರುತ್ತದೆ. ಪ್ರವಾಸಿಗರು ಕೋವಿಡ್ ನಿಯಮಾವಳಿಗಳನ್ನು ಅನುಸರಿಸಿ ಸಹಕರಿಸಬೇಕೆಂದು ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.</p>.<p class="Subhead">ಗ್ರಂಥಾಲಯ ಸೇವೆ ಸ್ಥಗಿತ: ವಾರಾಂತ್ಯ ಕರ್ಫ್ಯೂ ನಿಮಿತ್ತ ಶನಿವಾರ ಹಾಗೂ ಭಾನುವಾರ ಗ್ರಂಥಾಲಯಗಳ ಸೇವೆಯನ್ನು ಸ್ಥಗಿತಗೊಳಿಸಿ, ಮುಂದಿನ ಆದೇಶದವರೆಗೆ ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಸಾರ್ವಜನಿಕರಿಗೆ ಗ್ರಂಥಾಲಯ ಸೇವೆಯನ್ನು ಒದಗಿಸಲಾಗುವುದು ಎಂದು ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ಕೊರೊನಾ ಸೋಂಕು ನಿಯಂತ್ರಣ ಉದ್ದೇಶದಿಂದ ಸರ್ಕಾರ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಿದ್ದು, ಈ ಅವಧಿಯಲ್ಲಿ ಹೆಚ್ಚು ಜನ ಸೇರುವ ಸಂತೆ, ಜಾತ್ರೆಗೆ ಅವಕಾಶವಿಲ್ಲ, ಸಿಂಹಧಾಮಕ್ಕೂ ಅವಕಾಶ ಇಲ್ಲ, ಗ್ರಂಥಾಲಯವೂ ಬಾಗಿಲು ತೆಗೆಯಲ್ಲ.</p>.<p>‘ಕೋವಿಡ್-19 ರೂಪಾಂತರಿ ವೈರಸ್ ಓಮೈಕ್ರಾನ್ 3ನೇ ಅಲೆ ನಿಯಂತ್ರಿಸಲು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ನಡೆಯುವ ಎಲ್ಲಾ ಜಾತ್ರೆ ಹಾಗೂ ಸಂತೆಯನ್ನು ಮುಂದಿನ ಆದೇಶದವರೆಗೆ ನಿಷೇಧಿಸಲಾಗಿದೆ. ಈ ಸಂಬಂಧ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು’ಎಂದು ಮಹಾನಗರಪಾಲಿಕೆಆಯುಕ್ತ ಚಿದಾನಂದ ವಟಾರೆ ತಿಳಿಸಿದ್ದಾರೆ.</p>.<p>ವಾರಾಂತ್ಯದಲ್ಲಿ ಹುಲಿ-ಸಿಂಹಧಾಮ ವೀಕ್ಷಣೆ ಇಲ್ಲ: ಕೊರೊನಾ ಸೋಂಕು ನಿಯಂತ್ರಣ ಉದ್ದೇಶದಿಂದ ವಾರಾಂತ್ಯದಲ್ಲಿ ಕರ್ಫ್ಯೂ ಜಾರಿಗೊಳಿಸಿದ್ದು, ಜನವರಿ 8 ಮತ್ತು 9, ಜನವರಿ 15 ಮತ್ತು 16 ರಂದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮ ಪ್ರವಾಸಿಗರ ವೀಕ್ಷಣೆಗೆ<br />ಲಭ್ಯವಿರುವುದಿಲ್ಲ. ಪ್ರತಿಯಾಗಿ ಜ.11 ಮತ್ತು 18ರ ಮಂಗಳವಾರ ಪ್ರವಾಸಿಗರ ವೀಕ್ಷಣೆಗೆ ಲಭ್ಯವಿರುತ್ತದೆ. ಪ್ರವಾಸಿಗರು ಕೋವಿಡ್ ನಿಯಮಾವಳಿಗಳನ್ನು ಅನುಸರಿಸಿ ಸಹಕರಿಸಬೇಕೆಂದು ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.</p>.<p class="Subhead">ಗ್ರಂಥಾಲಯ ಸೇವೆ ಸ್ಥಗಿತ: ವಾರಾಂತ್ಯ ಕರ್ಫ್ಯೂ ನಿಮಿತ್ತ ಶನಿವಾರ ಹಾಗೂ ಭಾನುವಾರ ಗ್ರಂಥಾಲಯಗಳ ಸೇವೆಯನ್ನು ಸ್ಥಗಿತಗೊಳಿಸಿ, ಮುಂದಿನ ಆದೇಶದವರೆಗೆ ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಸಾರ್ವಜನಿಕರಿಗೆ ಗ್ರಂಥಾಲಯ ಸೇವೆಯನ್ನು ಒದಗಿಸಲಾಗುವುದು ಎಂದು ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>