<p><strong>ತೀರ್ಥಹಳ್ಳಿ</strong>: ಕಳಪೆ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ಎಂದೂ ಬೆಂಬಲ ನೀಡಿಲ್ಲ. ನೂತನ ಸರ್ಕಾರಿ ಕಟ್ಟಡ ಸೋರಿಕೆ ಕುರಿತು ದೂರುಗಳು ಬಂದಿದ್ದು ತಾಂತ್ರಿಕ ವರದಿ ಪಡೆದು ಕ್ರಮ ಕೈಗೊಳ್ಳುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.</p>.<p>ಪ್ರವಾಸಿ ಮಂದಿರದಲ್ಲಿ ಭಾನುವಾರ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿದ ಅವರು, ’ಭ್ರಷ್ಟಾಚಾರ ಆರಂಭ ಆಗುವುದೇ ಕಳಪೆ ಕಾಮಗಾರಿಗಳಿಂದ. ಮೇಕಪ್ ಎಷ್ಟೇ ಹಚ್ಚಿದ್ದರೂ ಸಂಜೆಗೆ ಇಳಿದು ಹೋಗುತ್ತದೆ. ಹಾಗೆ ಕಟ್ಟಡಗಳು ಕೂಡ ಅದೇ ರೀತಿ ವಾಸ್ತವದ ಸ್ಥಿತಿಗೆ ಬಂದೆ ಬರುತ್ತವೆ’ ಎಂದು ವಿವರಿಸಿದರು.</p>.<p>ಬಿಜೆಪಿ ಸರ್ಕಾರ ಬಜೆಟ್ನಲ್ಲಿ ಘೋಷಿಸಿದ ₹1.5 ಲಕ್ಷ ಕೋಟಿ ಅಭಿವೃದ್ಧಿ ಕಾಮಗಾರಿಗೆ ಹಣಕಾಸು ಅನುಮೋದನೆ ನೀಡದೆ ಕಾರ್ಯ ಯೋಜನೆ ರೂಪಿಸಿತ್ತು. ಅವರ ಸಾಲವನ್ನು ನಾವು ತೀರಿಸುತ್ತಿದ್ದೇವೆ. ಗ್ಯಾರಂಟಿ ಯೋಜನೆ ಜೊತೆಗೆ ₹1.43 ಲಕ್ಷ ಕೋಟಿ ಅಭಿವೃದ್ಧಿ ಯೋಜನೆಗೆ ಹಣ ಮೀಸಲಿಟ್ಟಿದ್ದೇವೆ ಎಂದರು.</p>.<p>ಹಿಂದಿನ ಸರ್ಕಾರದ ಬೃಹತ್ ಯೋಜನೆಯಲ್ಲಿ ನಡೆದಿರುವ ಅಕ್ರಮ, ಕಳಪೆ ತನಿಖೆಗೆ ಮುಖ್ಯಮಂತ್ರಿಗಳೇ ಆದೇಶ ನೀಡಿದ್ದಾರೆ. ಕಳಪೆ ಕಾಮಗಾರಿ ಒಪ್ಪಿಕೊಳ್ಳುವ ಅಗತ್ಯ ನಮಗೆ ಬಂದಿಲ್ಲ. ಶಾಸಕ ಆರಗ ಜ್ಞಾನೇಂದ್ರ ಸಾರ್ವಜನಿಕರ ತೆರಿಗೆ ಹಣ ಪೋಲಾಗದಂತೆ ಜಾಗೃತಿ ವಹಿಸಲಿ ಎಂದು ಹೇಳಿದರು.</p>.<p>ಎಂಎಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆಸ್ತೂರು ಮಂಜುನಾಥ, ಗ್ರಾಮಾಂತರ ಅಧ್ಯಕ್ಷ ಮುಡುಬ ರಾಘವೇಂದ್ರ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಶಚೀಂದ್ರ ಹೆಗ್ಡೆ, ಮುಖಂಡರಾದ ಟಿ.ಎಲ್. ಸುಂದರೇಶ್, ರೆಹಮತ್ ಉಲ್ಲಾ ಅಸಾದಿ, ಅಮರನಾಥ ಶೆಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೀರ್ಥಹಳ್ಳಿ</strong>: ಕಳಪೆ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ಎಂದೂ ಬೆಂಬಲ ನೀಡಿಲ್ಲ. ನೂತನ ಸರ್ಕಾರಿ ಕಟ್ಟಡ ಸೋರಿಕೆ ಕುರಿತು ದೂರುಗಳು ಬಂದಿದ್ದು ತಾಂತ್ರಿಕ ವರದಿ ಪಡೆದು ಕ್ರಮ ಕೈಗೊಳ್ಳುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.</p>.<p>ಪ್ರವಾಸಿ ಮಂದಿರದಲ್ಲಿ ಭಾನುವಾರ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿದ ಅವರು, ’ಭ್ರಷ್ಟಾಚಾರ ಆರಂಭ ಆಗುವುದೇ ಕಳಪೆ ಕಾಮಗಾರಿಗಳಿಂದ. ಮೇಕಪ್ ಎಷ್ಟೇ ಹಚ್ಚಿದ್ದರೂ ಸಂಜೆಗೆ ಇಳಿದು ಹೋಗುತ್ತದೆ. ಹಾಗೆ ಕಟ್ಟಡಗಳು ಕೂಡ ಅದೇ ರೀತಿ ವಾಸ್ತವದ ಸ್ಥಿತಿಗೆ ಬಂದೆ ಬರುತ್ತವೆ’ ಎಂದು ವಿವರಿಸಿದರು.</p>.<p>ಬಿಜೆಪಿ ಸರ್ಕಾರ ಬಜೆಟ್ನಲ್ಲಿ ಘೋಷಿಸಿದ ₹1.5 ಲಕ್ಷ ಕೋಟಿ ಅಭಿವೃದ್ಧಿ ಕಾಮಗಾರಿಗೆ ಹಣಕಾಸು ಅನುಮೋದನೆ ನೀಡದೆ ಕಾರ್ಯ ಯೋಜನೆ ರೂಪಿಸಿತ್ತು. ಅವರ ಸಾಲವನ್ನು ನಾವು ತೀರಿಸುತ್ತಿದ್ದೇವೆ. ಗ್ಯಾರಂಟಿ ಯೋಜನೆ ಜೊತೆಗೆ ₹1.43 ಲಕ್ಷ ಕೋಟಿ ಅಭಿವೃದ್ಧಿ ಯೋಜನೆಗೆ ಹಣ ಮೀಸಲಿಟ್ಟಿದ್ದೇವೆ ಎಂದರು.</p>.<p>ಹಿಂದಿನ ಸರ್ಕಾರದ ಬೃಹತ್ ಯೋಜನೆಯಲ್ಲಿ ನಡೆದಿರುವ ಅಕ್ರಮ, ಕಳಪೆ ತನಿಖೆಗೆ ಮುಖ್ಯಮಂತ್ರಿಗಳೇ ಆದೇಶ ನೀಡಿದ್ದಾರೆ. ಕಳಪೆ ಕಾಮಗಾರಿ ಒಪ್ಪಿಕೊಳ್ಳುವ ಅಗತ್ಯ ನಮಗೆ ಬಂದಿಲ್ಲ. ಶಾಸಕ ಆರಗ ಜ್ಞಾನೇಂದ್ರ ಸಾರ್ವಜನಿಕರ ತೆರಿಗೆ ಹಣ ಪೋಲಾಗದಂತೆ ಜಾಗೃತಿ ವಹಿಸಲಿ ಎಂದು ಹೇಳಿದರು.</p>.<p>ಎಂಎಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆಸ್ತೂರು ಮಂಜುನಾಥ, ಗ್ರಾಮಾಂತರ ಅಧ್ಯಕ್ಷ ಮುಡುಬ ರಾಘವೇಂದ್ರ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಶಚೀಂದ್ರ ಹೆಗ್ಡೆ, ಮುಖಂಡರಾದ ಟಿ.ಎಲ್. ಸುಂದರೇಶ್, ರೆಹಮತ್ ಉಲ್ಲಾ ಅಸಾದಿ, ಅಮರನಾಥ ಶೆಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>