ಮೊದಲಿಗೆ ಎಣ್ಣೆಚೆಲ್ಲಿರಬಹುದು ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ ನಂತರ ಮರದಿಂದ ದ್ರವ ಚಿಮ್ಮುತ್ತಿರುವುದು ಗೊತ್ತಾಗಿದೆ. ಹೆಚ್ಚಿನ ಸಂಖ್ಯೆಯ ವಾಹನ ಸವಾರರು ಜಾರಿಬಿದ್ದ ಕಾರಣ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪಾಲಿಕೆ ಸಿಬ್ಬಂದಿ ರಸ್ತೆಯನ್ನು ಸ್ವಚ್ಛಗೊಳಿಸಿದರು. ಸಂಚಾರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದರು.