ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ಮೇಲೆ ಮರದ ದ್ರವ: ನಿಯಂತ್ರಣ ತಪ್ಪಿದ ಬೈಕ್ ಸವಾರರು

Last Updated 20 ಫೆಬ್ರುವರಿ 2021, 4:49 IST
ಅಕ್ಷರ ಗಾತ್ರ

ಶಿವಮೊಗ್ಗ: ನಗರದ ನಂಜಪ್ಪ ಆಸ್ಪತ್ರೆ ಎದುರು ಕುವೆಂಪು ರಸ್ತೆಯಲ್ಲಿ ಶುಕ್ರವಾರ ಹಲವು ದ್ವಿಚಕ್ರ ವಾಹನಗಳು ಸ್ಕಿಡ್ ಆಗಿ ಬಿದ್ದಿವೆ.

ನಗರದಲ್ಲಿ ಬೆಳಿಗ್ಗೆ ಬಿದ್ದ ತುಂತುರು ಮಳೆ ಬಿದ್ದಿತ್ತು. ಇದರಿಂದ ಮಳೆ ನೀರು ಸೇರಿಕೊಂಡು ನಂಜಪ್ಪ ಆಸ್ಪತ್ರೆ ಎದುರಿನ ಮರದಿಂದ ಜೆಲ್ ರೂಪದ ದ್ರವ ರಸ್ತೆ ಮೇಲೆ ಬಿದ್ದಿತ್ತು. ಹೀಗಾಗಿ ಅನೇಕ ಬೈಕ್‍ಗಳು ಸವಾರರ ನಿಯಂತ್ರಣಕ್ಕೆ ಸಿಗದೆ ಜಾರಿ ಬಿದ್ದಿವೆ.

ಮೊದಲಿಗೆ ಎಣ್ಣೆಚೆಲ್ಲಿರಬಹುದು ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ ನಂತರ ಮರದಿಂದ ದ್ರವ ಚಿಮ್ಮುತ್ತಿರುವುದು ಗೊತ್ತಾಗಿದೆ. ಹೆಚ್ಚಿನ ಸಂಖ್ಯೆಯ ವಾಹನ ಸವಾರರು ಜಾರಿಬಿದ್ದ ಕಾರಣ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪಾಲಿಕೆ ಸಿಬ್ಬಂದಿ ರಸ್ತೆಯನ್ನು ಸ್ವಚ್ಛಗೊಳಿಸಿದರು. ಸಂಚಾರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದರು.

ದ್ರವದಿಂದ ವಾಹನ ಸವಾರರಿಗೆ ತೊಂದರೆಯಾಗಿದ್ದರಿಂದ ಬ್ಯಾರಿಕೇಡ್‍ಗಳನ್ನು ಹಾಕಿ ವೇಗ ನಿಯಂತ್ರಿಸುವ ಎಚ್ಚರಿಕೆ ನೀಡಲಾಗುತ್ತಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT