ಅ. 2ರಂದು ಕುವೆಂಪು ರಂಗಮಂದಿರದಲ್ಲಿ ಸಪ್ತಾಹದ ಉದ್ಘಾಟಿಸಲಾಗುವುದು. ಸಪ್ತಾಹದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಇದೇ ವೇಳೆ ಕಾಲ್ನಡಿಗೆ ಹಾಗೂ ಸೈಕಲ್ ಜಾಥಾಗೆ ಚಾಲನೆ ನೀಡಲಾಗುವುದು. 2ರಂದು ಸ್ಥಳದಲ್ಲಿಯೇ ಚಿತ್ರ ಬಿಡಿಸುವುದು, 3ರಂದು ಆಶುಭಾಷಣ ಸ್ಪರ್ಧೆ, 4ರಂದು ಪ್ರಬಂಧ ಸ್ಪರ್ಧೆ, 5ರಂದು ಭಾಷಣ ಸ್ಪರ್ಧೆ, 6ರಂದು ಛಾಯಾಚಿತ್ರ ಪ್ರದರ್ಶನ ಹಾಗೂ 7ರಂದು ಕ್ವಿಜ್ ಸ್ಪರ್ಧೆಗಳು ಇರುತ್ತವೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಚಂದ್ರಶೇಖರ್ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.