ನಿರ್ಲಕ್ಷ್ಯ: ಮಾ.29ರಿಂದ ಭದ್ರಾನದಿಗೆ ಹೆಚ್ಚಿನ ನೀರು ಹರಿಸುತ್ತಿವುದರಿಂದ ನೀರಿನ ಪ್ರಮಾಣ ಹೆಚ್ಚಾಗಿದೆ. ಆದರೆ, ಯುಗಾದಿ ಅಮಾವಾಸ್ಯೆಯ ಪುಣ್ಯಸ್ನಾನಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿಗೆ ಆಗಮಿಸಲಿದ್ದಾರೆ. ಆದರೂ ಅಹಿತಕರ ಘಟನೆ ನಡೆಯದಂತೆ ಗ್ರಾಮಾಡಳಿತ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಪೊಲೀಸರನ್ನೂ ನಿಯೋಜಿಸಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.