ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಜನೆ ಪೂರ್ಣಗೊಳ್ಳದೇ ಚಿತ್ರದುರ್ಗಕ್ಕೆ ನೀರು: ರೈತ ಸಂಘ ಆಕ್ಷೇಪ

Last Updated 1 ಸೆಪ್ಟೆಂಬರ್ 2020, 14:30 IST
ಅಕ್ಷರ ಗಾತ್ರ

ಶಿವಮೊಗ್ಗ: ತುಂಗಾದಿಂದ ಭದ್ರಾ ಜಲಾಶಯಕ್ಕೆ ನೀರು ಹರಿಸುವ ನಾಲಾ ಕಾಮಗಾರಿ ಪೂರ್ಣಗೊಳ್ಳದೆ ಚಿತ್ರದುರ್ಗಕ್ಕೆ ನೀರು ಹರಿಸಬಾರದುಎಂದು ರೈತ ಸಂಘದ ಮುಖಂಡ ಕೆ.ಟಿ.ಗಂಗಾಧರ್ಆಗ್ರಹಿಸಿದರು.

ಚಿತ್ರದುರ್ಗದ ವಾಣಿವಿಲಾಸ ಸಾಗರಕ್ಕೆ ಭದ್ರಾ ಜಲಾಶಯದಿಂದ ಪ್ರತಿ ವರ್ಷ 21.5 ಟಿಎಂಸಿ ಅಡಿ ನೀರು ಹರಿಸುವ ಯೋಜನೆ ರೂಪಿಸಲಾಗಿತ್ತು. ಅದಕ್ಕಾಗಿತುಂಗಾ ಜಲಾಶಯದಿಂದ 15.5 ಟಿಎಂಸಿ ಅಡಿ ನೀರುಭದ್ರಾ ಜಲಾಶಯಕ್ಕೆ ಹರಿಸಲು ನಿರ್ಧರಿಸಲಾಗಿತ್ತು.ಈ ಕಾಮಗಾರಿ ಇನ್ನೂಪೂರ್ಣಗೊಂಡಿಲ್ಲ.ಯಂತ್ರಗಳನ್ನೂ ಅಳವಡಿಸಿಲ್ಲ. ಇದೇ ವೇಗದಲ್ಲಿ ಕಾಮಗಾರಿ ನಡೆದರೆ ಎರಡು ವರ್ಷಗಳು ಬೇಕಾಗುತ್ತದೆ. ಈ ಕಾಮಗಾರಿ ಪೂರ್ಣಗೊಳ್ಳದೇ ಚಿತ್ರದುರ್ಗಕ್ಕೆ ನೀರು ಹರಿಸಿದರೆ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ತೊಂದರೆಯಾಗುತ್ತದೆಮಂಗಳವಾರ ಸುದ್ದಿಗೋಷ್ಠಿಯಲ್ಲಿಕಳವಳ ವ್ಯಕ್ತಪಡಿಸಿದರು.

ತುಂಗಾ ಜಲಾಶಯದಿಂದ ಈ ವರ್ಷ ಲಕ್ಷಾಂತರ ಕ್ಯುಸೆಕ್ ನೀರು ವ್ಯರ್ಥವಾಗಿ ಹರಿದುಹೋಗಿದೆ. ಭದ್ರಾ ಜಲಾಶಯಕ್ಕೆ ನೀರು ಹರಿಸುವ ಕಾಮಗಾರಿ ತ್ವರಿತವಾಗಿ ಕೈಗೊಂಡರೆನೀರು ವ್ಯರ್ಥವಾಗುವುದನ್ನು ತಪ್ಪಿಸಬಹುದಿತ್ತು. ಕಾಮಗಾರಿ ಪೂರ್ಣಗೊಳಿಸಲು, ನಂತರವೇ ಚಿತ್ರದುರ್ಗಕ್ಕೆ ನೀರು ಹರಿಸಲುಮುಖ್ಯಮಂತ್ರಿಗೂ ಪತ್ರ ಬರೆಯಲಾಗಿದೆ ಎಂದರು.

ಈ ವರ್ಷ ಭದ್ರಾ ಜಲಾಶಯದಲ್ಲಿ 67.650 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಇದರಲ್ಲಿ 13.832 ಟಿಎಂಸಿ ಅಡಿ ನೀರು ಡೆಡ್ ಸ್ಟೊರೇಜ್‍. 8 ಟಿಎಂಸಿ ಅಡಿ ನೀರು ಚಿಕ್ಕಮಗಳೂರು, ದಾವಣಗೆರೆ, ಹಾವೇರಿ, ಗದಗ ಜಿಲ್ಲೆಗಳ ಕುಡಿಯುವ ನೀರಿಗೆ ಬಳಸಿಕೊಳ್ಳಲಾಗುತ್ತದೆ. ಆಗ ಜಲಾಶಯದಲ್ಲಿ 46ಟಿಎಂಸಿ ಅಡಿ ನೀರು ಮಾತ್ರ ಉಳಿಯುತ್ತದೆ. ಇದರಲ್ಲಿ 6.5 ಟಿಎಂಸಿ ನೀರನ್ನು ವಾಣಿ ವಿಲಾಸ ಸಾಗರಕ್ಕೆ ಹರಿಸಿದರೆ ಉಳಿಯುವುದು39.5 ಟಿಎಂಸಿ ನೀರು ಮಾತ್ರ. ಇದರಿಂದ ಅಚ್ಚುಕಟ್ಟು ಪ್ರದೇಶದ ಬೇಸಿಗೆ ಬೆಳೆಗಳಿಗೆ ನೀರಿನ ಅಭಾವವಾಗುತ್ತದೆ ಎಂದರು.

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಅನುಷ್ಠಾನಕ್ಕೆ ತೋರುತ್ತಿರುವ ಆಸಕ್ತಿ ತುಂಗಾ ಜಲಾಶದಿಂದ ಭದ್ರಾ ಜಲಾಶಯಕ್ಕೆ ನೀರು ಹರಿಸುವ ಕಾಮಗಾರಿಯ ಬಗ್ಗೆಯೂ ತೋರಿಸಿದರೆ ರೈತರಿಗೆ ಹೆಚ್ಚಿನ ಅನುಕೂಲವಾಗಿಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ವೀರೇಶ್, ಕೆ.ಆರ್.ಮಂಜುನಾಥ್, ಸಣ್ಣರಂಗಪ್ಪ, ಪರಮೇಶ್ವರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT