‘ನಾನು ಬೇರೆ ಪಕ್ಷದಲ್ಲಿ ಇದ್ದಾಗ ಬೆಳಗಿನ ಜಾವ 5.30ಕ್ಕೆ ಯಡಿಯೂರಪ್ಪ ಅವರನ್ನು ಭೇಟಿ ಆಗಿದ್ದೆ. ನನ್ನ ಜೊತೆಗೆ ಬಂದರೆ ಕೆ.ಆರ್. ಪೇಟೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುತ್ತೇನೆ. ನಿನ್ನನ್ನು ಮಂತ್ರಿ ಮಾಡುತ್ತೇನೆ ಎಂದು ಮಾತು ನೀಡಿದ್ದರು. ಅದರಂತೆ ಕೆ.ಆರ್. ಪೇಟೆ ಕ್ಷೇತ್ರಕ್ಕೆ ₹ 1,400 ಕೋಟಿ ಅನುದಾನ ನೀಡಿ ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ’ ಎಂದು ಹೇಳಿದರು.