ಈ ವರ್ಷ ಭದ್ರಾ ಜಲಾಶಯದಲ್ಲಿ 67.650 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಇದರಲ್ಲಿ 13.832 ಟಿಎಂಸಿ ಅಡಿ ನೀರು ಡೆಡ್ ಸ್ಟೊರೇಜ್. 8 ಟಿಎಂಸಿ ಅಡಿ ನೀರು ಚಿಕ್ಕಮಗಳೂರು, ದಾವಣಗೆರೆ, ಹಾವೇರಿ, ಗದಗ ಜಿಲ್ಲೆಗಳ ಕುಡಿಯುವ ನೀರಿಗೆ ಬಳಸಿಕೊಳ್ಳಲಾಗುತ್ತದೆ. ಆಗ ಜಲಾಶಯದಲ್ಲಿ 46ಟಿಎಂಸಿ ಅಡಿ ನೀರು ಮಾತ್ರ ಉಳಿಯುತ್ತದೆ. ಇದರಲ್ಲಿ 6.5 ಟಿಎಂಸಿ ನೀರನ್ನು ವಾಣಿ ವಿಲಾಸ ಸಾಗರಕ್ಕೆ ಹರಿಸಿದರೆ ಉಳಿಯುವುದು39.5 ಟಿಎಂಸಿ ನೀರು ಮಾತ್ರ. ಇದರಿಂದ ಅಚ್ಚುಕಟ್ಟು ಪ್ರದೇಶದ ಬೇಸಿಗೆ ಬೆಳೆಗಳಿಗೆ ನೀರಿನ ಅಭಾವವಾಗುತ್ತದೆ ಎಂದರು.